ಅಂಕೋಲಾ ಗುಡ್ಡ ಕುಸಿತ | ಮುಂದುವರಿದ ರಕ್ಷಣಾ ಕಾರ್ಯಾಚರಣೆ; ಲಾರಿ ಚಾಲಕ ಜೀವಂತ ಮರಳಲು ಜನರ ಪ್ರಾರ್ಥನೆ

Date:

ಕಾರವಾರ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಮೊಬೈಲ್ ಸ್ವಿಚ್ ಆನ್ ಆಗಿರುವ ಲಾರಿ ಚಾಲಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ.

ಗುಡ್ಡ ಕುಸಿತದ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆಸಲಾಗಿದೆ. ಕಳೆದ 5 ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಕಠಿಣ ಭೂಪ್ರದೇಶ ಮತ್ತು ಭಾರೀ ಮಳೆಯು ರಕ್ಷಣಾ ತಂಡಕ್ಕೆ ಪ್ರಮುಖ ಅಡಚಣೆ ಉಂಟು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರೀ ಮಳೆಯ ನಡುವೆಯೇ ರಾಷ್ಟ್ರೀಯ ಹೆದ್ದಾರಿ 66 ಅನ್ನು ತೆರವುಗೊಳಿಸುವ ಮತ್ತು ಕಾಣೆಯಾದವರ ಹುಡುಕಾಟದ ಕೆಲಸ ಮುಂದುವರೆದಿದೆ. ದುರ್ಗಮ ಪ್ರದೇಶ, ಪ್ರತಿಕೂಲ ಹವಾಮಾನ, ಗಂಗವಳ್ಳಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಹೆಚ್ಚಿನ ಭೂಕುಸಿತದ ಸಾಧ್ಯತೆಯನ್ನು ಪರಿಗಣಿಸಿ, ಜಿಲ್ಲಾಡಳಿತವು ಭಾರತೀಯ ಕಡಲ ರಕ್ಷಣಾ ಪಡೆ ಸಹಾಯ ಕೋರಿ ಶುಕ್ರವಾರ ಪತ್ರ ಬರೆದಿದೆ.

ಘಟನೆಯಲ್ಲಿ ನಾಪತ್ತೆಯಾದ ಭಾರತ್ ಬೆಂಝ್ ಕಂಪನಿಯ ಲಾರಿಯ ಚಾಲಕ, ಕೇರಳದ ಕೋಝಿಕ್ಕೋಡ್‌ನ ಅರ್ಜುನ್ (30) ಅವರ ಮೊಬೈಲ್ ಆನ್ ಆಗಿತ್ತು ಎಂಬ ಸುದ್ದಿ ಸಂಚಲನ ಮೂಡಿಸಿತ್ತು.

ಜು.16 ರಂದು ನಡೆದ ಅಪಘಾತದಲ್ಲಿ ಜೋಯಿಡಾದಿಂದ ಶಿರೂರಿಗೆ ಹೊರಟಿದ್ದ ಲಾರಿ ಸಿಕ್ಕಿ ಹಾಕಿಕೊಂಡಿರುವುದು ಖಚಿತವಾಗಿತ್ತು. ಈ ಸಂಬಂಧ ಸಂಬಂಧಪಟ್ಟ ಲಾರಿ ಕಂಪನಿಯ ಮಾಲೀಕ ಅಬ್ದುಲ್ ಮುನಾಫ್ ಅಂಕೋಲಾ ಠಾಣೆಗೆ ದೂರು ನೀಡಿದ್ದರು.

ಅವರ ಮೊಬೈಲ್ ಶುಕ್ರವಾರ ಒಮ್ಮೆ ಆನ್ ಆಗಿತ್ತು ಎಂದು ಅರ್ಜುನ್ ಕುಟುಂಬದವರು ತಿಳಿಸಿದ್ದಾರೆ. ಕೇರಳ ಸರ್ಕಾರ ಸಹ ಇದನ್ನು ದೃಢಪಡಿಸಿದೆ.

ಘಟನಾ ಸ್ಥಳಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ

ಘಟನೆ ನಡೆದಿರುವ ಸ್ಥಳಕ್ಕೆ ಇಂದು(ಜುಲೈ 21) ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೇಟಿ ನೀಡಲಿದ್ದಾರೆ ಎಂದು ಸಿಎಂ ಕಚೇರಿ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.

ಸ್ಥಳಕ್ಕೆ ದೌಡಾಯಿಸಿದ ಕೇರಳದ ಮಾಧ್ಯಮಗಳು

ಶಿರೂರಿನ ಘಟನೆಯಲ್ಲಿ ಲಾರಿ ಚಾಲಕ ಕೇರಳದ ಅರ್ಜುನ್ ಅವರ ಮೊಬೈಲ್ ಆನ್ ಆಗಿತ್ತು ಎಂಬ ಸುದ್ದಿ ಸಂಚಲನ ಮೂಡಿಸಿರುವ ಹಿನ್ನೆಲೆಯಲ್ಲಿ ಕೇರಳದ ಬಹುತೇಕ ಮುಖ್ಯವಾಹಿನಿಯ ಮಾಧ್ಯಮಗಳ ಪತ್ರಕರ್ತರ ತಂಡ ಘಟನಾ ಸ್ಥಳಕ್ಕೆ ಆಗಮಿಸಿದೆ. ಅಲ್ಲದೇ. ಕಾರ್ಯಾಚರಣೆಯ ಬಗ್ಗೆ ನಿರಂತರವಾಗಿ ವರದಿ ಪ್ರಸಾರ ಮಾಡುತ್ತಿದೆ.

ಈ ನಡುವೆ ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎಕೆಎಂ ಅಶ್ರಫ್ ಅವರು ಕೂಡ ಸ್ಥಳಕ್ಕೆ ಆಗಮಿಸಿದ್ದು, ಕಾರ್ಯಾಚರಣೆಯ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಪಡೆದುಕೊಳ್ಳುತ್ತಿದ್ದಾರೆ.

ಚಾಲಕ ಅರ್ಜುನ್ ಅವರು ಜೀವಂತವಾಗಿ ಮರಳಲು ಕುಟುಂಬದ ಸದಸ್ಯರು ಸೇರಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ಜನರು ಪ್ರಾರ್ಥನೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...