ಬಜೆಟ್‌ 23-24 | ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆ ಘೋಷಣೆ

Date:

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಬಜೆಟ್‌ ಭಾಷಣದಲ್ಲಿ ತೋಟಗಾರಿಕೆ ಇಲಾಖೆ ಕುರಿತು ವಿಷಯ ಪ್ರಸ್ತಾಪಿಸಿದ ಅವರು, “ರೈತರ ಆದಾಯವನ್ನು ಹೆಚ್ಚಿಸುವುದರಲ್ಲಿ ತೋಟಗಾರಿಕಾ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ. ತೋಟಗಾರಿಕಾ ವಲಯದಲ್ಲಿನ ರಾಜ್ಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ, ದ್ರಾಕ್ಷಿ, ದಾಳಿಂಬೆ, ಮಾವು ಮತ್ತಿತರ ಹಣ್ಣು, ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು” ಎಂದರು.

“2023-24ನೇ ಸಾಲಿನಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು. ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ ಎಂಟು ಶೀತಲ ಘಟಕಗಳನ್ನು ನಿರ್ಮಾಣ ಮಾಡಲಾಗುವುದು. ಅನನ್ಯವಾದ ರುಚಿ ಮತ್ತು ಕಂಪನ್ನು ಹೊಂದಿರುವ ಚಿಕ್ಕಮಗಳೂರು, ಕೊಡಗು ಮತ್ತು ಬಾಬಾ ಬುಡನಗಿರಿಯ ಅರೇಬಿಕಾ ಕಾಫಿ ವೈವಿಧ್ಯಗಳು GI Tag ಹೊಂದಿವೆ. ರಾಜ್ಯದ ಕಾಫಿಯನ್ನು ಇನ್ನಷ್ಟು ಪ್ರಚುರಪಡಿಸಿ ಜನಪ್ರಿಯಗೊಳಿಸಲು ಮತ್ತು ಕಾಫಿ ಎಕೋ ಟೂರಿಸಂ ಅನ್ನು ಉತ್ತೇಜಿಸಲು ಕರ್ನಾಟಕದ ಕಾಫಿಗೆ ಬ್ರಾಂಡಿಂಗ್‌ ಮಾಡಲು ಕ್ರಮ ವಹಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು GI Tag ಗಳನ್ನು ಪಡೆದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್‌ ಉತ್ತೇಜಿಸಲು ನೂತನ ಕಾರ್ಯಕ್ರಮವನ್ನು ರೂಪಿಸಲಾಗುವುದು” ಎಂದರು.

“ವಾಣಿಜ್ಯ ಹೂವಿನ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ ಹೊಂದುವ ಸಾಮರ್ಥ್ಯ ಹೊಂದಿದ್ದು, ಇವುಗಳ ತಳಿಗಳ ಕೊರತೆ ನಿವಾರಿಸಲು ಅಂತಹ ತಳಿಗಳನ್ನು ಆಮದು ಮಾಡಿಕೊಂಡು ರೈತರಿಗೆ ಕೈಗೆಟಕುವ ದರದಲ್ಲಿ ಒದಗಿಸಲು ಕ್ರಮವಹಿಸಲಾಗುವುದು” ಎಂದು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...