ಅಧಿವೇಶನ | ಕರ್ನಾಟಕ ಭೂ-ಕಂದಾಯ ಕಾಯ್ದೆಗೆ ತಿದ್ದುಪಡಿ: ಸಚಿವ ಕೃಷ್ಣಭೈರೇಗೌಡ

Date:

  • ಶೋಷಣೆ, ಸುಲಿಗೆ ಇಲ್ಲದೆ ಜನರ ಕೆಲಸ ತಕ್ಷಣ ಆಗಲು ಸಹಾಯ
  • ‘ಕಳೆದ ಸರ್ಕಾರದಲ್ಲಿ “ಡೀಮ್ಡ್ ಕನ್ವರ್ಷನ್” ಮಾಡಲಾಗಿತ್ತು’

ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದಂತೆ ಆಡಳಿತ ಸುಧಾರಣೆ, ಆಡಳಿತ ಸರಳೀಕರಣ ಮತ್ತು ಕಚೇರಿಗಳಲ್ಲಿ ವಿಳಂಬ, ಶೋಷಣೆ, ಸುಲಿಗೆ ಇಲ್ಲದೆ ಜನರ ಕೆಲಸ ತತಕ್ಷಣ ಆಗಬೇಕು ಎಂಬ ಕಾರಣದಿಂದ “ಕರ್ನಾಟಕ ಭೂ ಕಂದಾಯ ತಿದ್ದುಪಡಿ ಮಸೂದೆ-2023” ಯನ್ನು ಮಂಡಿಸುತ್ತಿದ್ದೇನೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಬುಧವಾರದ ಕಲಾಪದಲ್ಲಿ ಮಸೂದೆ ಮಂಡಿಸಿ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, “ಕರ್ನಾಟಕ ಭೂ ಕಂದಾಯ ನಿಯಮ ಸೆಕ್ಷನ್ 35-95 ಅಡಿಯಲ್ಲಿ ಯಾವ ಪ್ರದೇಶಕ್ಕೆ ನಾವು ಮಾಸ್ಟರ್ ಪ್ಲಾನ್ ಮಾಡಲಾಗಿದೆಯೋ, ಆ ಮಾಸ್ಟರ್ ಪ್ಲಾನ್ ನಲ್ಲಿ ಯಾವ ಉದ್ದೇಶಕ್ಕೆ ಆ ಭೂಮಿ ಬಳಕೆಯಾಗಬೇಕು ಎಂದು ಉಲ್ಲೇಖಿಸಲಾಗಿರುತ್ತದೆಯೋ ಆ ಪ್ರಕಾರ ಯಾವುದೇ ಕೆಲಸಕ್ಕೆ ಆ ಭೂಮಿಯನ್ನು ಬಳಸಬಹುದು” ಎಂದು ತಿಳಿಸಿದರು.

“ಹೌಸಿಂಗ್, ಶಾಲೆ ಕೈಗಾರಿಕೆ ಹೀಗೆ ಯಾವ ಉದ್ದೇಶಕ್ಕೆ ನಾವು ಭೂಮಿಯನ್ನು ಕ್ಲಾಸಿಫಿಕೇಷನ್ ಮಾಡಿದ್ದೇವೆಯೋ, ಈ ಕ್ಲಾಸಿಫಿಕೇಷನ್ ಮಾಡಿದ ಮೇಲೆ ಮತ್ತೆ ಭೂ ಪರಿವರ್ತನೆ ಅಗತ್ಯ ಇಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಧಿವೇಶನ | ನೋಂದಣಿ ತಿದ್ದುಪಡಿ ವಿಧೇಯಕ ಅಂಗೀಕಾರ, ನಕಲಿ ನೋಂದಣಿಗೆ 3 ವರ್ಷ ಜೈಲು

