ಬೆಂಗಳೂರು | ಉದ್ಯೋಗ ಭದ್ರತೆ ಹಾಗೂ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಹಮಾಲಿ ಕಾರ್ಮಿಕರ ಪ್ರತಿಭಟನೆ

Date:

ಅನ್ನಭಾಗ್ಯ ಯೋಜನೆ ಜಾರಿಗೆ ಬಂದು 10 ವರ್ಷಗಳು ಕಳೆದಿವೆ. ಈಗ ಯೋಜನೆ ಬಗ್ಗೆ ಪರ-ವಿರೋಧ ಚರ್ಚೆಯಾಗುತ್ತಿವೆ. ಆದರೆ, ಯೋಜನೆಯ ಯಶಸ್ವಿಗೆ ಕಾರಣಕರ್ತರಾಗಿರುವ ಲೋಡಿಂಗ್ (ಹಮಾಲಿ) ಕಾರ್ಮಿಕರ ಪರಿಸ್ಥಿತಿ ಬಗ್ಗೆ ಯಾರು ಮಾತನಾಡುತ್ತಿಲ್ಲ. ಅವರ ಬದುಕಿನ ಬಗ್ಗೆ ಯಾರು ಗಮನಿಸುತ್ತಿಲ್ಲ. ಅವರ ಸಮಸ್ಯೆಗಳನ್ನು ಆಳುವವರು ಆಲಿಸುತ್ತಿಲ್ಲ ಎಂದು ಕರ್ನಾಟಕ ಶ್ರಮಿಕ ಶಕ್ತಿಯ ರಾಜ್ಯ ಸಂಚಾಲಕ ವರದ ರಾಜೇಂದ್ರ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಕರ್ನಾಟಕ ಶ್ರಮಿಕ ಶಕ್ತಿ ಮತ್ತು ಕರ್ನಾಟಕ ರಾಜ್ಯ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕಾರ್ಮಿಕರ ಒಕ್ಕೂಟವು ಸೋಮವಾರ ಆಯೋಜಿಸಿದ್ದ ‘ಲೋಡಿಂಗ್ ಕಾರ್ಮಿಕರ ದಶಮಾನೋತ್ಸವ ಹಾಗೂ ಶ್ರಮಿಕರ ಹಕ್ಕೊತ್ತಾಯ ಸಮಾವೇಶದಲ್ಲಿ’ ಅವರು ಮಾತನಾಡಿದರು. “ಪಡಿತರ ವಿತರಣಾ ಯೋಜನೆಯ ಯಶಸ್ಸಿಗಾಗಿ ಲೋಡಿಂಗ್ ಕಾರ್ಮಿಕರು ಸಾಕಷ್ಟು ಬೆವರು, ರಕ್ತ ಬಸಿದಿದ್ದಾರೆ. ಅದರೆ, ಅವರನ್ನು ಸರ್ಕಾರಗಳು ಕಡೆಗಣಿಸುತ್ತಿವೆ. ಕೋಲ ಹೆಚ್ಚಳ ಸೇರಿದಂತೆ ನಾನಾ ಹಕ್ಕುಗಳಿಗಾಗಿ ಕಾರ್ಮಿಕರು ಹೋರಾಟ ನಡೆಸುತ್ತಿದ್ದಾರೆ. ಈ ಕಾರ್ಮಿಕರಿಗೆ ಕೂಲಿ ಭದ್ರತೆ ಒದಗಿಸಬೇಕು” ಎಂದು ಒತ್ತಾಯಿಸಿದರು.

