ಬೀದರ್‌ | ಭಗವಂತ ಖೂಬಾ ಕುಟುಂಬದ ಮತ್ತೊಂದು ವಂಚನೆ ಬಯಲಿಗೆ: ಕ್ರಮಕ್ಕೆ ಆಗ್ರಹ

Date:

ಸುಳ್ಳು ಹೇಳುವುದು, ಸುಳ್ಳು ದಾಖಲೆ ನೀಡಿ ಸರ್ಕಾರಕ್ಕೆ ವಂಚಿಸಿ ಕೋಟಿ ಕೋಟಿ ಲೂಟಿ ಮಾಡುವುದೇ ಭಗವಂತ ಖೂಬಾ ಮತ್ತು ಸೋದರರ ಕಾಯಕವಾಗಿದ್ದು, ಇಡೀ ಖೂಬಾ ಕುಟುಂಬ ರಾಜ್ಯದಲ್ಲಿ ಹಗಲು ದರೋಡೆ ಮಾಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಅರವಿಂದ ಅರಳಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಆರೋಪಿಸಿದ್ದಾರೆ.

ಶನಿವಾರ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕೇಂದ್ರ ಸಚಿವ ಭಗವಂತ ಖೂಬಾ 2 ಎಕರೆ ಯಲ್ಲಿ ಗಣಿಗಾರಿಕೆಗೆ ಅನುಮತಿ ಪಡೆದು, 8 ಎಕರೆಯಲ್ಲಿ ಅಕ್ರಮ ಗಣಿಗಾರಿಕೆ ಮಾಡಿದ್ದು, ಕಲಬುರಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ 25 ಕೋಟಿ ರೂ.ದಂಡ ವಿಧಿಸಿ ನೋಟಿಸ್ ನೀಡಿರುವ ಬೆನ್ನಲ್ಲೇ ಈಗ ಭಗವಂತ ಖೂಬಾ ಅವರ ಸೋದರ ಸಂಬಂಧಿ ಜಗದೀಶ್ ಖೂಬಾ ಕರ್ಮಕಾಂಡ ಬಯಲಾಗಿದೆ” ಎಂದು ತಿಳಿಸಿದ್ದಾರೆ.

“ಬೀದರ್ ಜೆಪಿ ನಗರ ನಿವಾಸಿಯಾಗಿರುವ ಭಗವಂತ ಖೂಬಾ ಸೋದರ ಸಂಬಂಧಿ ಜಗದೀಶ್ ಖೂಬಾ ತಮ್ಮ ಬಳಿ ನಿಗದಿತ ಅರ್ಹತೆ ಇಲ್ಲದಿದ್ದರೂ, ಸುಳ್ಳು ದಾಖಲೆ ನೀಡಿ ಪ್ರಥಮ ದರ್ಜೆ ಗುತ್ತಿಗೆದಾರರು ಎಂದು ಸರ್ಕಾರಿ ಕಾಮಗಾರಿಗಳ ಗುತ್ತಿಗೆ ಪಡೆದಿದ್ದಾರೆ ಎಂದು ಬೆಂಗಳೂರು ದಕ್ಷಿಣ ವಿಭಾಗದ ಸಂಪರ್ಕ ಮತ್ತು ಕಟ್ಟಡ ವಿಭಾಗದ ಮುಖ್ಯ ಎಂಜಿನಿಯರ್ ಅವರು, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಲೋಕೋಪಯೋಗಿ ಇಲಾಖೆ ಇವರಿಗೆ ಪತ್ರ ಬರೆದಿದ್ದಾರೆ. ಇದರಿಂದ ಇವರ ಇಡೀ ಕುಟುಂಬ ಸುಳ್ಳು ದಾಖಲೆ ನೀಡಿ ಸರ್ಕಾರಕ್ಕೆ ವಂಚನೆ ಮಾಡುವುದು ಸಾಬೀತಾಗಿದೆ” ಎಂದು ಗಂಭೀರವಾಗಿ ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಹಂತ 4 ಅಡಿ ಪ್ಯಾಕೇಜ್ 371 ಬೀದರ್ ಜಿಲ್ಲೆ, ಔರಾದ್ ತಾಲೂಕಿನ ಮಹಾರಾಷ್ಟ್ರ ಬಾರ್ಡರ್ -ಮುರ್ಕಿ-ಹಂದರ್ಕಿ ರಾಜ್ಯ ಹೆದ್ದಾರಿ 122 ಕಿ.ಮೀ 0.00ರಿಂದ ಕಿ.ಮೀ.18.00 ರಸ್ತೆ ಅಭಿವೃದ್ಧಿ ಪಡಿಸುವ ಕಾಮಗಾರಿ ಪಡೆಯಲು ತಮ್ಮ ಬಳಿ ನಿಗದಿತ ಪ್ರಮಾಣದ ವಾಹನ ಮತ್ತು ಉಪಕರಣ ಇಲ್ಲದಿದ್ದರೂ ನಕಲಿ ದಾಖಲೆ ಕೊಟ್ಟು ಸರ್ಕಾರಕ್ಕೆ ಮೋಸ ಮಾಡಿದ್ದಾರೆ. ತಮ್ಮ ಬಳಿ ವಾಹನಗಳು ಇಲ್ಲದಿದ್ದರೂ ಕೊಟ್ಟಿ ದಾಖಲೆ ಸೃಷ್ಟಿಸಿ ಮೋಸ ಮಾಡಿ ಟೆಂಡರ್ ಪಡೆದಿದ್ದು, ಇದು ವಂಚನೆ ಪ್ರಕರಣವಾಗಿದೆ. ಇಲಾಖೆ ಕೂಡಲೇ ಪೊಲೀಸ್ ಠಾಣೆಗೆ ದೂರು ನೀಡಿ, ಸುಳ್ಳು ದಾಖಲೆ ಸೃಷ್ಟಿಸಿ, ಸರ್ಕಾರಕ್ಕೆ ವಂಚನೆ ಮಾಡಿರುವ ಜಗದೀಶ್ ಖೂಬಾ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಉಳಿಯುವುದಿಲ್ಲ : ಮಲ್ಲಿಕಾರ್ಜುನ ಖರ್ಗೆ

“ಭಗವಂತ ಖೂಬಾ ಮತ್ತೊಬ್ಬ ಸೋದರನಿಗೆ ಬ್ರಿಮ್ಸ್ ಆಸ್ಪತ್ರೆಯ ಹೊರಗುತ್ತಿಗೆ ನೌಕರರನ್ನು ಒದಗಿಸುವ ಗುತ್ತಿಗೆ ಕೊಡಿಸಿದ್ದು, ಬಡವರಿಗೆ, ದಲಿತರಿಗೆ ಕನಿಷ್ಠ ವೇತನ ನೀಡದೆ, ವಂಚಿತರ, ಶೋಷಿತರ ಸಂಬಳವನ್ನು ಗುಳಂ ಮಾಡಿರುವ ಖೂಬಾ ಕುಟುಂಬ ರಾಜ್ಯದ ಎಲ್ಲೆಡೆ ಇಂತಹ ದ್ರೋಹ, ವಂಚನೆ ಮಾಡುತ್ತಿದೆ. ಖೂಬಾ ಮತ್ತು ಸೋದರರ ಎಲ್ಲ ಗುತ್ತಿಗೆ, ಸರ್ಕಾರಿ ಕಾಮಗಾರಿಯ ಕುರಿತಂತೆ ಸಮಗ್ರ ತನಿಖೆ ಮಾಡಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...