ಅನ್ನ ಭಾಗ್ಯ | ರಾಜ್ಯದ ಜೋಳ, ರಾಗಿ, ಕುಚಲಕ್ಕಿ ಹಾಗೂ ಸಿರಿಧಾನ್ಯ ಖರೀದಿಸಿ ಹಂಚಿ: ರೈತ ಸಂಘಗಳ ಮನವಿ

Date:

  • ಅನ್ನಭಾಗ್ಯ ಯೋಜನೆಯಲ್ಲಿ ರೈತರಿಂದ ಧಾನ್ಯಗಳ ಖರೀದಿಗೆ ಆಗ್ರಹ
  • ‘ರಾಜ್ಯ ಸರ್ಕಾರವು ಕೇಂದ್ರದೊಂದಿಗೆ ಸಂಘರ್ಷಕ್ಕಿಳಿಯುವುದು ಬೇಡ’

ಅನ್ನಭಾಗ್ಯ ಯೋಜನೆಯೆಂದರೆ ಕೇವಲ ಅಕ್ಕಿ ವಿತರಣೆ ಅಷ್ಟೇ ಅಲ್ಲ, ಅಕ್ಕಿಯಿಂದ ಪೌಷ್ಟಿಕತೆ ನಿವಾರಣೆಯಾಗದು. ಅದಕ್ಕಾಗಿ ಅಕ್ಕಿ ಜೊತೆಗೆ ಜೋಳ, ರಾಗಿ, ಮತ್ತು ಸಿರಿಧಾನ್ಯಗಳನ್ನು ನಮ್ಮ ರೈತರಿಂದಲೇ ಖರೀದಿಸಿ ಹಂಚಿ. ಇದರಿಂದ ಅಪೌಷ್ಟಿಕತೆಯ ಸಮಸ್ಯೆಯನ್ನೂ ನಿವಾರಿಸಬಹುದು ಎಂದು ಭಾರತೀಯ ಕೃಷಿಕ ಸಮಾಜ ಸಂಘಟನೆ ಸೇರಿ ವಿವಿಧ ಸಂಘಟನೆಗಳು ಮನವಿ ಮಾಡಿಕೊಂಡಿವೆ.

ಸೋಮವಾರ ಭಾರತೀಯ ಕೃಷಿಕ ಸಮಾಜ ಸಂಘಟನೆ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆಹಾರ ನಾಗರಿಕ ಸರಬರಾಜು ಇಲಾಖೆ ಸಚಿವ ಕೆ ಎಚ್‌ ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಿದರು.

“ಕರ್ನಾಟಕ ಸರ್ಕಾರದ 5 ಗ್ಯಾರಂಟಿಗಳಲ್ಲಿ `ಅನ್ನಭಾಗ್ಯ’ ಯೋಜನೆ ಹಸಿದವರ ಹೊಟ್ಟೆ ತುಂಬಿಸುವ ಅತ್ಯಂತ ಮಹತ್ವಾಕಾಂಕ್ಷೆ ಯೋಜನೆಯಾಗಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ಹೊರ ರಾಜ್ಯಗಳಿಂದ ಖರೀದಿ ಮಾಡುವ ಗುಣಮಟ್ಟವಲ್ಲದ, ಸಾಧಾರಣ ಅಕ್ಕಿಯನ್ನು ಹೆಚ್ಚಿನ ಧಾರಣೆ ಕೊಡುವದರಿಂದ ರಾಜ್ಯ ಸರ್ಕಾರಕ್ಕೂ ಆರ್ಥಿಕ ಹೊರೆಯಾಗುತ್ತದೆ. ಜೊತೆಗೆ ರಾಜ್ಯ ರೈತರ ಹಿತವನ್ನು ಕಡೆಗಣಿಸಿದಂತಾಗುತ್ತದೆ” ಎಂದು ಮನವಿಯಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕದಲ್ಲಿ ಪ್ರಾಂತವಾರು, ವಲಯವಾರು ಆಹಾರ ಪದ್ಧತಿ ಬೇರೆ ಬೇರೆ ಇದೆ. ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಸಂಘರ್ಷಕ್ಕಿಳಿಯದೆ ಕರ್ನಾಟಕದಲ್ಲಿ ಬೆಳೆಯುವ ಜೋಳ, ರಾಗಿ, ಕುಚಲಕ್ಕಿ ಹಾಗೂ ಸಿರಿಧಾನ್ಯಗಳನ್ನು ಪಡಿತರಕ್ಕೆ ಬೇಕಾಗುವಷ್ಟು ಆಹಾರ ಧಾನ್ಯವನ್ನು ಕೃಷಿ ಇಲಾಖೆಯ ಅಥವಾ ರಾಜ್ಯ ಆಹಾರ ನಿಗಮ ಮುಖಾಂತರ ಖರೀದಿಸಬಹುದು” ಎಂದು ಸಲಹೆ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಅನ್ನಭಾಗ್ಯ: ರಾಜ್ಯದಲ್ಲೇ ಬೇಡಿಕೆ ಪೂರೈಕೆಯಷ್ಟು ಅಕ್ಕಿ ಇದ್ದರೆ ಇಲ್ಲೇ ಖರೀದಿ: ಸಿಎಂ ಸಿದ್ದರಾಮಯ್ಯ

