ಅಂಕೋಲಾ | ತೋಟದಲ್ಲಿ ವಿಷದ ಹಾವು ಕಚ್ಚಿ 39 ವರ್ಷದ ಮಹಿಳೆ ಸಾವು

Date:

ಅಂಕೋಲಾ: ತಮ್ಮ ಮನೆಯ ಸಮೀಪದ ತೋಟದಲ್ಲಿ ಹೂವಿನ ಗಿಡಗಳನ್ನು ನೋಡಲೆಂದು ಹೋಗಿದ್ದ ಮಹಿಳೆಯೊಬ್ಬರು ವಿಷಕಾರಿ ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟಿರುವ ಹೃದಯ ಕಲಕುವ ಘಟನೆ ಅಂಕೋಲಾ ತಾಲೂಕಿನ ರಾಮನಗುಳಿಯ ಕಂಡ್ರಮನೆಯಲ್ಲಿ ನಡೆದಿದೆ.

ಕಂಡ್ರಮನೆ ಗ್ರಾಮದ ಶೇಖರ ವೈದ್ಯ ಅವರ ಪತ್ನಿ ಯಶೋಧಾ ವೈದ್ಯ (39) ಮೃತ ದುರ್ದೈವಿ.

ಘಟನೆ ವಿವರ: ಯಶೋಧಾ ವೈದ್ಯ ಅವರು ತಮ್ಮ ಪತಿಯೊಂದಿಗೆ ತೋಟಕ್ಕೆ ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಅವರ ಎಡಗಾಲಿನ ಪಾದದ ಮೇಲ್ಭಾಗಕ್ಕೆ ವಿಷದ ಹಾವು ಕಚ್ಚಿದೆ. ತಕ್ಷಣಕ್ಕೆ ಎಚ್ಚೆತ್ತ ಕುಟುಂಬದವರು, ಯಶೋಧಾ ಅವರನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಗುಳ್ಳಾಪುರಕ್ಕೆ ಕರೆದೊಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಅವರ ಆರೋಗ್ಯ ಸ್ಥಿತಿ ಕ್ಷಣಕ್ಷಣಕ್ಕೂ ಗಂಭೀರವಾಗುತ್ತಾ ಬಂದಿದ್ದರಿಂದ, ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣವೇ ಆಂಬುಲೆನ್ಸ್ ಮೂಲಕ ಯಲ್ಲಾಪುರ ತಾಲೂಕು ಆಸ್ಪತ್ರೆಗೆ ಸಾಗಿಸಲಾಯಿತು. ದುರದೃಷ್ಟವಶಾತ್, ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಯಶೋಧಾ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಯಲ್ಲಾಪುರ ತಾಲೂಕು ಆಸ್ಪತ್ರೆ ತಲುಪಿದ ನಂತರ ವೈದ್ಯರು ಪರೀಕ್ಷಿಸಿದಾಗ, ಅವರು ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಮೃತ ಯಶೋಧಾ ವೈದ್ಯ ಅವರು ಪತಿ, ಶಾಲೆಗೆ ಹೋಗುವ ಇಬ್ಬರು ಮಕ್ಕಳು (ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿ) ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಈ ದುರ್ಘಟನೆಯಿಂದಾಗಿ ಗ್ರಾಮದಲ್ಲಿ ಶೋಕದ ವಾತಾವರಣ ಉಂಟಾಗಿದ್ದು, ಕುಟುಂಬದವರ ಆಕ್ರಂದನ ಮನ ಕಲಕುವಂತಿತ್ತು.

ಈ‌ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಆತಂಕ ಸೃಷ್ಟಿಸಿದ ಇ-ಮೇಲ್ ಬಾಂಬ್ ಬೆದರಿಕೆಗಳು: ಭಟ್ಕಳ, ಕಾರವಾರ ತಹಶೀಲ್ದಾರ್ ಕಚೇರಿಗಳಲ್ಲಿ ತಪಾಸಣೆ

ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ತನಿಖೆ ಮುಂದುವರೆಸಿದ್ದಾರೆ. ಮಳೆಗಾಲ ಶುರುವಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಹಾವುಗಳ ಓಡಾಟ ಹೆಚ್ಚಿರುವುದರಿಂದ, ತೋಟ ಮತ್ತು ಕೃಷಿ ಭೂಮಿಯಲ್ಲಿ ಕೆಲಸ ಮಾಡುವಾಗ ಹಾಗೂ ಸಂಚರಿಸುವಾಗ ಜನರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...