ವಿಜಯಪುರ | ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹ

Date:

ಜಿಲ್ಲೆಯಲ್ಲಿ ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಗಲ್ಲಿ ಗಲ್ಲಿಗಳಲ್ಲಿ ದಿನಸಿ ಅಂಗಡಿ ಕಿರಾಣಿ ಮತ್ತು ಪಾನ್ ಶಾಪ್ ಡಾಬಾಗಳಲ್ಲಿ ವಿಪರೀತವಾಗಿ ಮಧ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದು, ಕ್ರಮಕೈಗೊಳ್ಳುವಂತೆ ಆಗ್ರಹಿಸಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದೆ.

ಎಲ್ಲೆಂದರಲ್ಲಿ ಮದ್ಯ ಸಿಗುತ್ತಿರುವ ಕಾರಣ ಜಿಲ್ಲೆಯ ಬಹುತೇಕ ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳು ಮದ್ಯ ವ್ಯಸನಿಗಳಾಗುತ್ತಿರುವುದು ಖೇದಕರ ಸಂಗತಿ. ಅನುಮತಿ ಪಡೆದಿರುವ ಮತ್ತು ಪಡೆಯದಿರುವ ಬಹುತೇಕ ಮದ್ಯದ ಅಂಗಡಿಗಳು ಬೆಳಗ್ಗೆ 6 ಗಂಟೆಗೆ ಆರಂಭವಾಗುತ್ತವೆ. ಇದು ಶಾಲಾ ಮಕ್ಕಳ ಮೇಲೆ ತೀವ್ರತರಹದ ಪರಿಣಾಮವನ್ನು ಬೀರುತ್ತಿದೆ.

ಬೆಳಗ್ಗೆ ಮಕ್ಕಳು ಶಾಲೆ ಟ್ಯೂಷನ್ ಸೇರಿದಂತೆ ವಿವಿಧ ರೀತಿಯ ಕಲಿಕಾ ಅಭ್ಯಾಸಗಳಿಗಾಗಿ ಹೊರಡುತ್ತಿರುವಾಗ ಮಧ್ಯದ ಅಂಗಡಿಗಳು ತೆರೆದಿರುವುದು ಮಧ್ಯ ಕುಡಿದು ಗಾಳಿಯಲ್ಲಿ ತೋರಾಡುತ್ತಿರುವ ದೃಶ್ಯಗಳು, ಜಗಳಾಡುವ ದೃಶ್ಯಗಳು ಮಕ್ಕಳ ಮನಸ್ಸಿನ ಮೇಲೆ ವಿಪರೀತವಾಗಿ ಪರಿಣಾಮವನ್ನು ಬೀರುತ್ತಿವೆ. ಇದು ಅವರ ಕಲಿಕಾ ಮೌಲ್ಯಗಳ ಮೇಲೆ ವ್ಯತರಿಕ್ತವಾದ ಪರಿಣಾಮವನ್ನು ಬೀರುತ್ತಿದೆ. ಆದ್ದರಿಂದಾಗಿ ಅನುಮತಿ ಪಡೆದಿರುವ ಮತ್ತು ಅನುಮತಿ ಪಡೆಯದೇ ಇರುವ ಜಿಲ್ಲೆಯ ಎಲ್ಲಾ ಮದ್ಯದ ಅಂಗಡಿಗಳಿಂದ ಅಬಕಾರಿ ಇಲಾಖೆಯು ಪ್ರತಿ ತಿಂಗಳು ಹಪ್ತಾ ವಸೂಲಿ ಮಾಡುತ್ತಿರುವ ವಿಷಯ ಹೊಸ ಸಂಗತಿಯಾಗಿ ಏನು ಉಳದಿಲ್ಲ. ಅಬಕಾರಿ ಇಲಾಖೆಯ ಅಧಿಕಾರಿಗಳ ಕುಮ್ಮಕ್ಕು ಮತ್ತು ಲಂಚ ಬಾಕ ಪ್ರವೃತ್ತಿಯಿಂದ ಇದು ನಿರಂತರವಾಗಿ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿ ಅಂಗಡಿಗಳಿಂದ ತಿಂಗಳಿಗೆ 25 ರಿಂದ 30 ಸಾವಿರ ರೂಪಾಯಿ ಹಪ್ತಾ ವಸೂಲಿ ಮಾಡುತ್ತಾರೆ ಎಂದು ಜಿಲ್ಲೆಯ ಸಾರ್ವಜನಿಕರಲ್ಲಿ ತೀವ್ರ ತರಹದ ಚರ್ಚೆಯಲ್ಲಿರುವ ಸಂಗತಿಯಾಗಿದೆ. ಆದ್ದರಿಂದಾಗಿ, ಅಬಕಾರಿ ಇಲಾಖೆಯ ಅಧಿಕಾರಿಗಳ ಹಪ್ತಾ ವಸೂಲಿ ದಂಧೆಯನ್ನು ಮೋಟಕುಗೊಳಿಸಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಮಳಿಗೆಗಳು ಮತ್ತು ಡಾಬಾಗಳನ್ನು ಬಂದು ಮಾಡಿ. ಜಿಲ್ಲೆಯ ಮಕ್ಕಳ ಭವಿಷ್ಯದ ಶೈಕ್ಷಣಿಕ ಬದುಕಿನ ಉಳಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಬರೆದು ಮನವಿ ಮಾಡಿದ್ದಾರೆ.

ಈ ವೇಳೆ ರಾಜ್ಯ ಸಂಘಟನೆ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ರಾಕೇಶ್ ಇಂಗಳಗಿ, ಹಮೀದ್ ಇನಾಮ್ದಾರ್, ಪ್ರವೀಣ್ ಕನಸೆ, ವಿಕ್ರಮ್ ವಾಗ್ಮೊರೆ ಹಾಗೂ ಶ್ರೀಶೈಲ ಮಠ ಮೈಬೂಬ್ ತಾಂಬೋಳಿ, ರಾಘವೇಂದ್ರ ಚಲವಾದಿ, ಸಾದಿಕ್ ಪಟವೆಗಾರ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...