ಬೀದರ್‌ | ಶಿಕ್ಷಕಿ ‘ದಲಿತೆ’ ಎಂಬ ಕಾರಣಕ್ಕೆ ಅಂಗನವಾಡಿ ಬಹಿಷ್ಕರಿಸಿದ ʼಪ್ರಬಲ ಜಾತಿʼ ಪೋಷಕರು

Date:

ಅಂಗನವಾಡಿ ಶಿಕ್ಷಕಿಯೊಬ್ಬರು ದಲಿತ ಸಮುದಾಯಕ್ಕೆ ಸೇರಿದ್ದಾರೆಂಬ ಕಾರಣಕ್ಕೆ ಗ್ರಾಮದ ಪ್ರಬಲ ಜಾತಿಯವರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸದೆ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವುದು ಬಸವಾದಿ ಶರಣರ ನಾಡಿನಲ್ಲಿ ಬೆಳಕಿಗೆ ಬಂದಿದೆ.

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ (ಡಬ್ಲ್ಯೂ) ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಕಳೆದ ಒಂದು ವರ್ಷದ ಹಿಂದೆ ದಲಿತ ಸಮುದಾಯದ ಅಂಬಿಕಾ ಎಂಬುವವರನ್ನು ಶಿಕ್ಷಕಿಯನ್ನಾಗಿ ನೇಮಕ ಮಾಡಿದ್ದರು. ಇದು ಆ ಗ್ರಾಮದ ಪ್ರಬಲ ಜಾತಿಯವರಲ್ಲಿ ಜಾತಿ ಅಸಹನೆ ಮೂಡಿಸಿದ್ದು, ಅಂದಿನಿಂದಲೂ ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸದೆ ಅಸ್ಪೃಶ್ಯತೆ ಆಚರಣೆ ಮಾಡುತ್ತಿದ್ದಾರೆ. ಗ್ರಾಮದಲ್ಲಿನ ಅಸ್ಪೃಶ್ಯತೆ ಆಚರಣೆ ತಡವಾಗಿ ಬೆಳಕಿಗೆ ಬಂದಿದೆ.

ಬ್ಯಾಲಹಳ್ಳಿ(ಡಬ್ಲ್ಯೂ) ಗ್ರಾಮದಲ್ಲಿ ಸುಮಾರು 200ಕ್ಕೂ ಅಧಿಕ ಮನೆಗಳಿವೆ. ತಾಲೂಕು ಕೇಂದ್ರದಿಂದ ಸುಮಾರು 15 ಕಿಮೀ ದೂರವಿರುವ ಈ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತ ಹಾಗೂ ದಲಿತ ಸಮುದಾಯದವರು ಇದ್ದಾರೆ. ಗ್ರಾಮದಲ್ಲಿ ಒಂದೇ ಅಂಗನವಾಡಿ ಕೇಂದ್ರವಿದೆ. ಅಂಗನವಾಡಿಯಲ್ಲಿ ಲಿಂಗಾಯತ ಸಮುದಾಯಕ್ಕೆ ಸೇರಿದ ಅಡುಗೆ ಸಹಾಯಕಿಯೊಬ್ಬರು ವರ್ಷದ ಹಿಂದೆ ನಿವೃತ್ತಿಯಾಗಿದ್ದಾರೆ. ನಂತರ ಹೊಸದಾಗಿ ನೇಮಕವಾದ ಶಿಕ್ಷಕಿ ಹಾಗೂ ಸಹಾಯಕಿ ಇಬ್ಬರೂ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆದರೆ, ಹೊಸದಾಗಿ ಅಡುಗೆ ಸಹಾಯಕಿ ಹುದ್ದೆಗೆ ನೇಮಕವಾದವರು ನೇಮಕಾತಿ ಪ್ರಕ್ರಿಯೆಯಲ್ಲಿ ತಕರಾರು ಇದ್ದ ಕಾರಣಕ್ಕೆ ಅವರು ಸದ್ಯ ಕರ್ತವ್ಯದಲ್ಲಿ ಇಲ್ಲ. ಹೀಗಾಗಿ ಅಂಗನವಾಡಿ ಶಿಕ್ಷಕಿ ಅಂಬಿಕಾ ಅವರೇ ಅಡುಗೆ ಜವಬ್ದಾರಿಯನ್ನೂ ನಿಭಾಯಿಸುತ್ತಿದ್ದಾರೆ.

