ಅಂಬೇಡ್ಕರ್‌ಗೆ ಅಮಿತ್ ಶಾ ಅವಮಾನ: ಜನಪರ ಸಂಘಟನೆಗಳಿಂದ ಡಿ.28ಕ್ಕೆ ವಿಜಯಪುರ ಬಂದ್‌ಗೆ ಕರೆ

Date:

ಮಹಾನ್ ಮಾನವತಾವಾದಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅತ್ಯಂತ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಅಹಿಂದ ಸಂಘಟನೆಗಳ ಒಕ್ಕೂಟವು ಡಿಸೆಂಬರ್ 28 ರಂದು ವಿಜಯಪುರ ಬಂದ್‌ಗೆ ಕರೆ ನೀಡಿದೆ ಎಂದು ಒಕ್ಕೂಟದ ನಾಯಕ ಹಾಗೂ ಮಾಜಿ ಶಾಸಕ ಪ್ರೊ.ರಾಜು ಆಲಗೂರ ಹೇಳಿದರು.

ವಿಜಯಪುರ ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೊಂದವರ ಧ್ವನಿ, ಶೋಷಿತರ ಧ್ವನಿಯಾದ ಡಾ.ಅಂಬೇಡ್ಕರ್ ಅವರು ಇಡೀ ಮನುಕುಲಕ್ಕೆ ಆದರ್ಶಮಯ ವ್ಯಕ್ತಿ. ಇಂತಹ ಮಹಾನ್ ಜ್ಞಾನಿಯ ಬಗ್ಗೆ ಕೇಂದ್ರ ಸಚಿವ ಸ್ಥಾನದಲ್ಲಿರುವ ವ್ಯಕ್ತಿ ಹಗುರವಾಗಿ ಮಾತನಾಡಿರುವುದು ಅಕ್ಷಮ್ಯ ಅಪರಾಧ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಾರತೀಯ ಸಂವಿಧಾನ ಮಾಡುವ ದೃಷ್ಟಿಕೋನವನ್ನು ಹೊಂದಿರುವ ಬಿಜೆಪಿ ಈಗ ಒಂದು ಪ್ರಯೋಗದ ರೀತಿಯಲ್ಲಿ ಡಾ.ಅಂಬೇಡ್ಕರ್ ಅವರ ಬಗ್ಗೆ ಅಪಮಾನಕಾರಿಯಾದ ಹೇಳಿಕೆ ನೀಡಿದೆ. ಜೊತೆಗೆ, ಸಂವಿಧಾನ ಬದಲಾವಣೆಯ ಸಾಹಸಕ್ಕೂ ಬಿಜೆಪಿ ಹಾಕಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002836945

ಸಂಘ ಪರಿವಾರದವರು ಡಾ. ಅಂಬೇಡ್ಕರ್ ಅವರ ಬಗ್ಗೆ ಮೊದಲಿನಿಂದಲೂ ಟೀಕೆ ಮಾಡುತ್ತಾ ಬಂದಿದ್ದು, ಈಗ ಬಿಜೆಪಿ ಇದನ್ನು ಮುಂದುವರೆಸಿಕೊಂಡು ಬಂದಿದೆ. ಭಾವಚಿತ್ರವನ್ನು ಸಹ ಆರ್‌ಎಸ್‌ಎಸ್ ಕಚೇರಿಗಳಲ್ಲಿ ಇಲ್ಲಿಯವರೆಗೆ ಇರಿಸಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಅಮಿತ್ ಶಾ ರಾಜೀನಾಮೆ ಕೊಡುವವರೆಗೂ ನಾವು ಹೋರಾಟ ನಿಲ್ಲಿಸುವುದಿಲ್ಲ, ಈ ಬಂದ್ ಕರೆಗೆ ಹಲವಾರು ಸಂಘಟನೆಗಳು ಸಾಥ್ ನೀಡಿವೆ ಎಂದರು.

ಕೆಪಿಸಿಸಿ ಸದಸ್ಯ ಅಬ್ದುಲ್ ಹಮೀದ್ ಮುಶ್ರೀಫ್ ಮಾತನಾಡಿ, ಶ್ರೇಷ್ಠ ಸಂವಿಧಾನ ರಚಿಸಿದ ಮಹಾನ್ ವ್ಯಕ್ತಿಗೆ ಈ ರೀತಿ ಅಪಮಾನ ಮಾಡಿರುವುದು ನೋವಿನ ಸಂಗತಿ. ಹೀಗಾಗಿ, ಡಿಸೆಂಬರ್ 28ರಂದು ಶ್ರೀ ಸಿದ್ದೇಶ್ವರ ದೇವಾಲಯದಿಂದ ಬೃಹತ್ ಪ್ರತಿಭಟನಾ ರ‌್ಯಾಲಿ ನಡೆಯಲಿದೆ. ಎಲ್ಲ ಸಂಘ-ಸಂಸ್ಥೆಗಳು, ಶಾಲಾ -ಕಾಲೇಜುಗಳು, ವ್ಯಾಪಾರ- ವಹಿವಾಟುಗಳನ್ನು ಬಂದ್ ಮಾಡಿ ಹೋರಾಟಕ್ಕೆ ಸಾಥ್ ನೀಡಬೇಕೆಂದು ಒತ್ತಾಯಿಸಿದರು.

ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಮಾತನಾಡಿ, ಕ್ರಿಮಿನಲ್ ಹಿನ್ನೆಲೆಯಿಂದ ಬಂದ್ ವ್ಯಕ್ತಿಯನ್ನು ದೇಶದ ಗೃಹ ಸಚಿವನಾಗಿ ನಾವು ಒಪ್ಪಿಕೊಂಡಿದ್ದೇ ಮೊದಲ ದುರಂತ. ಅಂತಹ ವ್ಯಕ್ತಿಯಿಂದ ಇಂತಹ ಶಬ್ದಗಳನ್ನೇ ನಿರೀಕ್ಷಿಸಲು ಸಾಧ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಡಾ.ಅಂಬೇಡ್ಕರ್ ಅವರ ಬಗ್ಗೆ ಗೌರವವಿದ್ದರೆ ಬಿಜೆಪಿ ಸಹ ಈ ಹೋರಾಟಕ್ಕೆ ಬೆಂಬಲಿಸಬೇಕು ಎಂದರು.

ಮುಖಂಡರಾದ ಎಂ.ಸಿ. ಮುಲ್ಲಾ, ಫಯಾಜ್ ಕಲಾದಗಿ, ರಮೇಶ ಆಸಂಗಿ, ಎಂ.ಸಿ. ಮುಲ್ಲಾ, ಮಹಾದೇವಿ ಗೋಕಾಕ, ಸಿದ್ದು ರಾಯಣ್ಣವರ, ಮೈನುದ್ದೀನ್ ಬೀಳೆಗಿ, ಡಾ.ರವಿ ಬಿರಾದಾರ, ರೈತ ಮುಖಂಡ ಸಂಗಮೇಶ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...