ಅಧಿವೇಶನ | ನೋಂದಣಿ ತಿದ್ದುಪಡಿ ವಿಧೇಯಕ ಅಂಗೀಕಾರ, ನಕಲಿ ನೋಂದಣಿಗೆ 3 ವರ್ಷ ಜೈಲು

Date:

  • ನಕಲಿ ನೋಂದಣಿ ಮಾಡುವ ಅಧಿಕಾರಿ ವರ್ಗಕ್ಕೆ ಖಡಕ್ ಎಚ್ಚರಿಕೆ
  • ನಕಲಿ ನೋಂದಣಿ ಮಾಡಿದರೆ ಅಧಿಕಾರಿಗಳಿಗೆ ಮೂರು ವರ್ಷ ಜೈಲು

ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಥವಾ ಕಾನೂನಿನಡಿಯಲ್ಲಿ ನಿಷೇಧಿಸಲಾದ ಇತರ ದಾಖಲೆಗಳ ಆಧಾರದ ಮೇಲೆ ಆಸ್ತಿ ವಹಿವಾಟುಗಳನ್ನು ಅಧಿಕೃತಗೊಳಿಸುವ ಅಧಿಕಾರಿಗಳಿಗೆ ಶಿಕ್ಷೆ ವಿಧಿಸುವ ಮತ್ತು ಅಂತಹ ನಕಲಿ ನೋಂದಣಿಯನ್ನು ರದ್ದುಗೊಳಿಸುವ ನೋಂದಣಿ ವಿಧೇಯಕವನ್ನು ಸಚಿವ ಕೃಷ್ಣಭೈರೇಗೌಡ ಬುಧವಾರ ವಿಧಾನಸಭೆಯಲ್ಲಿ ಮಂಡಿಸಿದರು.

ಪ್ರತಿಪಕ್ಷಗಳ ನಾಯಕರ ಗಲಾಟೆ ನಡುವೆ ಈ ಮಸೂದೆ ಸರ್ವಾನುಮತದಿಂದ ಅಂಗೀಕಾರಗೊಂಡಿತು. ಸದನದಲ್ಲಿ ಮಸೂದೆಯನ್ನು ಮಂಡಿಸಿ ಮಾತನಾಡಿದ ಸಚಿವರು, “ನೋಂದಣಿ ಕಾಯ್ದೆ 1908ರಲ್ಲಿ ಜಾರಿಯಾಗಿದೆ. ಈ ಕಾಯ್ದೆಯಲ್ಲಿ ಯಾವುದೇ ಮಾಲೀಕತ್ವ ಇಲ್ಲದ, ದಾಖಲೆ ಇಲ್ಲದ ಅಥವಾ ನಿಜವಾದ ಮಾಲೀಕರಂತೆ ನಟಿಸುವ ಮೂಲಕ ಮಾಡಿದ ಮೋಸದ ನೋಂದಣಿಯನ್ನು ರದ್ದುಪಡಿಸಲು ನೋಂದಣಿ ಪ್ರಾಧಿಕಾರಕ್ಕೆ ಅಧಿಕಾರ ಇರುವುದಿಲ್ಲ” ಎಂದು ಹೇಳಿದರು.

“ನೊಂದ ಮಾಲೀಕರು ಸಿವಿಲ್ ನ್ಯಾಯಾಲಯದ ಮೂಲಕ ಮೋಸದ ನೋಂದಣಿಯನ್ನು ರದ್ದು ಮಾಡಬೇಕಿರುತ್ತದೆ. ಆದರೆ, ನ್ಯಾಯಾಂಗ ಆದೇಶ ಪಡೆಯುವ ಪ್ರಕ್ರಿಯೆ ಕನಿಷ್ಠ 10 ವರ್ಷಕ್ಕೂ ಹೆಚ್ಚಿರುತ್ತದೆ. ಇದರಿಂದಾಗಿ ಆಸ್ತಿ ಮಾಲೀಕರಿಗೆ ಕಿರುಕುಳ, ತೊಂದರೆ ಅನ್ಯಾಯವಾಗುತ್ತದೆ. ಸಾರ್ವಜನಿಕರಿಗೆ ಉಂಟಾಗುವ ಇಂತಹ ಅನ್ಯಾಯವನ್ನು ತಡೆಯುವ ನಿಟ್ಟಿನಲ್ಲಿ ಈ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ” ಎಂದು ಮಸೂದೆಯನ್ನು ಸಮರ್ಥಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಕಲಿ ದಾಲೆಗಳ ಮೂಲಕ ಮೋಸ ಮಾಡುವವರಿಗೆ ಸಹಾಯವಾಗುತ್ತಿತ್ತು. ಕೆಲವು ಅಧಿಕಾರಿಗಳು ತಮಗೇ ಗೊತ್ತಿಲ್ಲದೆ ನಕಲಿ ನೋಂದಣಿ ಮಾಡಿರುತ್ತಾರೆ. ಇನ್ನೂ ಕೆಲವು ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ನಕಲೀದಾರರ ಜೊತೆ ಶಾಮೀಲಾಗಿ ತಪ್ಪು ನೋಂದಣಿ ಮಾಡಿದ್ದಾರೆ. ಇಂತಹ ಹಲವು ಪ್ರಕರಣಗಳ ದೊಡ್ಡ ಪಟ್ಟಿಯೇ ನನ್ನ ಬಳಿ ಇದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರಿನಲ್ಲಿ ಹುಟ್ಟಿರುವ ‘ಇಂಡಿಯಾ’ದ ದಾರಿ ಸಲೀಸಲ್ಲ

