ಬೀದರ್‌ | ಅಯೋಧ್ಯೆಯಲ್ಲಿ ದಲಿತ ಯುವತಿಯ ಕೊಲೆ : ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ

Date:

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ದಲಿತ ಯುವತಿಯ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ರಾಷ್ಟ್ರೀಯ ವಿದ್ಯಾರ್ಥಿ ಮತ್ತು ಯುವ ವೇದಿಕೆ (ಎನ್‌ಎಸ್‌ವೈಎಫ್) ಆಗ್ರಹಿಸಿದೆ.

ಈ ಸಂಬಂಧ ಮಂಗಳವಾರ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಔರಾದ್ ತಹಸೀಲ್ದಾರ್ ಮಲ್ಲಶೆಟ್ಟಿ ಚಿದ್ರೆ ಅವರಿಗೆ ಸಲ್ಲಿಸಿದರು.

ʼಅಯ್ಯೋಧ್ಯೆಯ ಫೈಜಾಬಾದ್‌ನಲ್ಲಿ 22 ವರ್ಷದ ದಲಿತ ಸಮುದಾಯದ ಯುವತಿಯ ಮೇಲೆ ಅಮಾನುಷವಾಗಿ ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಿ ಬೆತ್ತಲೆ ದೇಹವನ್ನು ಕಾಲುವೆಯಲ್ಲಿ ಎಸೆದಿರುವ ಘಟನೆ ಮಾನವ ಸಮಾಜ ತಲೆತಗ್ಗಿಸುವ ಹೇಯ ಕೃತ್ಯ. ಇದನ್ನು ತೀವ್ರವಾಗಿ ಖಂಡಿಸುತ್ತೇವೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಜನವರಿ 30ರಂದು ಯುವತಿ ನಾಪತ್ತೆಯಾಗಿದ್ದಳು. ಪೊಲೀಸರಿಗೆ ದೂರನ್ನೂ ನೀಡಲಾಗಿತ್ತು. ಆದರೆ ಪತ್ತೆಹಚ್ಚುವಲ್ಲಿ ವಿಳಂಬವಾಗಿ, ಫೆಬ್ರುವರಿ 1ನೇ ತಾರೀಖು ಕಾಲುವೆಯಲ್ಲಿ ಮೃತದೇಹ ಸಿಕ್ಕಿತ್ತು. ʼನಾಪತ್ತೆಯಾಗಿದ್ದ ನಮ್ಮ ಮಗಳನ್ನು ಕೊಲೆ ಮಾಡಲಾಗಿದೆ, ಆಕೆಯ ಕಣ್ಣುಗಳನ್ನು ಕಿತ್ತು ಹಾಕಲಾಗಿದೆ, ಮೃತದೇಹದ ಮೇಲೆ ಭೀಕರ ಗಾಯಗಳು ಕಂಡು ಬಂದಿದೆʼ ಎಂದು ಯುವತಿ ಕುಟುಂಬ ಹೇಳಿದೆ. ಆದರೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದರೂ ಅಯೋಧ್ಯೆಯ ಬಂದೋಬಸ್ತ್‌ನಲ್ಲಿದ್ದೇವೆ ಎಂದು ಹೇಳಿ ಯುವತಿಯ ಕೊಲೆಗೆ ಕಾರಣರಾಗಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼಬಹುಜನ ವಿರೋಧಿ ಬಿಜೆಪಿ ನೇತ್ರತ್ವದ ಆಡಳಿತ ಇರುವ ಉತ್ತರಪ್ರದೇಶದಲ್ಲಿ ಅನ್ಯಾಯ, ಅತ್ಯಾಚಾರ, ಕೊಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ರಾಮಜನ್ಮಭೂಮಿಯಲ್ಲಿ ಇಂಥ ಘಟನೆ ನಡೆದಿರುವುದು ಅಘಾತಕಾರಿ ಸಂಗತಿಯಾಗಿದೆ. ಆರೋಪಿಗಳನ್ನು ಗಲ್ಲಿಗೇರಿಸಬೇಕು. ಆಡಳಿತ ವರ್ಗದ ವಿರುದ್ಧ ಕ್ರಮ ಜರುಗಿಸಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಯೋಧ್ಯೆ ಅತ್ಯಾಚಾರ ಪ್ರಕರಣ; ಶೋಷಿತ ಸಮುದಾಯಕ್ಕೆ ಸಿಗದ ರಕ್ಷಣೆ

ಈ ಸಂದರ್ಭದಲ್ಲಿ ಎನ್‌ಎಸ್‌ವೈಎಫ್ ರಾಜ್ಯ ಸಂಚಾಲಕ ಶಿವಕುಮಾರ್‌ ಕಾಂಬಳೆ ಸೇರಿದಂತೆ ರವಿ ಯರನಾಳೆ, ಆನಂದ ಕಾಂಬಳೆ, ದಿನೇಶ ಶಿಂಧೆ, ಪ್ರಕಾಶ ಭಂಗಾರೆ, ಸುಜೀತ ಶಿಂಧೆ, ಸತ್ಯಾಪಾಲ ವಾಘಮಾರೆ, ಆದರ್ಶ ನಾಗೂರೆ, ವಿನೋದ ಡೋಳೆ, ವಿಶಾಲ ಕಾಂಬಳೆ, ಸುಬುದ್ಧ ನಾಲಂದೆ, ದಯಾನಂದ ಮದನೂರೆ, ದೀಪಕ ಯರನಾಳೆ, ಯೇಶುರಾಜ ಮಾಳಗೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...