ರಾಹುಲ್ ಗಾಂಧಿ, ಕಾಂಗ್ರೆಸ್ ಎತ್ತಿರುವ ವಿಷಯ ಬಿಜೆಪಿಯ ನಿದ್ದೆಗೆಡಿಸಿದೆ: ಆನಂದ್ ಶರ್ಮಾ ವಾಗ್ದಾಳಿ

Date:

  • ಪ್ರಜಾಪ್ರಭುತ್ವ ಹಿಂದೆದೂ ಕಾಣದಷ್ಟು ಅಪಾಯಕ್ಕೆ ಒಳಗಾಗಿದೆ: ಆನಂದ್ ಶರ್ಮಾ
  • ಕಡಿಮೆ ಅವಧಿಯಲ್ಲಿ ಹೆಚ್ಚು ಆಸ್ತಿ ಗಳಿಸಿರುವ ಆದಾನಿ ಸಂಸ್ಥೆ ಮೇಲೆ ತನಿಖೆ ಯಾಕಿಲ್ಲ?

ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಚರ್ಚೆಗೆ ಎತ್ತಿರುವ ವಿಷಯಗಳು ಬಿಜೆಪಿಯ ನಿದ್ದೆಗೆಡಿಸಿದೆ. ಈ ಬಿಜೆಪಿ ಸರ್ಕಾರ ಸಂಸತ್ತಿನಲ್ಲಿ ಚರ್ಚೆಗೆ ಹೆದರಿದರೆ ಯಾವ ಸಂದೇಶ ರವಾನೆಯಾಗುತ್ತಿದೆ ಎಂದು ಜನರೇ ನಿರ್ಧರಿಸುತ್ತಾರೆ ಎಂದು ಕೇಂದ್ರದ ಮಾಜಿ ಸಚಿವ ಆನಂದ್ ಶರ್ಮಾ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಂಟಿಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ರಾಹುಲ್ ಗಾಂಧಿ ಅವರ ಬಗ್ಗೆ ಲಂಡನ್‌ನಲ್ಲಿ ವಿದೇಶಗಳು ಭಾರತಕ್ಕೆ ನೆರವಾಗಿ ಎಂದು ಕೇಳಿದ್ದಾರೆ ಎಂಬ ಸುಳ್ಳನ್ನು ಹೇಳಿದರು. ಸಂಸತ್ತು ಇರುವುದೇ ಚರ್ಚೆ ಮಾಡಲು. ಆದರೆ ಈ ವಿಚಾರವಾಗಿ ಸಂಸತ್ತಿನಲ್ಲಿ ಉತ್ತರ ನೀಡಲು ರಾಹುಲ್ ಗಾಂಧಿ ಅವರಿಗೆ ಅವಕಾಶ ನೀಡುತ್ತಿಲ್ಲ”ಎಂದರು.

“ದೇಶದಲ್ಲಿ ಸಂಸದೀಯ ಪ್ರಜಾಪ್ರಭುತ್ವ ಹಿಂದೆದೂ ಕಾಣದಷ್ಟು ಅಪಾಯಕ್ಕೆ ಒಳಗಾಗಿದೆ. 1952ರಲ್ಲಿ ಆರಂಭವಾದ ದಿನದಿಂದ ಇದೇ ಮೊದಲ ಬಾರಿಗೆ ಸಂಸತ್ತಿನಲ್ಲಿ ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲಾಗುತ್ತಿದೆ. ವಿಶ್ವದಲ್ಲೇ ಮೊದಲ ಬಾರಿಗೆ ಆಡಳಿತ ಪಕ್ಷವೇ ಅಧಿವೇಶನದ ಕಲಾಪಕ್ಕೆ ಅಡ್ಡಿಪಡಿಸುವ ಕೆಟ್ಟ ಸಂಸ್ಕೃತಿ ಆರಂಭವಾಗಿದೆ. ಯಾವುದೇ ಚರ್ಚೆಗೆ ಆಡಳಿತ ಪಕ್ಷ ಅವಕಾಶ ನೀಡದೆ ಇರುವುದು ಕಂಡಾಗ ಈ ಬಿಜೆಪಿ ಸರ್ಕಾರ ಎಷ್ಟು ಭಯಭೀತವಾಗಿದೆ ಎಂಬುದು ತಿಳಿಯುತ್ತೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದ ಅತಿ ದೊಡ್ಡ ವ್ಯಾಪಾರ ಸಂಸ್ಥೆ ಅದಾನಿ ಸಮೂಹದ ವಿರುದ್ಧ ಪ್ರಶ್ನೆ ಮೂಡಿದೆ. ಅತಿ ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ಈ ಸಂಸ್ಥೆ ಮೇಲೆ ಅಕ್ರಮ ಹಣಕಾಸು ವ್ಯವಹಾರ ಸೇರಿದಂತೆ ಅನೇಕ ಆರೋಪ ಕೇಳಿ ಬಂದಿದೆ. 45 ಸಾವಿರ ಕೋಟಿಯಷ್ಟು ಹಣ ಅಕ್ರಮವಾಗಿ ಬಂದಿದ್ದು, ಇದರ ಮೂಲವನ್ನು ಪ್ರಶ್ನಿಸಬಾರದೇ? ಈ ಪ್ರಕರಣಗ ಬಗ್ಗೆ ತನಿಖಾ ಸಂಸ್ಥೆಗಳು ತನಿಖೆ ಮಾಡಬೇಕಲ್ಲವೇ? ಭಾರತ ಜಿ20 ಶೃಂಗಸಸಭೆ ನಡೆಯುವ ಸಮಯದಲ್ಲಿ ಈ ಆರೋಪ ಬಂದಿರುವಾಗ ತನಿಖೆ ಯಾಕೆ ಮಾಡುತ್ತಿಲ್ಲ” ಎಂದು ಪ್ರಶ್ನಿಸಿದರು.

