ಹಗಲಲ್ಲೇ ಬಾಲಕಿಯ ಅಪಹರಣಕ್ಕೆ ಯತ್ನ; ಬೆಚ್ಚಿಬಿದ್ದ ಬೆಳಗಾವಿ

Date:

10 ವರ್ಷದ ಬಾಲಕಿಯನ್ನು ವ್ಯಕ್ತಿಯೊಬ್ಬ ಅಪಹರಿಸಲು ಯತ್ನಿಸಿದ ಘಟನೆ ಬೆಳಗಾವಿ ನಗರದ ಹಿಂದವಾಡಿ ಭಾಗದಲ್ಲಿ ನಡೆದಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಿಂದ ಅಲ್ಲಿನ ಜನರಲ್ಲಿ ಭೀತಿ ಆವರಿಸಿದೆ.

ಮಂಗಳವಾರ ಸಂಜೆ ಟ್ಯೂಷನ್ ತರಗತಿ ಮುಗಿಸಿ ಬಾಲಕಿ ಮನೆಗೆ ಮರಳುತ್ತಿದ್ದಾಗ ಹಿಂದವಾಡಿಯ ಮಹಾವೀರ್ ಗಾರ್ಡನ್ ಎದುರು ಸಂಜೆ 6.39ಕ್ಕೆ ಘಟನೆ ನಡೆದಿದೆ. ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆರೋಪಿಯ ಪತ್ತೆಗೆ ಪೊಲೀಸರು ಪ್ರತ್ಯೇಕ ತಂಡ ರಚಿಸಿದ್ದು, ತನಿಖೆ ಆರಂಭಿಸಿದ್ದಾರೆ. ಘಟನಾ ಸ್ಥಳದ ಸಮೀಪದ ಎರಡು ಮನೆಗಳಿಂದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದುಕೊಂಡಿದ್ದಾರೆ. 40 ವರ್ಷ ಆಸುಪಾಸಿನ ವ್ಯಕ್ತಿಯೊಬ್ಬ ಬಾಲಕಿಯನ್ನು ಬಲವಂತವಾಗಿ ತನ್ನ ಭುಜದ ಮೇಲೆ ಹೊತ್ತೊಯ್ಯುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋದಲ್ಲಿ, ಬಾಲಕಿ ಕಿರುಚಿಕೊಂಡು, ಆತನ ಕೆನ್ನೆ ಮತ್ತು ಕುತ್ತಿಗೆಯನ್ನು ಎಳೆದಾಡಿದ್ದಾಳೆ. ಘಟನೆಯನ್ನು ಜನರು ತಪ್ಪಾಗಿ ಅರ್ಥೈಸಿಕೊಂಡಿದ್ದು, ತಂದೆ ಮತ್ತು ಮಗಳ ನಡುವಿನ ತಮಾಷೆಯೆಂದು ಭಾವಿಸಿ ಹೋಗಿದ್ದಾರೆ. ಬಾಲಕಿಯ ಕಿರುಚಾಟವನ್ನು ಕೇಳಿದ ತೋಟಗಾರರೊಬ್ಬರು ಅನುಮಾನಗೊಂಡು ಅಪಹರಣಕಾರನನ್ನು ಬೆನ್ನಟ್ಟಿದ್ದಾರೆ. ಆಗ ಆರೋಪಿ ಬಾಲಕಿಯನ್ನು ಬಿಟ್ಟು ಸುಭಾಷ್ ಮಾರುಕಟ್ಟೆಯ ಕಡೆಗೆ ಓಡಿಹೋಗಿದ್ದಾನೆ. ಬಳಿಕ, ಘಟನಾ ಸ್ಥಳದಲ್ಲಿ ಜನರು ಜಮಾಯಿಸಿದ್ದು, ಬಾಲಕಿ ತನಗಾದ ಘೋರ ಅನುಭವವನ್ನು ವಿವರಿಸಿದ್ದಾಳೆ.

“ಆರೋಪಿಯ ಬಗ್ಗೆ ನಮಗೆ ಸುಳಿವು ಸಿಕ್ಕಿದ್ದು, ಶೀಘ್ರದಲ್ಲಿಯೇ ಬಂಧಿಸಲಾಗುವುದು” ಎಂದು ಉತ್ತರ ವಲಯದ ಐಜಿಪಿ ವಿಕಾಶ್ ಕುಮಾರ್ ವಿಕಾಶ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...