ಸೋಲೂರು ಹೋಬಳಿಯನ್ನು ಮಾಗಡಿಯಲ್ಲೇ ಉಳಿಸಿಕೊಳ್ಳಲು ಮನವಿ

Date:

ಸೋಲೂರು ಹೋಬಳಿಯನ್ನು ಮಾಗಡಿ ತಾಲೂಕಿನಲ್ಲಿಯೇ ಉಳಿಸಿಕೊಳ್ಳಲು ಆರಂಭದಲ್ಲಿಯೇ ನಾನು ಧ್ವನಿ ಎತ್ತಿದ್ದು, ಅದಕ್ಕೆ ಯಾರಿಂದಲೂ ಸೂಕ್ತ ಸ್ಪಂದನೆ ಸಿಗಲಿಲ್ಲ. ಈಗ ಸೋಲೂರು ಬೇಕು ಅಂತ ಪ್ರತಿಭಟನೆ ಮಾಡಿ ಏನು ಪ್ರಯೋಜನ? ರೈಲು ಹೋದ ಮೇಲೆ ಟಿಕೆಟ್ ಕೊಂಡಂತೆ ಆಗಿದೆ ನಿಮ್ಮ ಸ್ಥಿತಿ ಎಂದು ಶಾಸಕ ಎಚ್‌ ಸಿ ಬಾಲಕೃಷ್ಣ ಅಸಹಾಯಕತೆ ವ್ಯಕ್ತಪಡಿಸಿದರು.

ಮಾಗಡಿ ತಾಲೂಕು ಕಚೇರಿಯಲ್ಲಿ ಸೋಮವಾರ ನಡೆದ ಜನಸಂಪರ್ಕ ಸಭೆಯಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಅವರು, “ಸೋಲೂರು ಹೋಬಳಿ ಉಳಿಸಿಕೊಳ್ಳಲು ಎತ್ತಿದ ಧ್ವನಿಗೆ ಜನರಿಂದ ಸೂಕ್ತ ಸ್ಪಂದನೆ ಸಿಗಲಿಲ್ಲ” ಎಂದು ಅಸಮಾಧಾನ ಹೊರ ಹಾಕಿದರು.

“ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಕಂಡು ಸೋಲೂರನ್ನು ಮಾಗಡಿ ತಾಲೂಕಿನಲ್ಲಿಯೇ ಉಳಿಸಿಕೊಡುವಂತೆ ಮನವಿ ಮಾಡಿದ್ದೆ. ಜನರು ಬೆಂಬಲಿಸಲಿಲ್ಲ. ಬದಲಾಗಿ ಅಸಹಕಾರ ತೋರಿದರು. ಈ ವಿಚಾರದಲ್ಲಿ ತಲೆ ಹಾಕದಂತೆ ಕೆಲವರು ನೇರವಾಗಿ ಹೇಳಿದರು. ಹಾಗಾಗಿ ನಾನೂ ತಟಸ್ಥನಾದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇವಲ ಮಾಗಡಿ ಜನ ಹೋರಾಟ ಮಾಡಿದರೆ ಪ್ರಯೋಜನವಾಗುವುದಿಲ್ಲ. ಸೋಲೂರು ಭಾಗದ ಜನರೂ ಒಗ್ಗಟ್ಟಿನಿಂದ ಪ್ರತಿಭಟನೆ ಮಾಡಬೇಕು. ಆಗ ಮಾತ್ರ ಸೋಲೂರು ಹೋಬಳಿಯನ್ನು ಮಾಗಡಿಯಲ್ಲೇ ಉಳಿಸಿಕೊಳ್ಳಲು ಸರ್ಕಾರದ ಮೇಲೆ ಒತ್ತಡ ಹಾಕಬಹುದು” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ನವೆಂಬರ್ ತಿಂಗಳ ಮೊದಲ ಭಾನುವಾರ ಸೋಲೂರು ಪ್ರವಾಸಿ ಮಂದಿರದಲ್ಲಿ ಸೋಲೂರು ಹೋಬಳಿಯ ಕನಿಷ್ಟ ಐದು ಸಾವಿರ ಜನರನ್ನು ಸೇರಿಸಿ ಪ್ರತಿಭಟನೆ ಸಭೆ ಆಯೋಜಿಸಿ. ಅಲ್ಲಿ ಜನಗಳ ತೀರ್ಮಾನ ನೋಡಿ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡೋಣ” ಎಂದು ಬಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆ: ಗಣತಿದಾರರ ವಿರೋಧ

“ಸೋಲೂರು ಹೋಬಳಿಯನ್ನು ಮಾಗಡಿ ತಾಲೂಕಿನಲ್ಲೇ ಉಳಿಸುವಂತೆ ಆಕ್ಷೇಪಣೆ ಪತ್ರಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಶಾಸಕರು ಸರ್ಕಾರದ ಮೇಲೆ ಒತ್ತಡ ತಂದು ಸೋಲೂರು ಹೋಬಳಿಯನ್ನು ಮಾಗಡಿಯಲ್ಲೇ ಉಳಿಸುವ ಕೆಲಸ ಮಾಡಬೇಕು. ಇಲ್ಲವಾದರೆ ರೈತರು ಪ್ರತಿ ಕೆಲಸಕ್ಕೂ ದೊಡ್ಡಬಳ್ಳಾಪುರಕ್ಕೆ ತೆರಳುವ ಅನಿವಾರ್ಯತೆ ನಿರ್ಮಾಣವಾಗಲಿದೆ. ನಾವು ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ. ನಮ್ಮ ಜತೆಗೆ ನೀವೂ ನಿಲ್ಲಬೇಕು” ಎಂದು ಪ್ರಗತಿಪರ ರೈತ ಕನ್ನಡ ಕುಮಾರ್ ಮನವಿ ಮಾಡಿದರು.

ಸೋಲೂರು ಹೋಬಳಿಯನ್ನು ಮಾಗಡಿ ತಾಲೂಕಿನಲ್ಲೇ ಉಳಿಸುವಂತೆ ನೂರಾರು ರೈತರು, ಸಾರ್ವಜನಿಕರು, ಶಾಸಕ ಹಾಗೂ ತಹಶೀಲ್ದಾರ್‌ ಶರತ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...