ಬೀದರ್‌ | ಅಂಬಿಗರ ಚೌಡಯ್ಯನವರ ಸಾಮಾಜಿಕ ಪ್ರಜ್ಞೆ ಸಮಾಜಕ್ಕೆ ಪ್ರಸ್ತುತ

Date:

ಬಸವಾದಿ ಕಾಲಘಟ್ಟದ ಶರಣ ಅಂಬಿಗರ ಚೌಡಯ್ಯನವರು ಸಮಾಜದಲ್ಲಿನ ಅನಾಚಾರ, ಅತ್ಯಾಚಾರ, ಡಂಭಾಚಾರವನ್ನು ನಿರ್ಭಯವಾಗಿ ಟೀಕಿಸಿ ವಚನ ಪರಂಪರೆಯ ಕೆಚ್ಚೆದೆ ಮೆರೆದವರು ಎಂದು ದಾಸ ಸಾಹಿತ್ಯ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಬಿ.ಎಂ ಅಮರವಾಡಿ ಅಭಿಪ್ರಾಯಪಟ್ಟರು.

ಔರಾದ ತಾಲೂಕು ಆಡಳಿತ ವತಿಯಿಂದ ಭಾನುವಾರ ತಹಸೀಲ್ ಸಭಾಂಗಣದಲ್ಲಿ ನಡೆದ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿಯಲ್ಲಿ ಮಾತನಾಡಿದ ಅವರು, “ನೇರ ನಡೆ ನುಡಿಯ, ನ್ಯಾಯ ನಿಷ್ಠುರ ಶರಣರಾಗಿ ಶಿವಾನುಭವ ಪರವಾದ ವಚನಗಳು ಬರೆದಿದ್ದರೂ ಸಹ ಸಮಕಾಲೀನ ಸಾಮಾಜಿಕ ವಿಡಂಬನೆ ಮತ್ತು ಕಳವಳ ಅವರ ವಚನಗಳಲ್ಲಿ ಕಾಣುತ್ತದೆ” ಎಂದರು.

“ಪ್ರಸ್ತುತ ಕಾಲದಲ್ಲಿಯೂ ತಾಂಡವಾಡುತ್ತಿರುವ ಮೌಢ್ಯತೆ, ಜಾತಿಯತೆ ವಿರುದ್ಧವಾಗಿ ಹೋರಾಡಲು ಅವರ ವಚನಗಳು ನಮಗೆ ಬಹುಮುಖ್ಯ ಪ್ರೇರಕ ಶಕ್ತಿಯಾಗಿ ನಿಲ್ಲುತ್ತವೆ. ಅವರ ವಚನಗಳಲ್ಲಿ ಆಳವಾದ ಅನುಭವ ಮತ್ತು ಸಾಮಾಜಿಕ ಪ್ರಜ್ಞೆ ಅಡಗಿದ್ದು, ವೈಚಾರಿಕ ಬದುಕಿಗೆ ದಾರಿದೀಪವಾಗಿವೆ” ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವ ಚಿಂತಕ, ಶಿಕ್ಷಕ ಅನೀಲಕುಮಾರ ಮಚ್ಕೂರಿ ಮಾತನಾಡಿ, “ಶರಣ ಅಂಬಿಗರ ಚೌಡಯ್ಯ ಅವರ ವಚನ ಸಂದೇಶಗಳು ನಾವು ಅಳವಡಿಸಿಕೊಳ್ಳಬೇಕು” ಎಂದರು.

ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ ಮಾತನಾಡಿ, “ಅಂಬಿಗರ ಚೌಡಯ್ಯ ಒಬ್ಬ ದಿಟ್ಟ ಹಾಗೂ ಧೀರ ವಚನಕಾರರಾಗಿದ್ದರು” ಎಂದರು.

ಈ ಸುದ್ದಿ ಓದಿದ್ದೀರಾ? ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ದಿನ ರಜೆ ಘೋಷಿಸಿದ ಹಿಮಾಚಲ ಪ್ರದೇಶ ಸರ್ಕಾರ

ಈ ಸಂದರ್ಭದಲ್ಲಿ ಹಿರಿಯ ಮುಖಂಡ ರಾಮಣ್ಣ ವಡೆಯರ್, ಪಪಂ ಸದಸ್ಯ ದಯಾನಂದ ಘುಳೆ, ಪಪಂ ಮುಖ್ಯಾಧಿಕಾರಿ ಸ್ವಾಮಿದಾಸ, ತಾಪಂ ಸಹಾಯಕ ನಿರ್ದೇಶಕ ಸುದೇಶ, ಖಜಾನಾಧಿಕಾರಿ ಮಾಣಿಕ ನೇಳಗಿ, ಕ್ಷೇತ್ರ ಶಿಕ್ಷಣಾಧಿಕಾರಿ ವ್ಯವಸ್ಥಾಪಕ ಗುರುಸಿದ್ದಪ್ಪ, ಲಿಂಗಾಯತ ಸಮಾಜ ಯುವ ಸಂಘದ ಅಧ್ಯಕ್ಷ ವಿರೇಶ ಅಲಮಾಜೆ ಸೇರಿದಂತೆ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...