“ಕಳೆದ ವರ್ಷ ನೇಮಕವಾದ ನಂತರ ಶಿಕ್ಷಕಿಯ ಜವಾಬ್ದಾರಿಯೊಂದಿಗೆ ಅಡುಗೆ ಸಹಾಯಕಿ ಕೆಲಸವೂ ನಾನೇ ಮಾಡುತ್ತಿದ್ದೇನೆ. ಈಗ ಒಟ್ಟು 30-40 ಮಕ್ಕಳ ದಾಖಲಾತಿ ಇದೆ. ಪ್ರತಿದಿನ ಮಕ್ಕಳನ್ನು ಕರೆಯಲು ಮನೆ-ಮನೆಗೆ ಹೋಗುತ್ತೇನೆ. ಆದರೆ, ಪೋಷಕರು ತಮ್ಮ ಮಕ್ಕಳನ್ನು ಕಳಿಸುತ್ತಿಲ್ಲ. ದಲಿತ ಸಮುದಾಯಕ್ಕೆ ಸೇರಿದ 5-6 ಮಕ್ಕಳು ಮಾತ್ರ ಬರುತ್ತಾರೆ. ಒಂದು ವರ್ಷದಿಂದ ಹೀಗೆ ನಡೆಯುತ್ತಿದೆ. ಈ ಹಿಂದೆ ಅಡುಗೆ ಸಹಾಯಕಿ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದರು. ಆಗ ಎಲ್ಲ ಸಮುದಾಯದ ಮಕ್ಕಳು ಬರುತ್ತಿದ್ದರು. ನಾನು ಬಂದ ನಂತರ ಅಡುಗೆಯೂ ನಾನೇ ತಯಾರಿಸುವ ಕಾರಣಕ್ಕೆ ತಮ್ಮ ಮಕ್ಕಳನ್ನು ಕಳಿಸಲು ಪೋಷಕರು ನಿರಾಕರಿಸುತ್ತಿದ್ದಾರೆ” ಎಂದು ಶಿಕ್ಷಕಿ ಅಂಬಿಕಾ ಈ ದಿನ.ಕಾಮ್‌ ಜೊತೆ ಮಾತನಾಡಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಗನವಾಡಿಗೆ ಸ್ವಂತ ಕಟ್ಟಡವಿಲ್ಲ:

ಬ್ಯಾಲಹಳ್ಳಿ(ಡಬ್ಲೂ) ಗ್ರಾಮದಲ್ಲಿ ಒಂದೇ ಅಂಗನವಾಡಿ ಕೇಂದ್ರ ಇದೆ. ಆದರೆ ಸ್ವಂತ ಕಟ್ಟಡ ಇಲ್ಲದ ಕಾರಣಕ್ಕೆ ಸುಮಾರು 40 ವರ್ಷಗಳಿಂದ ಬೇರೆ ಇಲಾಖೆಯ ಕಟ್ಟಡವೊಂದರಲ್ಲಿ ನಡೆಯುತ್ತಿದೆ. ಮಕ್ಕಳಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಕನಿಷ್ಠ ಮೂಲಭೂತ ಸೌಕರ್ಯಗಳು ಇಲ್ಲ. ಈ ಬಗ್ಗೆ ಹಲವು ಬಾರಿ ಶಿಶು ಅಭಿವೃದ್ಧಿ ಇಲಾಖೆ ಹಾಗೂ ಗ್ರಾಮ ಪಂಚಾಯತ್‌ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಸ್ಥಳದ ಕೊರತೆಯಿಂದ ಕಟ್ಟಡ ಆಗಲಿಲ್ಲ ಎಂದು ಹೇಳಿದ್ದಾರೆ. ಈಗಲಾದರೂ ಹೊಸ ಕಟ್ಟಡ ನಿರ್ಮಿಸಿ ಮಕ್ಕಳ ಕಲಿಕೆಗೆ ಅನುಕೂಲ ಮಾಡಿಕೊಡುವಂತೆ ಗ್ರಾಮದ ಸಾಮಾಜಿಕ ಕಾರ್ಯಕರ್ತ ವೈಜಿನಾಥ ಜಗದೇವ ಒತ್ತಾಯಿಸಿದ್ದಾರೆ.

ಈ ಬಗ್ಗೆ ಭಾಲ್ಕಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ತಾಲೂಕಾಧಿಕಾರಿ ಸತೀಷಕುಮಾರ ಸಂಗಮ ಈ ದಿನ.ಕಾಮ್‌ ಜೊತೆ ಮಾತನಾಡಿ, “ಈ ಬಗ್ಗೆ ನನ್ನ ಗಮನಕ್ಕೆ ಇಲ್ಲ, ತಾಲೂಕಿನ ಶಿಶು ಅಭಿವೃದ್ಧಿ ಇಲಾಖೆ, ತಹಸೀಲ್ದಾರ್‌, ತಾ.ಪಂ. ಇಒ ಹಾಗೂ ಪೊಲೀಸ್‌ ಇಲಾಖೆಯವರ ಗಮನಕ್ಕೆ ತಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು” ಎಂದು ಹೇಳಿದರು.