“ಕೃಷಿ ಸಂಪರ್ಕ ಕೇಂದ್ರಗಳು ಕೇವಲ ಬೀಜ, ಕೃಷಿ ಸಲಕರಣೆ ಪೂರೈಸುವ ಕೇಂದ್ರಗಳಾಗಿವೆ. ಉಳಿದ ಸಮಯದಲ್ಲಿ ಕೃಷಿ ಸಂಪರ್ಕ ಕೇಂದ್ರಗಳನ್ನೇ ರೈತರ ಉತ್ಪನ್ನ ಖರೀದಿ ಕೇಂದ್ರಗಳಾಗಿ ಪರಿವರ್ತನೆ ಮಾಡಿದರೆ, ಇದರಿಂದ ಸರ್ಕಾರಕ್ಕೆ ಮತ್ತು ರೈತರಿಗೆ ನೆರವಾದಂತಾಗುತ್ತದೆ. ಮತ್ತು ಸಂಪರ್ಕಗಳಿರುವದರಿಂದ ಸಾಗಾಣಿಕೆ ವೆಚ್ಚ ತಗ್ಗಲಿದೆ. ಹೋಬಳಿಗೊಂದು ಕೃಷಿ ಕರ್ನಾಟಕ ಸರ್ಕಾರ ನೇರವಾಗಿ ರೈತರಿಂದ ಖರೀದಿಸುವದರಿಂದ ಹಲವಾರು ಪ್ರಯೋಜನ ಪಡೆಯಬಹುದಾಗಿದೆ” ಎಂದು ಮನವಿಯಲ್ಲಿ ಕೋರಲಾಗಿದೆ.

“ಇದರಿಂದ ರೈತರಿಗೆ ಪಾರದರ್ಶಕ ವ್ಯವಹಾರ, ಗುಣಮಟ್ಟ ಆಹಾರಧಾನ್ಯ, ಉತ್ತಮಧಾರಣೆ, ಸಕಾಲಕ್ಕೆ ಹಣ ಪಾವತಿ, ಸಾಗಾಣಿಕೆ ವೆಚ್ಚ ಉಳಿತಾಯ, ಏಜಂಟರ ಹಾವಳಿ ನಿಯಂತ್ರಣ ಮತ್ತು ಮುಖ್ಯವಾಗಿ ಸರ್ಕಾರದ ಹಣ ಹಣ ನೇರವಾಗಿ ರೈತರಿಗೆ ತಲುಪುತ್ತದೆ. ಪ್ರಾಂತವಾರು, ವಲಯವಾರು ಉಪಯೋಗಿಸುವ ಧಾನ್ಯಗಳಿಗೆ ಪ್ರಾಧಾನ್ಯತೆ ನೀಡಿದಂತಾಗುತ್ತದೆ” ಎಂದು ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...