ಅತಿ ವೇಗವಾಗಿ ಸಾಗುತ್ತಿದ್ದ ಆ್ಯಂಬುಲೆನ್ಸ್ ಎರಡು ಸ್ಕೂಟರ್ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಬೆಂಗಳೂರು ನಗರದ ವಿಲ್ಸನ್ ಗಾರ್ಡನ್ನ ಜನನಿಬಿಡ ಕೆಎಚ್ ಜಂಕ್ಷನ್ನಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಚಾಲಕ ಅತಿ ವೇಗವಾಗಿ ಮತ್ತು ಅಜಾಗರೂಕತೆಯಿಂದ ಆ್ಯಂಬುಲೆನ್ಸ್ ಚಲಾಯಿಸುತ್ತಿದ್ದ ಎಂದು ಹೇಳಲಾಗಿದೆ.
ಪ್ರತ್ಯಕ್ಷದರ್ಶಿಯೊಬ್ಬರು ಸಲ್ಲಿಸಿದ ದೂರಿನ ಪ್ರಕಾರ, ಆ್ಯಂಬುಲೆನ್ಸ್ ಶಾಂತಿನಗರ ಕಡೆಯಿಂದ ಲಾಲ್ಬಾಗ್ ಕಡೆಗೆ ವೇಗವಾಗಿ ಸಾಗಿದ್ದು, ಇಸ್ಮಾಯಿಲ್ ನಥನ್ ದಬಾಪು (40) ಮತ್ತು ಅವರ ಪತ್ನಿ ಹಿಂಬದಿ ಸವಾರರಾಗಿದ್ದ ಸಮೀನಾ ಬಾನು (33) ಸಾಗುತ್ತಿದ್ದ ಸುಜುಕಿ ಆಕ್ಸೆಸ್ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ.
ಇದನ್ನು ಓದಿದ್ದೀರಾ? ಬೆಳಗಾವಿ : ಭೀಕರ ಅಪಘಾತ ಇಬ್ಬರು ಸಾವು
ಈ ವೇಳೆ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿದ್ದು ಮೊಹಮ್ಮದ್ ರಯಾನ್ (29) ಮತ್ತು ಹಿಂಬದಿ ಸವಾರ ಮೊಹಮ್ಮದ್ ಸಿದ್ದಿಕ್ (32) ಸಾಗುತ್ತಿದ್ದ ಹೋಂಡಾ ಡಿಯೋ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಎರಡೂ ದ್ವಿಚಕ್ರ ವಾಹನಗಳು ನೆಲಕ್ಕೆ ಉರುಳಿದೆ. ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಪಾದಚಾರಿ ರಸ್ತೆಯಲ್ಲಿರುವ ಟ್ರಾಫಿಕ್ ಸಿಗ್ನಲ್ ಆಪರೇಟರ್ ಬಾಕ್ಸ್ಗೆ ಡಿಕ್ಕಿ ಹೊಡೆದು ನಿಂತಿದೆ.
A speeding ambulance rammed into 3 bikes near Richmond Circle in Bengaluru last night, two people killed, others injured. The ambulance dragged a bike for nearly 50m before hitting a traffic police booth. Driver absconding; case filed. pic.twitter.com/n35AKSrmWH
— Deepak Bopanna (@dpkBopanna) November 2, 2025
ಈ ಘಟನೆ ಬೆನ್ನಲ್ಲೇ ಚಾಲಕ ಪರಾರಿಯಾಗಿದ್ದು, ಪೊಲೀಸರು ಭಾನುವಾರ ಆತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆಕ್ರೋಶಗೊಂಡ ಸ್ಥಳೀಯರು ಆ್ಯಂಬುಲೆನ್ಸ್ ಅನ್ನು ತಳ್ಳಿ ಮಗುಚಿಹಾಕಿದ್ದಾರೆ.
ಇನ್ನು ಗಂಭೀರವಾಗಿ ಗಾಯಗೊಂಡಿದ್ದ ದಂಪತಿಗಳಿಬ್ಬರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ದಬಾಪು ಸ್ವಲ್ಪ ಸಮಯದ ನಂತರ ಮೃತಪಟ್ಟಿದ್ದಾರೆ. ಇನ್ನು ತಲೆಗೆ ತೀವ್ರ ಪೆಟ್ಟಾಗಿದ್ದ ಸಮೀನಾ ಬಾನು ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ. ರಯಾನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದು, ಸಿದ್ದಿಕ್ ಇನ್ನೂ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟನೆಯಲ್ಲಿದ್ದಾರೆ.
ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸರು ಆ್ಯಂಬುಲೆನ್ಸ್ ಚಾಲಕನ ವಿರುದ್ಧ ನಿರ್ಲಕ್ಷ್ಯ, ಅಜಾಗರೂಕತೆ ಚಾಲನೆ ಮಾಡಿ ಸಾವಿಗೆ ಕಾರಣವಾಗಿದ್ದು ಸೇರಿದಂತೆ ಹಲವು ವಿಭಾಗಗಳ ಅಡಿಯಲ್ಲಿ ಮತ್ತು ಮೋಟಾರು ವಾಹನ ಕಾಯ್ದೆಯ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.