ಭಾಲ್ಕಿ ತಾಲೂಕು ಶಿಶು ಅಭಿವೃದ್ಧಿ ಇಲಾಖೆ ತಾಲೂಕಾಧಿಕಾರಿ ಶ್ರೀನಿವಾಸ ಬಾಳುವಾಲೆ ಈ ದಿನ.ಕಾಮ್‌ ಜೊತೆ ಮಾತನಾಡಿ, “ಈ ಬಗ್ಗೆ ನನ್ನ ಗಮನಕ್ಕೆ ಇದೆ, ಅಂಗನವಾಡಿ ಶಿಕ್ಷಕಿ ಒಬ್ಬರೇ ಎರಡು ಕರ್ತವ್ಯ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಆದರೆ ದಲಿತೆ ತಯಾರಿಸಿದ ಆಹಾರ ನಿರಾಕರಣೆ ಮಾಡುವ ಮೂಲಕ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆಯಿದೆ. ಹೀಗಾಗಿ ಹೆಚ್ಚಿನ ಮಕ್ಕಳು ಅಂಗನವಾಡಿಗೆ ಬರುವುದಿಲ್ಲ. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಗ್ರಾಮಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಲಾಗುವುದು. ಹೊಸ ಅಂಗನವಾಡಿ ಕಟ್ಟಡ ಮಂಜೂರಾಗಿದೆ, ಜಾಗವೂ ಗುರುತಿಸಲಾಗಿದೆ, ಗ್ರಾಮೀಣಾಭಿವೃದ್ಧಿ ಇಲಾಖೆಯವರ ಗಮನಕ್ಕೆ ತರಲಾಗಿದೆ, ಕೂಡಲೇ ಕಟ್ಟಡ ಕಾಮಗಾರಿ ಶುರು ಮಾಡಲಾಗುವುದು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ಸಲ್ಲಿಕೆ: ಕೇಂದ್ರ ಸಚಿವ ಖೂಬಾ

“ಜಗತ್ತಿಗೆ ʼಸಮಾನತೆ ತತ್ವʼ ಸಾರಿದ ಕಲ್ಯಾಣ ನೆಲದಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದು ತುಂಬಾ ದುರಂತದ ಸಂಗತಿ. ಅಂದು ಭಾಲ್ಕಿ ಹಿರೇಮಠದ ಡಾ. ಚನ್ನಬಸವ ಪಟ್ಟದ್ದೇವರು ಅಸ್ಪೃಶ್ಯತೆ ನಿರ್ಮೂಲನೆಗೆ ಹಳ್ಳಿಗಳಿಗೆ ತೆರಳಿ ಅರಿವು ಮೂಡಿಸಿದ್ದರು. ಆದರೆ ಅದೇ ತಾಲೂಕಿನಲ್ಲಿ ಇಂದಿಗೂ ಜಾತಿಯತೆ ತಾಂಡವಾಡುತ್ತಿರುವುದು ವಿಷಾದನೀಯ. ಅಸ್ಪೃಶ್ಯತೆ ನಿರ್ಮೂಲನೆ ಕುರಿತು ಸರ್ಕಾರ ಹಲವು ಯೋಜನೆ ಜಾರಿಗೊಳಿಸಿ ಜಾಗೃತಿ ಮೂಡಿಸಲು ತಿಳಿಸಿದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಗ್ರಾಮೀಣ ಭಾಗದಲ್ಲಿ ಜಾತಿಯತೆ ಆಚರಣೆ ಜೀವಂತವಾಗಿರುವುದು ಖಂಡನೀಯ. ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಮಾಲೋಚನೆ ಸಭೆ ನಡೆಸಿ, ಎಲ್ಲರೂ ಸೌಹಾರ್ದತೆಯಿಂದ ಬದುಕುವಂತೆ ಮನವರಿಕೆ ಮಾಡಬೇಕು. ಈ ಕುರಿತು ತನಿಖೆ ಕೈಗೊಂಡು ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು” ಗ್ರಾಮದ ದಲಿತ ಸಮುದಾಯದ ಮುಖಂಡ ಗಗನ್‌ ಫುಲೆ ಈ ದಿನ.ಕಾಮ್‌ನೊಂದಿಗೆ ಮಾತನಾಡಿ ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...