“ಕಳೆದ ಸರ್ಕಾರದಲ್ಲಿ ‘ಡೀಮ್ಡ್ ಕನ್ವರ್ಷನ್’ ಮಾಡಿದ್ದರು. ಇದರ ಪ್ರಕಾರ 7 ದಿನದಲ್ಲಿ ಪರವರ್ತನೆ ಮಾಡಿಕೊಡಬೇಕು ಎಂಬ ನಿಯಮ ಇದೆ. ಆದರೆ, ನಾವು ಗಮನಿಸಿದಂತೆ ಕೆಲವು ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಅಥವಾ ದುರುದ್ದೇಶಪೂರ್ವಕವಾಗಿ ತಕರಾರು ಬರೆದು ಡೀಮ್ಡ್ ಕನ್ವರ್ಷನ್ ಸಹ ಸಿಗದಂತೆ ಮಾಡಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಅರ್ಜಿಗಳು ಹಲವು ತಿಂಗಳು ತಡೆಹಿಡಿದಿರುವುದನ್ನು ನಾವು ನೋಡಿದ್ದೇವೆ. ಇದರಿಂದ ಜನರಿಗೆ ಹಾಗೂ ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಉಂಟಾಗುತ್ತಿದೆ” ಎಂದರು.

“ಕೆಲವು ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಜನರ ಸುಲಿಗೆಯೂ ನಡೆದಿದೆ ಎಂಬ ದೂರು ಬಂದಿದೆ. ಹೀಗಾಗಿ ಆಡಳಿತ ಸುಧಾರಣೆ, ಅಧಿಕಾರ ಸರಳೀಕರಣ ಮತ್ತು ಸುಲಿಗೆ ನಿಯಂತ್ರಣಕ್ಕೆ ಈ ಕಾಯ್ದೆಯನ್ನು ತಿದ್ದುಪಡಿ ಮಾಡಲಾಗುತ್ತಿದೆ” ಎಂದು ಸಚಿವ ಕೃಷ್ಣಭೈರೇಗೌಡ ಸದನಕ್ಕೆ ಮಾಹಿತಿ ನೀಡಿದರು.

ನಂತರ ಸಭಾಧ್ಯಕ್ಷರು ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಮಸೂದೆ 2023 ಅನ್ನು ಸಭೆಗೆ ಹಾಕಿದರು. ಧ್ವನಿ ಮತದ ಮೂಲಕ ಸರ್ವಾನುಮತದಿಂದ ಅಂಗೀಕಾರ ಪಡೆಯಿತು.

ಏನಿದು ಭೂ ಪರಿವರ್ತನೆ ಮಸೂದೆ?

ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಮಸೂದೆಯಲ್ಲಿ ಉಲ್ಲೇಖಿಸಿರುವಂತೆ ಕೃಷಿಯೇತರ ಉದ್ದೇಶಗಳಿಗಾಗಿ ಮಾಸ್ಟರ್ ಪ್ಲಾನ್ ಮಾಡಲಾಗಿರುವ ಭೂಮಿಯನ್ನು ಆ ಮಾಸ್ಟರ್ ಪ್ಲಾನ್ ನಲ್ಲಿ ಉಲ್ಲೇಖಿಸಿರುವ ಉದ್ದೇಶಗಳಿಗೆ ಬಳಸಿಕೊಳ್ಳಲು ಜಿಲ್ಲಾಧಿಕಾರಿಗಳ ಅನುಮತಿ ಅಗತ್ಯವಿಲ್ಲ. ಯಾವುದೇ ಮಾಸ್ಟರ್ ಪ್ಲಾನ್ ಇಲ್ಲದ ಸ್ಥಳೀಯ ಯೋಜನಾ ಪ್ರದೇಶದ ಹೊರಗಿನ ಭೂಮಿಯನ್ನು ಪರಿವರ್ತನೆ ಮಾಡಿಕೊಳ್ಳಲು ಅರ್ಜಿದಾರರು ಅಫಿಡವಿಟ್ ಸಲ್ಲಿಸಬೇಕು. ಜಿಲ್ಲಾಧಿಕಾರಿಯು 30 ದಿನಗಳೊಳಗೆ ಆದೇಶವನ್ನು ನೀಡದಿದ್ದರೆ, ಭೂ- ಪರಿವರ್ತನೆಯನ್ನು ಅನುಮೋದಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...