ನಾಳೆಯಿಂದ ‘ಗೃಹಲಕ್ಷ್ಮಿ’ ಯೋಜನೆಯ ಅರ್ಜಿ ಸಲ್ಲಿಕೆಗೆ ಅವಕಾಶ: ಲಕ್ಷ್ಮಿ ಹೆಬ್ಬಾಳ್ಕರ್

Date:

  • ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ನಾಳೆ ಚಾಲನೆ
  • ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರಲ್ಲ

ನಾಳೆಯಿಂದ (ಜೂ.16) ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೂ ಈ ಯೋಜನೆ ಲಾಭ ಸಿಗುತ್ತದೆ. ನಾಳೆಯಿಂದ ಅರ್ಜಿ ಸಲ್ಲಿಸಬಹುದು” ಎಂದರು.

“ಕೆಲವು ತಾಂತ್ರಿಕ ಕಾರಣಗಳಿಂದ ಅರ್ಜಿ ಸಲ್ಲಿಸುವುದು ಸ್ವಲ್ಪ ವಿಳಂಬವಾಗಿದೆ. ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು. 1902 ಹೆಲ್ಪ್ ಲೈನ್ ಮೂಲಕ ಏನಾದರೂ ಗೊಂದಲಗಳಿದ್ದರೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶುಕ್ರವಾರ ಮಧ್ಯಾಹ್ನ 1.30ಕ್ಕೆ ‘ಗೃಹಲಕ್ಷ್ಮಿ’ ಯೋಜನೆಯ ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ ಶಕ್ತಿಭವನದಲ್ಲಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಚಾಲನೆ ಚಾಲನೆ ನೀಡಲಿದ್ದಾರೆ. ನಮ್ಮ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿದ್ದು, ಇದರ ಉಸ್ತುವಾರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆಯುತ್ತದೆ” ಎಂದರು.

ಟ್ಯಾಕ್ಸ್ ಪೇಯರ್ಸ್ ಆಗಿದ್ರೆ ಅರ್ಜಿ ರಿಜೆಕ್ಟ್

“ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕುವ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ರೆ ಅರ್ಜಿ ರಿಜೆಕ್ಟ್ ಆಗಲಿದೆ. ಇ- ಗವರ್ನೆನ್ಸ್ ಮೂಲಕ ಅರ್ಜಿ ಹಾಕುವ ವ್ಯವಸ್ಥೆ ಮಾಡಿದ್ದೇವೆ. ಅರ್ಜಿದಾರರ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ರೆ ಅರ್ಜಿ ಸ್ವೀಕಾರ ಆಗುವುದಿಲ್ಲ. ಹೀಗಾಗಿ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ” ಎಂದು ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದ್ದಾರೆ.

ಗಮನಿಸಬೇಕಾದ ಪ್ರಮುಖ ಅಂಶಗಳು

  • ಅರ್ಜಿದಾರರು 16-06-2023 ರಿಂದ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ. (https://sevasindhugs.karnataka.gov.in/gruhalakshmi)
  • ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ.
    ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್‌ ಖಾತೆ ವಿವರಗಳು ಅಗತ್ಯವಾಗಿರುತ್ತದೆ.
  • ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೆ ಅರ್ಜಿಯನ್ನು ಸ್ವತಃ ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿರುತ್ತದೆ.
    ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ.
  • ಮಂಜೂರಾತಿಯ ನಂತರ ನೇರ ನಗದು ವರ್ಗಾವಣೆ ಮಾಡಲಾಗುವುದು.
  • ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿರುತ್ತದೆ.
  • ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ – 1902 ಗೆ ಸಂಪರ್ಕಿಸಬಹುದಾಗಿದೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...