ಉಡುಪಿ | ಕಡಲ ತೀರದ ದಲಿತ ಕುಟುಂಬಗಳ ತೆರವು ಮಾಡದಂತೆ ಜಿಲ್ಲಾಧಿಕಾರಿಗೆ ಮನವಿ

Date:

  • ದಶಕಗಳಿಂದ ವಾಸವಿರುವ ಬಡ ದಲಿತ ಕುಟುಂಬಗಳಿಗೆ ನೋಟಿಸ್
  • ಬಂದರು ಸುತ್ತುಮುತ್ತ ಅತಿಕ್ರಮಣ ಮಾಡಿಕೊಂಡುರೂ ಕ್ರಮವಿಲ್ಲ

ಉಡುಪಿ ಜಿಲ್ಲೆಯ ಮಲ್ಪೆ ಕಡಲ ತೀರದ ಪೂರ್ವ ಭಾಗದ ತೀರ ಪ್ರದೇಶದಲ್ಲಿರುವ ಹಲವು ಬಡ ದಲಿತ ಕುಟುಂಬಗಳ ಮನೆ ತರವುಗೊಳಿಸಲು ಮಲ್ಪೆ ಅಭಿವೃದ್ಧಿ ಸಮಿತಿಯ ಹೆಸರಿನಲ್ಲಿ ಉಡುಪಿ ನಗರಸಭೆಯ ಪೌರಾಯುಕ್ತರು ನೀಡಿರುವ ನೊಟೀಸ್‌ ವಿರೋಧಿಸಿ ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

“ಕಳೆದ ಹಲವು ದಶಕಗಳಿಂದ ಸಮುದ್ರ ತೀರ ಪ್ರದೇಶದಲ್ಲಿ ಮನೆ ನಿರ್ಮಿಸಿಕೊಂಡು ವಾಸವಾಗಿರುವ ದಲಿತ ಕುಟುಂಬಗಳಿಗೆ ಏಕಾಏಕಿ ಸಿಆರ್‌ಝಡ್ ನಿಯಮ ಮತ್ತು ಮುನ್ಸಿಪಾಲ್ ಆಕ್ಟ್ ಅನ್ವಯ ಕಾನೂನು ಬಾಹಿರ ಮನೆ ಎಂದು ನೊಟೀಸು ಜಾರಿಗೊಳಿಸಲಾಗಿದೆ. ಆದರೆ, ಇದೇ ಕರಾವಳಿ ಬಂದರು ಪ್ರದೇಶದ ಸುತ್ತುಮುತ್ತ ಅತಿಕ್ರಮಣ ಮಾಡಿಕೊಂಡು ದೊಡ್ಡ ದೊಡ್ಡ ಮನೆ, ರೆಸಾರ್ಟ್, ಅಂಗಡಿ ಇತ್ಯಾದಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಲಾಗಿಲ್ಲ. ಕೇವಲ ದಲಿತ ಕುಟುಂಬದ ಮೇಲೆ ನೊಟೀಸ್ ನೀಡಿ ದೌರ್ಜನ್ಯ ನಡೆಸಲಾಗುತ್ತಿದೆ” ಎಂದು ಜನಪರ ಹೋರಾಟಗಾರ ಜಯನ್ ಮಲ್ಪೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಇಲ್ಲಿ ವಾಸವಿರುವ ದಲಿತ ಕುಟುಂಬಗಳು ಮನೆ ನಂಬರ್‌, ಆಧಾರ್ ಕಾರ್ಡ್, ರೇಶನ್ ಕಾರ್ಡ್, ವಿದ್ಯುತ್‌ ಸಂಪರ್ಕ ಎಲ್ಲ ಕಾನೂನುಬದ್ಧವಾಗಿ ಪಡೆದಿದ್ದರೂ, ಅನದಿಕೃತ ಎಂಬ ನಿಯಮದಡಿ ಈ ಬಡ ದಲಿತ ಕುಟುಂಬಗಳನ್ನು ತೆರವುಗೊಳಿಸುವ ನೊಟೀಸ್ ನೀಡಿ ಭಯ ಹುಟ್ಟಿಸಲಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಸೂದ್, ನೆಟ್ಟಾರು, ಫಾಸಿಲ್ ಕುಟುಂಬಕ್ಕೆ ಸಾಮಾಜಿಕ ನ್ಯಾಯ ಒದಗಿಸಿ; ಸರ್ಕಾರಕ್ಕೆ ಶಾಹಿದ್ ತೆಕ್ಕಿಲ್ ಮನವಿ

“ಜಿಲ್ಲಾಧಿಕಾರಿ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಬಡ ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸಬಾರದು” ಎಂದು ಒತ್ತಾಯಿಸಿದರು.

ಈ ವೇಳೆ ಜನಪರ ಹೋರಾಟಗಾರ ಜಯನ್ ಮಲ್ಪೆ, ಅಂಬೇಡ್ಕರ್ ಯುವಸೇನೆಯ ಜಿಲ್ಲಾ ಅಧ್ಯಕ್ಷ ಹರೀಶ್ ಸಾಲ್ಯಾನ್, ಮುಖಂಡರಾದ ಗಣೇಶ್ ನೆರ್ಗಿ, ಸಂತೋಷ್ ಕಪ್ಪೆಟ್ಟು, ಕೃಷ್ಣ ಶ್ರೀಯಾನ್ ಮಲ್ಪೆ, ಗುಣವಂತ ತೊಟ್ಟಂ, ಪ್ರಸಾದ್, ಗೀತಾ, ಸಂಕಿ, ಜಲಜ, ಲಲಿಗ್ಫಿ, ಸುಂದರಿ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...