“ರಾಹುಲ್ ಗಾಂಧಿ ಅವರನ್ನು ಅನರ್ಹ ಮಾಡಿರುವ ರೀತಿ ಖಂಡನೀಯ. ಇಂತಹ ಅನರ್ಹತೆ ಹಿಂದೆಂದೂ ಆಗಿರಲಿಲ್ಲ. ಮಾರ್ಚ್ 13, 2019ರಲ್ಲಿ ಮಾಡಿದ ಭಾಷಣದಲ್ಲಿ ಯಾವುದೇ ಸಮುದಾಯವನ್ನು ಟೀಕೆ ಮಾಡಿರಲಿಲ್ಲ. ಹೀಗಾಗಿ ಕ್ರಿಮಿನಲ್ ಮಾನಹಾನಿಗೆ ಅವಕಾಶವೇ ಇರಲಿಲ್ಲ. ರಾಹುಲ್ ಗಾಂಧಿ ಅವರು ನೀರವ್ ಮೋದಿ ಹಾಗೂ ಲಲತಿ ಮೋದಿ ಅವರ ಕುರಿತಾಗಿ ಮಾಡಿರುವ ಭಾಷಣವಾಗಿತ್ತು” ಎಂದರು.

ಈ ಸುದ್ದಿ ಓದಿದ್ದೀರಾ? ರಾಜಕೀಯ ಸತ್ ಪರಂಪರೆಯ ರಾಜ್ಯದಲ್ಲಿ ನಡೆಯಬೇಕಿದೆ ಮುಕ್ತ, ನ್ಯಾಯಸಮ್ಮತ ಚುನಾವಣೆ

ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಶ್ನೆ

“ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 8ರ 1,2,3,4 ನಲ್ಲಿ ಯಾವ ಅಪರಾಧಕ್ಕೆ ಅನರ್ಹತೆ ಮಾಡಲಾಗುವುದು ಎಂದು ವಿವರಣೆ ನೀಡಲಾಗಿದೆ. ಇಲ್ಲಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಮೊದಲೇ ಅನರ್ಹತೆ ಮಾಡಲಾಗಿದೆ. ಹೀಗಾಗಿ ಈ ಅನರ್ಹತೆ ಊರ್ಜಿತವಾಗುವುದಿಲ್ಲ. ಭಾರತದ ಸಂವಿಧಾನದ ಪ್ರಕಾರ ಸಂಸತ್ತಿನ ಮುಖ್ಯಸ್ಥರು ರಾಷ್ಟ್ರಪತಿಗಳು, ಅವರು ಅನರ್ಹತೆಯ ಕುರಿತು ತೀರ್ಮಾನ ಮಾಡಬೇಕು. ರಾಹುಲ್ ಗಾಂಧಿ ಅವರ ಪ್ರಕರಣದಲ್ಲಿ ರಾಷ್ಟ್ರಪತಿಗಳಿಗೆ ಅನರ್ಹತೆಯ ಪ್ರಸ್ತಾವನೆ ಸಲ್ಲಿಕೆಯಾಗದೇ ಅನರ್ಹತೆ ಮಾಡಲಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಮುಂದಿನ ಒಂದು ತಿಂಗಳು ದೇಶದಾದ್ಯಂತ ಪ್ರತಿಭಟನೆಗೆ ಮುಂದಾಗಿದೆ. ಇದು ಕೇವಲ ಒಂದು ಪಕ್ಷದ ನಾಯಕರ ಪ್ರಶ್ನೆಯಲ್ಲ. ಇದು ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಶ್ನೆಯಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...