“ಲೋಡಿಂಗ್‌ ಕಾರ್ಮಿಕರು ಹೋರಾಟ ನಡೆಸಿ, ಇ.ಎಸ್.ಐ, ಪಿ.ಎಫ್ ಸೇರಿದಂತೆ ಕೆಲವು ಹಕ್ಕುಗಳನ್ನು ಪಡೆದುಕೊಂಡಿದ್ದಾರೆ. ಆದರೂ, ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ಆಹಾರ ಧಾನ್ಯಗಳನ್ನು ಕಡಿಮೆ ಮಾಡಿ ಕಾರ್ಮಿಕರ ಸಂಪಾದನೆಯನ್ನು ಕಿತ್ತುಕೊಂಡಿತು. ಈ ನಾಲ್ಕು ವರ್ಷಗಳ ಅವಧಿಯಲ್ಲಿ ಒಮ್ಮೆಯೂ ಸಹ ಕೂಲಿ ಹೆಚ್ಚಳ ಮಾಡಲಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾದರೂ, ಕೂಲಿ ಹೆಚ್ಚಳವಾಗದೇ ಕಾರ್ಮಿಕರು ಬದುಕು ನಡೆಸುವುದೇ ದುಸ್ಥರವಾಗಿತ್ತು. ಕಳೆದ ತಿಂಗಳು (ಜೂನ್‌) ಕೂಲಿ ಹೆಚ್ಚಳ ಮಾಡಲಾಗಿದೆ. ಆದರೆ, ಲೋಡಿಂಗ್ ಕಾರ್ಮಿಕರಿಗೆ ಸರ್ಕಾರ ನಿಗದಿ ಮಾಡಿರುವ ಹೊಸ ಕೂಲಿ ಇನ್ನೂ ಸಿಕ್ಕಿಲ್ಲ. ಅವರಿಗೆ ಕೆಲಸದ ಭದ್ರತೆ ಇಲ್ಲದಿರುವುದೇ ಮುಖ್ಯ ಸಮಸ್ಯೆಯಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರ ನಿಗದಿ ಮಾಡಿರುವ ಕೂಲಿ ದರಕ್ಕೆ ಅನುಗುಣವಾಗಿ ಇ.ಎಸ್‌.ಐ ಮತ್ತು ಪಿ.ಎಫ್‌ ಪಾವತಿಯಾಗುತ್ತಿಲ್ಲ. ರ್ಮಿಕ ಕಾನೂನುಗಳ ಜಾರಿ ಮಾಡಲು ಒತ್ತಾಯಿಸಿದರೆ ಕೆಲಸದಿಂದ ಕಿತ್ತುಹಾಕಿ ದೌರ್ಜನ್ಯ ಎಸಗಲಾಗುತ್ತಿದೆ. ಯಾರೇ ಗುತ್ತಿಗೆದಾರರು ಬದಲಾದರೂ ಕಾರ್ಮಿಕರನ್ನು ಕೆಲಸದಿಂದ ನಿವೃತಿ ವಯಸ್ಸಿನ ತನಕ ಕಿತ್ತುಹಾಕಬಾರದೆಂದು ಸರ್ಕಾರ ಆದೇಶಿಸಬೇಕು” ಎಂದು ವರದರಾಜೇಂದ್ರ ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಇಂದಿನಿಂದ ‘ಅನ್ನಭಾಗ್ಯ’ ಯೋಜನೆ ಜಾರಿ: 5 ಕೆಜಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ ಹಣ

“ಅನ್ನಭಾಗ್ಯ ಯೋಜನೆಗೆ ಪೂರಕವಾಗಿ ರಾಜ್ಯ ಉಗ್ರಾಣ ನಿಗಮ, ರೈಲ್ವೈ ಗೂಡ್ ಶೆಡ್, ಎಪಿಎಂಸಿಗಳಲ್ಲಿ ಹಾಗೂ ಕರ್ನಾಟಕ ಪಾನೀಯ ನಿಗಮದ ಗೋದಾಮುಗಳಲ್ಲಿ, ಹಡಗು ನಿಲ್ದಾಣದಲ್ಲಿ ವರ್ತಕರ ಅಂಗಡಿಗಳಲ್ಲಿ ಪೇಟೆ ಬೀದಿಗಳಲ್ಲಿ ಹತ್ತಾರು ಲಕ್ಷ ಹಮಾಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದು ಇವರಿಗೆ ನಿರ್ದಿಷ್ಟ ಪ್ರಮಾಣದ ಕೂಲಿ ಕೆಲಸದ ಭದ್ರತೆ ಇಲ್ಲವಾಗಿದೆ.  ಹಮಾಲಿ ಕಾರ್ಮಿಕರ ಕೆಲಸದ ಭದ್ರತೆ ಮತ್ತು ಸಂಬಳ ಭದ್ರತೆಗಾಗಿ ಮಹಾರಾಷ್ಟ್ರದಲ್ಲಿ 1969ರಲ್ಲೇ ಕಲ್ಯಾಣ ಮಂಡಳಿ ರಚನೆ ಮಾಡಿದ್ದು ಕರ್ನಾಟಕದಲ್ಲೂ ಹಮಾಲಿ ಕಾರ್ಮಿಕರ ಗಣತಿ ಮಾಡಿ ಲೋಡಿಂಗ್ ಮತ್ತು ಅನ್ ಲೋಡಿಂಗ್ ಕಾರ್ಮಿಕರಿಗೆ  ಪ್ರತ್ಯೇಕ ಕಲ್ಯಾಣ ಮಂಡಳಿ ಸ್ಥಾಪನೆ ಮಾಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಕಾರ್ಮಿಕರ ಹಕ್ಕೊತ್ತಾಯಗಳು

