ತುರುವೇಕೆಯಲ್ಲಿ ಅ.29 ರಿಂದ ಅಪ್ಪು ಟಿಪಿಎಲ್ ಕ್ರಿಕೆಟ್ ಪಂದ್ಯಾವಳಿ ಆರಂಭ

Date:

ಅಪ್ಪು ಪುಣ್ಯಸ್ಮರಣೆ ಅಂಗವಾಗಿ ತುರುವೇಕೆರೆಯಲ್ಲಿ ಮೊದಲ ಬಾರಿಗೆ ಐಪಿಎಲ್ ಕ್ರಿಕೆಟ್ ಮಾದರಿಯಲ್ಲಿ ನಡೆಯಲಿರುವ ಅಪ್ಪು ತುರುವೇಕೆರೆ ಪ್ರೀಮಿಯರ್ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಅ 29 ರಂದು ಚಾಲನೆ ನೀಡಲಾಗುವುದು ಎಂದು ಕ್ರಿಕೆಟ್ ಪಂದ್ಯಾವಳಿಯ ವ್ಯವಸ್ಥಾಪಕ ಹಾಗೂ ಆರ್ ಎಸ್ ಅಕ್ಷರ ