ಆರನೇ ಗ್ಯಾರೆಂಟಿ ಜಾರಿಗಾಗಿ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

Date:

ಈ ಬಾರಿಯ ಬಜೆಟ್‌ನಲ್ಲಿ ವೇತನವನ್ನ ಹೆಚ್ಚಳ ಮಾಡಲೇಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯನ್ನ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 16ನೇ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನವನ್ನು ಒಂದು ಸಾವಿರ ರೂಪಾಯಿ ಹಾಗೂ ಸಹಾಯಕಿಯರ ಗೌರವ ಧನವನ್ನು 750 ರೂಪಾಯಿ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಆದರೆ, ಆರನೇ ಗ್ಯಾರಂಟಿ ಜಾರಿ ಮಾಡಲೇಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.

ಕಳೆದ ಐದು ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಮಟ್ಟದ ಅಹೋರಾತ್ರಿ ಅನಿರ್ಧಿಷ್ಟಾವಧಿ ಧರಣಿ ನಡೆಯುತ್ತಿದೆ. ಮಾರ್ಚ್‌ 7ರಂದು ಆರಂಭವಾದ ಈ ಧರಣಿ ಯಶಸ್ವಿಯಾಗಿ ನಡೆಯುತ್ತಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನ ಈಡೇರಿಸಲೇಬೇಕು ಎಂದು ಪಟ್ಟನ್ನು ಹಿಡಿದಿದ್ದಾರೆ. ಪ್ರಮುಖವಾಗಿ ಶಿಕ್ಷಣ, ಆರೋಗ್ಯ ಎಲ್ಲವೂ ದುಬಾರಿಯಾಗುತ್ತಿರುವ ಈ ದಿನಗಳಲ್ಲಿ ಕಾರ್ಮಿಕರ ವೇತನ ಪರಿಷ್ಕರಣೆಯಾಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

 ಅಂಗನವಾಡಿ ಕಾರ್ಯಕರ್ತೆಯರುಕೇಂದ್ರ ಸರ್ಕಾರದ ಕಾರ್ಮಿಕ ಸಂಹಿತೆಗಳು ರದ್ದಾಗಬೇಕು, ಸಮಾನ ಕನಿಷ್ಟ ವೇತನ 36 ಸಾವಿರ ಪರಿಷ್ಕರಣೆ ಮಾಡಬೇಕು, ಸ್ಕೀಂ ನೌಕರರಿಗೆ ಭರವಸೆ ನೀಡಿದಂತೆ ವೇತನ ಹೆಚ್ಚಳ ಮಾಡಬೇಕು, ಗ್ರಾಮ ಪಂಚಾಯತ್, ಕಟ್ಟಡ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು, ಗುತ್ತಿಗೆ, ಹೊರಗುತ್ತಿಗೆ ನೌಕರರ ಖಾಯಂಮಾತಿಯ ಶಾಸನ ರೂಪಿಸಬೇಕು, ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಈ ಧರಣಿ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಚ್ 3ರಂದು ಗ್ರಾಮ ಪಂಚಾಯಿತಿ ಕಾರ್ಮಿಕರು, ಮಾರ್ಚ್ 4ರಂದು ಅಕ್ಷರ ದಾಸೋಹ ಕಾರ್ಮಿಕರು, ಮಾರ್ಚ್ 5ರಂದು ಕಟ್ಟಡ ನಿರ್ಮಾಣ ಕಾರ್ಮಿಕರು, ಮಾರ್ಚ್ 6ರಂದು ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾಯಂ ಹಾಗೂ ಗುತ್ತಿಗೆ ಕಾರ್ಮಿಕರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರು ಪ್ರತಿಭಟನೆಯನ್ನ ನಡೆಸಿದ್ದಾರೆ. ಮಾರ್ಚ್ 7ರಂದು ಅಂಗನವಾಡಿ ಕಾರ್ಮಿಕರು ಬೃಹತ್ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಈ ದಿನ.ಕಾಮ್‌ ಜತೆಗೆ ಮಾತನಾಡಿದ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ, “ ಅಂಗನವಾಡಿ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರ ಗೌರವಧನ ಹೆಚ್ಚಳ ಮಾಡಬೇಕಿತ್ತು. ಆದರೆ, ಮಾಡಲಿಲ್ಲ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಸಂಬಳ ಹೆಚ್ಚಳ ಮಾಡುವುದಾಗಿ ಆಶ್ವಾಸನೆ ಕೊಟ್ಟಿದ್ದರು. ಈಗಾಗಲೇ ಸಿದ್ದರಾಮಯ್ಯ ಅವರು ಮೂರನೇ ಬಜೆಟ್‌ ಅನ್ನು ಮಂಡಿಸುತ್ತಿದ್ದಾರೆ. ಕಳೆದ ಎರಡು ಬಜೆಟ್‌ನಲ್ಲಿ ವೇತನ ಹೆಚ್ಚಳ ಮಾಡಲಿಲ್ಲ. ಕಳೆದ ಎರಡು ಬಜೆಟ್‌ಗಳಲ್ಲಿ ಸಾವಿರ ರೂಪಾಯಿ ಆದರೂ ಹೆಚ್ಚಳ ಮಾಡಬೇಕಿತ್ತು. ಆದರೆ, ವೇತನ ಹೆಚ್ಚಳ ಮಾಡಲಿಲ್ಲ. ಈ ಬಾರಿಯ ಬಜೆಟ್‌ನಲ್ಲಾದರೂ ವೇತನ ಹೆಚ್ಚಳ ಮಾಡಲೇಬೇಕು. ರಾಜ್ಯ ಸರ್ಕಾರ ನಮ್ಮ ಹೋರಾಟಕ್ಕೂ ಕೂಡ ಯಾವುದೇ ಗೌರವವನ್ನು ನೀಡುತ್ತಿಲ್ಲ. ನಮ್ಮ ಹೋರಾಟ ಮುಂದೆ ಇನ್ನೂ ಕೂಡ ತೀವ್ರವಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಫ್ರೀಡಂ ಪಾರ್ಕ್‌ನಲ್ಲಿ ಮುಂದುವರೆದ ಅಹೋರಾತ್ರಿ ಧರಣಿ