  1. ಕಾರ್ಮಿಕರಿಗೆ ಸರ್ಕಾರ ನಿಗದಿ ಮಾಡಿದ ವೇತನ ಅಥವಾ ಇಎಸ್‌ಐ ಮತ್ತು ಪಿಎಫ್‌ ನೀಡುವುದಿಲ್ಲ. ಹಾಗಾಗಿ ಅನ್ನಭಾಗ್ಯ ಯೋಜನೆ ಜಾರಿ ಮಾಡುವ ಹಮಾಲಿ ಕಾರ್ಮಿಕರಿಗೆ ನೇರ ವೇತನ ಪಾವತಿ ಮಾಡಬೇಕು. ನಿವೃತ್ತಿಯ ವಯಸ್ಸಿನವರೆಗೆ ಅವರನ್ನು ಕೆಲಸದಿಂದ ತೆಗೆಯದಂತೆ ನಿಯಮ ರೂಪಿಸಬೇಕು.
  2. ಅನ್ನಭಾಗ್ಯ ಜಾರಿ ಮಾಡುವ ಹಮಾಲಿ ಕಾರ್ಮಿಕರಿಗೆ ಕನಿಷ್ಟ ವೇತನ ಕಾಯಿದೆಯ ನಿಯಮದ ಅನುಗುಣವಾಗಿ ಪ್ರತಿವರ್ಷ ಕೂಲಿ ದರ ಹೆಚ್ಚಿಸಲು ಸಮಗ್ರ ನಿಯಮ ರೂಪಿಸಬೇಕು.
  3. ಕಾರ್ಮಿಕ ವಿರೋಧಿಯಾದ 8 ಗಂಟೆಗಳ ಕೆಲಸದ ಅವಧಿಯನ್ನು 12ಗಂಟೆಗೆ ಹೆಚ್ಚಿಸಿದ ಆದೇಶವನ್ನು ಈ ಕೂಡಲೇ ವಾಪಸ್ಸು ಪಡೆಯಬೇಕು.
  4. ಎಲ್ಲ ಹಮಾಲಿ ಕಾರ್ಮಿಕರ ಕೆಲಸದ ಭದ್ರತೆ ಮತ್ತು ಸಂಬಳ ಭದ್ರತೆಗಾಗಿ ಮಹಾರಾಷ್ಟ್ರ ಮಾದರಿಯಲ್ಲಿ ಹಮಾಲಿ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆ ಮಾಡಬೇಕು.
  5. ಎಲ್ಲ ಗುತ್ತಿಗೆ ಕಾರ್ಮಿಕರಿಗೂ  ಸಮಾನ ಕೆಲಸಕ್ಕೆ ಸಮಾನ ವೇತನ ನೀತಿಯನ್ನು ಜಾರಿಗೆ ತರಬೇಕು. ಸಂಬಳದ ಖಾತ್ರಿ ಮಾಡಬೇಕು.
  6. ಎಲ್ಲ ಗುತ್ತಿಗೆ, ಅಸಂಘಟಿತ ಹಾಗೂ ಭದ್ರತೆಯಿಲ್ಲದ ಕಾರ್ಮಿಕರಿಗೂ ಕನಿಷ್ಟ 30 ಸಾವಿರ ವೇತನ ಹಾಗೂ ಉದ್ಯೋಗ ಭದ್ರತೆಯನ್ನು ಖಾತ್ರಿಗೊಳಿಸಿ ನೀತಿ ರೂಪಿಸಬೇಕು.
  7.  ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5ಕೆಜಿ ಅಕ್ಕಿ ಬದಲಿಗೆ ನಗದು ಹಣ ನೀಡುವುದನ್ನು ನಿಲ್ಲಿಸಿ ಅಕ್ಕಿಯನ್ನೇ ನೀಡಬೇಕು ಮತ್ತು ಕೇರಳ ಮಾದರಿಯಲ್ಲಿ ಸಮಗ್ರ ಆಹಾರ ಧಾನ್ಯಗಳನ್ನು ಪಡಿತರ ವ್ಯವಸ್ಥೆ ಮೂಲಕ ನೀಡಿ ಯೋಜನೆ  ಬಲಪಡಿಸಬೇಕು.
  8. ರಾಜ್ಯದ ಎಲ್ಲಾ ಅಸಂಘಟಿತ ಕಾರ್ಮಿಕರ ಪರಿಸ್ಥಿತಿಯ ಬಗ್ಗೆ ಅಧ್ಯಯನ ಮತ್ತು ಗಣತಿ ಮಾಡಿ ಎಲ್ಲಾ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆ ಮಾಡಿ ಸಾಮಾಜಿಕ ಭದ್ರತೆ ನೀಡಬೇಕು.
931f0c6c51d5094fd09854fe60afc89197e460e7a77cac502ebfd2074238fae8?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...