“ಪ್ರಸ್ತುತ ಶಾಸಕರಾಗಿರುವ ನರೇಂದ್ರ ಸ್ವಾಮಿ, ಅಭಯ್ ಪಾಟೀಲ್ ಅವರ ಆಸ್ತಿಯನ್ನೇ ಹೀಗೆ ನಕಲು ದಾಖಲೆಯ ಮೇಲೆ ಕಬಳಿಸಲಾಗಿತ್ತು. ಮಾಜಿ ಶಾಸಕರಾದ ಗೂಳಿಹಟ್ಟಿ ಶೇಖರ್ ಹಾಗೂ ಬಿ ಶಂಕರಾನಂದ್ ಸಹ ಇಂತಹ ಪರಿಸ್ಥಿತಿಯನ್ನು ಎದುರಿಸಿದ್ದರು. ಶಾಸಕರಿಗೇ ಈ ಪರಿಸ್ಥಿತಿಯಾದರೆ, ಸಾಮಾನ್ಯರ ಪರಿಸ್ಥಿತಿ ಏನು? ಹೀಗಾಗಿ ಆಡಳಿತ ಸುಧಾರಣೆ, ಆಡಳಿತ ಸರಳೀಕರಣ ಮತ್ತು ಕಚೇರಿಗಳಲ್ಲಿ ವಿಳಂಬ, ಶೋಷಣೆ, ಸುಲಿಗೆ ಇಲ್ಲದೆ ಜನರ ಕೆಲಸ ತಕ್ಷಣ ಆಗಬೇಕು ಎಂಬ ಕಾರಣದಿಂದ ಇಂದು ನೋಂದಣಿ ತಿದ್ದುಪಡಿ ವಿಧೇಯಕವನ್ನು ಜಾರಿಗೆ ತರಲಾಗಿದೆ ತರಲಾಗುತ್ತಿದೆ” ಎಂದು ಸಚಿವ ಕೃಷ್ಣಭೈರೇಗೌಡ ಸದನಕ್ಕೆ ತಿಳಿಸಿದರು.

ನೋಂದಣಿ ತಿದ್ದುಪಡಿ ಮಸೂದೆ 2023

ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆಯ ಪ್ರಕಾರ, ನೋಂದಣಿ ಅಧಿಕಾರಿ (ಸಾಮಾನ್ಯವಾಗಿ ಸಬ್-ರಿಜಿಸ್ಟ್ರಾರ್) ನಕಲಿ ದಾಖಲೆಗಳನ್ನು ನೋಂದಾಯಿಸಲು ನಿರಾಕರಿಸಬೇಕು. ಯಾವುದೇ ಸ್ಥಿರ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳು ಕೇಂದ್ರ ಅಥವಾ ರಾಜ್ಯ ಕಾಯ್ದೆಗಳಿಂದ ನಿಷೇಧಿಸಲಾಗಿದ್ದು, ಅಂತಹ ಆಸ್ತಿಗಳ ದಾಖಲೆಗಳನ್ನು ನೋಂದಾಯಿಸಲು ಅಧಿಕಾರಿಗಳು ನಿರಾಕರಿಸಬೇಕು. ಅಧಿಕಾರಿಗಳು ನಿಯಮ ಮೀರಿ ನಕಲಿ ದಾಖಲಾತಿಗಳನ್ನು ನೋಂದಾಯಿಸಿದರೆ, ಈ ಮಸೂದೆಯು ಅಧಿಕಾರಿಗಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಲು ಪ್ರಸ್ತಾಪಿಸುತ್ತದೆ. ದಾಖಲೆಗಳ ಮೋಸದ ನೋಂದಣಿಯಲ್ಲಿ ತೊಡಗಿರುವ ಕಂಪನಿಗಳನ್ನು ಶಿಕ್ಷಿಸಲು ಮಸೂದೆ ಪ್ರಸ್ತಾಪಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...