ಬೀದರ್‌ | ʼವಚನ ದರ್ಶನʼ ಕೃತಿಯಿಂದ ವಚನ ಸಾಹಿತ್ಯ ನಿರ್ನಾಮಕ್ಕೆ ಯತ್ನ : ಆರ್.ಕೆ.ಹುಡಗಿ

Date:

ದುಡಿಯುವ ವರ್ಗ, ಕಾಯಕ ಜೀವಿಗಳ, ಜನಸಾಮಾನ್ಯರಿಂದ ಸೃಷ್ಟಿಯಾದ ವೈಚಾರಿಕ ನೆಲೆಯ ಬಸವಧರ್ಮವು ಜಗತ್ತು ಆಳಬಲ್ಲದು ಎಂಬ ಭಯದಿಂದ 12ನೇ ಶತಮಾನದಿಂದ ಇತೀಚಿನವರೆಗೆ ಅದರ ದಮನಕ್ಕೆ ಯತ್ನಿಸಲಾಗಿದೆ ಎಂದು ಹಿರಿಯ ಚಿಂತಕ ಆರ್.ಕೆ.ಹುಡಗಿ ಹೇಳಿದರು.

ಬಸವ ಧರ್ಮ ಪೀಠದಿಂದ ಬಸವಕಲ್ಯಾಣದ ಬಸವ ಮಹಾಮನೆಯಲ್ಲಿ ಶುಕ್ರವಾರದಿಂದ ಮೂರು ದಿನಗಳ ಆಯೋಜಿಸಿರುವ 23ನೇ ಕಲ್ಯಾಣ ಪರ್ವ ಧರ್ಮ ಚಿಂತನ ಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು.

ʼ12ನೇ ಶತಮಾನದಲ್ಲಿ ಅಂತರ್ಜಾತಿ ವಿವಾಹ ಕಾರಣ ಕಲ್ಯಾಣ ಕ್ರಾಂತಿ ಘಟಿಸಿರುವುದು ಎಂಬುದು ಸುಳ್ಳು. ಮದುವೆಯಾದ ಇಬ್ಬರೂ ಶರಣರು ಲಿಂಗಾಯತರೇ ಆಗಿದ್ದರಿಂದ ಅದು ಅಂತರ್ಜಾತಿ ಮದುವೆ ಹೇಗಾಗುತ್ತದೆ? ಇದಲ್ಲದೆ ಅವರ ವೈಯಕ್ತಿಕ ಕಾರಣಕ್ಕಾಗಿ ವಚನ ಸಾಹಿತ್ಯ ಏಕೆ ಸುಡಲಾಯಿತು. ಶರಣರ ಕಗ್ಗೊಲೆ ಏಕೆ ನಡೆಯಿತುʼ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕರ್ನಾಟಕ ರಾಜ್ಯ ಸರ್ಕಾರ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಕೇಂದ್ರ ಶಿಪಾರಸು ಮಾಡಿದರೂ ಕೇಂದ್ರ ಸರ್ಕಾರ ಅದಕ್ಕೆ ಒಪ್ಪದೇ ನಿರಾಕರಿಸಿತು. ಇತ್ತೀಚೆಗೆ ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ ತಡ ಮತ್ತೆ ಬಸವಣ್ಣನವರ ವಿರುದ್ಧ ಪಿತೂರಿ ಶುರುವಾಗಿದೆ. ಬಸವಣ್ಣ ಮುಂದಿನ ದಿನಗಳಲ್ಲಿ ಭಾರತದ ಸಾಂಸ್ಕೃತಿಕ ನಾಯಕರಾಗಿ ಘೋಷಣೆಯಾದರೆ ನಮ್ಮ ಗತಿಯೇನು ಎಂದು ಭಯ ಹುಟ್ಟಿದೆ. ಹೀಗಾಗಿ ಮತ್ತೆ ಅದರ ವಿರುದ್ಧ ಧ್ವನಿ ಎತ್ತಿ ವಚನಗಳನ್ನು ತುಳಿಯುವ ಪ್ರಯತ್ನಕ್ಕೆ ಕೈಹಾಕಿದ್ದಾರೆʼ ಎಂದರು.

ʼಇತ್ತೀಚೆಗೆ ವಚನ ದರ್ಶನ ಎಂಬ ಪುಸ್ತಕ ಬಿಡುಗಡೆ ಆಗಿದೆ. 12ನೇ ಶತಮಾನದಲ್ಲಿ ಶರಣರ ತತ್ವ ಒಪ್ಪದ ವಿರೋಧಿಗಳು ವಚನ ಸಾಹಿತ್ಯಕ್ಕೆ ಬೆಂಕಿ ಹಂಚಿ ಸುಟ್ಟಿದ್ದರು. ಅಂದು ಕೈಗೆ ಸಿಗದೇ ಉಳಿದಿರುವ ವಚನಗಳನ್ನು ಈಗ ನಿರ್ನಾಮ ಮಾಡುವ ದುರುದ್ದೇಶದಿಂದ ವಚನ ದರ್ಶನ ಪುಸ್ತಕ ಎಂಬ ಯಗ್ನಕುಂಡ ನಿರ್ಮಾಣ ಮಾಡಿದ್ದಾರೆ. ಶರಣರ ಧ್ಯೇಯ ಉದ್ದೇಶಗಳನ್ನು ದಾರಿ ತಪ್ಪಿಸುವ ಉದ್ದೇಶದಿಂದ ವಚನ ದರ್ಶನ ಗೃಂಥ ರಚಿಸಿ ಲಕ್ಷಾಂತರ ವೆಚ್ಚದಿಂದ ನಾಡಿನಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆʼ ಎಂದರು.

WhatsApp Image 2024 10 19 at 11.57.25 AM

ʼನಾಡಿನಲ್ಲಿ ಲಿಂಗಾಯತ ಧರ್ಮವನ್ನು ಮನೆ-ಮನಕ್ಕೂ ತಲುಪಿಸಿದ ಲಿಂಗಾನಂದ ಸ್ವಾಮೀಜಿ, ಮಾತೆ ಮಹಾದೇವಿ ಹಾಗೂ ಲಿಂಗಾಯತ ತತ್ವಕ್ಕಾಗಿ ಜೀವ ಕಳೆದುಕೊಂಡ ಎಂ.ಎಂ.ಕಲಬುರ್ಗಿ ಅವರ ನೆನಪು ಅಜರಾಮರ ಆಗಲಿದೆ. ಲಿಂಗಾಯತ ಧರ್ಮದ ಲಾಂಛನ ಧರಿಸಿ ತೀರ್ಥಕ್ಷೇತ್ರಗಳಿಗೆ ಸುತ್ತಾಡುವ ಬದಲು ಶರಣರ ತತ್ವಕ್ಕೆ ಬದ್ಧರಾಗಿ ಶರಣರ ಆಶಯಗಳನ್ನು ಬದುಕಿನಲ್ಲಿ ಮೈಗೂಡಿಕೊಂಡರೆ ಬಸವಧರ್ಮ ಉಳಿಯುತ್ತದೆ, ಬಸವಣ್ಣ ದೇಶ, ಜಗತ್ತಿನ ಸಾಂಸ್ಕೃತಿಕ ನಾಯಕರಾಗುತ್ತಾರೆʼ ಎಂದು ತಿಳಿಸಿದರು.

ಕೂಡಲಸಂಗಮ ಬಸವ ಧರ್ಮಪೀಠದ ಪೀಠಾಧ್ಯಕ್ಷೆ ಡಾ.ಮಾತೆ ಗಂಗಾದೇವಿ ಮಾತನಾಡಿ, ʼಬಸವಕಲ್ಯಾಣದಲ್ಲಿ ಕ್ರಾಂತಿ ನಡೆಸಿದ ಶರಣರು ವಿಶ್ವಕ್ಕೆ ವಚನ ಸಾಹಿತ್ಯ ನೀಡುವ ಮೂಲಕ ಮಾನವೀಯತೆಯನ್ನು ಬಿತ್ತಿದ್ದಾರೆ. ನಾವೆಲ್ಲರೂ ವಚನಗಳಲ್ಲಿ ಅಡಗಿರುವ ಮಾನವೀಯ ಮೌಲ್ಯಗಳನ್ನು ಅರಿಯಬೇಕು. ಡಾ.ಮಾತೆ ಮಹಾದೇವಿ ಅವರು ಬಸವ ತತ್ವ, ವಚನ ಸಾಹಿತ್ಯ ಉಳಿಸಿ ಬೆಳೆಸಲು ಕೈಗೊಂಡಿದ್ದ ಕಾರ್ಯಗಳು ಮುಂದೆವರೆಸಲು ಬಸವ ಭಕ್ತರು ತನು, ಮನ, ಧನದಿಂದ ಸಹಕಾರ ನೀಡಬೇಕುʼ ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ದಲಿತರ ಮನೆ ಪಕ್ಕದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ; ಪ್ರಶ್ನಿಸಿದ್ದಕ್ಕೆ ದಲಿತರ ಮೇಲೆ ಹಲ್ಲೆ

ಬೀದರ್ ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ, ಬೇಲೂರನ ಶಿವಕುಮಾರ ಸ್ವಾಮೀಜಿ,‌ ಚಿಂತಕ ಸಂಜಯ ಮಾಕಲ್, ವಿಜಯಕುಮಾರ ಪಟ್ಟೆ, ಶಿವಕುಮಾರ ಸ್ವಾಮಿ ಮಾತನಾಡಿದರು. ‌ಬಸವಕಲ್ಯಾಣ ಶಾಸಕ ಶರಣು ಸಲಗರ ಕಾರ್ಯಕ್ರಮ ಉದ್ಘಾಟಿಸಿದರು. ಬೀದರ್‌ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಧ್ವಜಾರೋಹಣ ನೆರವೇರಿಸಿದರು. ಹಾಗೂ ಹುಮನಾಬಾದ್ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್‌ ಬಸವಗುರು ಪೂಜೆ ನೆರವೇರಿಸಿದರು.‌ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಗಣ್ಯರು, ಬಸವ ಭಕ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...