“ಈ ಬಜೆಟ್‌ನಲ್ಲಿ ಕಾರ್ಮಿಕರ ಪರವಾದ ನೀತಿಗಳನ್ನ ಸರ್ಕಾರ ತಾಳಬೇಕು. ಆದರೆ, ಈಗಿನ ಬಜೆಟ್‌ ನೋಡಿದರೆ ಅದು ನಮಗೆ ಕಡಿಮೆ ಕಾಣಿಸುತ್ತಿದೆ” ಎಂದಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ನಳಿನಾಕ್ಷಿ ಮಾತನಾಡಿ, “ನಮ್ಮ ಬೇಡಿಕೆ 31 ಸಾವಿರ ಕನಿಷ್ಠ ಕೂಲಿ ಕೊಡಬೇಕು. ಆರನೇ ಗ್ಯಾರೆಂಟಿ 15 ಸಾವಿರ ಕೊಡುತ್ತೇವೆ ಎಂದು ಹೇಳಿದ್ದರು. ಅದಕ್ಕಾಗಿ ಇಂದು ಹೋರಾಟ ಮಾಡುತ್ತಿದ್ದೇವೆ. ನಾವು ನಮಗೆ ಬೇಕಾಗಿರುವುದನ್ನು ಪಡೆದುಕೊಂಡು ಹೋಗುತ್ತೇವೆ. ನಮ್ಮ ಬೇಡಿಕೆ ಈಡೇರಿಕೆಯಾಗದೇ ಇದ್ದರೇ ಉಗ್ರ ಹೋರಾಟ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಗಿರಿಜಾ ಮಾತನಾಡಿ, “ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದಾಗ ಸರ್ಕಾರಕ್ಕೆ ನಾವು ನೆನಪು ಆಗುವುದಿಲ್ಲ. ಮೊಬೈಲ್ ಅಲ್ಲಿ ಕೆಲಸ ಮಾಡುವುದಕ್ಕೆ ಹೇಳಿದ್ದಾರೆ. ಪ್ರತಿಯೊಂದು ಮಾಹಿತಿಯನ್ನ ಗ್ರೂಪ್‌ನಲ್ಲಿ ಹಾಕಿ ಎಂದು ಹೇಳುತ್ತಾರೆ. ಆದರೆ, ಇದೆಲ್ಲಾ ಹಾಕುವುದಕ್ಕೆ ಸರ್ಕಾರ ಸರಿಯಾದ ಮೊಬೈಲ್ ಕೊಡಬೇಕು. ಹಾಗೇಯೇ, ನಮ್ಮ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಬೇಕು. ಗೌರವಧನ ಹೆಚ್ಚಳ ಮಾಡಲೇಬೇಕು” ಎಂದು ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಶೈಲಜಾ ಮಾತನಾಡಿ, “ನಾವು ಪ್ರತಿ ವರ್ಷವೂ ಕೂಡ ಗೌರವಧನ ಹೆಚ್ಚಳ ಮಾಡಲೇಬೇಕು ಎಂದು ಹೋರಾಟ ಮಾಡುತ್ತಿದ್ದೇವೆ. ಆದರೆ, ಇನ್ನೂ ಕೂಡ ನಮ್ಮ ಸಂಬಳ ಹೆಚ್ಚಳ ಮಾಡಿಲ್ಲ. ಆದರೆ, ಈಗ ಮಾಹಿತಿ ಗೋತ್ತಾಯಿತು. ಈ ಬಾರಿಯ ಬಜೆಟ್‌ನಲ್ಲಿ 1000 ಹೆಚ್ಚಳ ಮಾಡಿದ್ದಾರೆ ಎಂದು ತಿಳಿಯಿತು. ಆದರೆ, ನಾವು ಪ್ರತಿ ಬಾರಿ ಹೋರಾಟಕ್ಕೆ ಬಂದಾಗ 500 ರೂಪಾಯಿ, 1,000 ರೂಪಾಯಿ ಹೆಚ್ಚಳ ಮಾಡಿ ಭಿಕ್ಷೆ ಹಾಕುತ್ತಿದೆ. ನಮಗೆ ಆರನೇ ಗ್ಯಾರಂಟಿ ಜಾರಿ ಮಾಡಲೇಬೇಕು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...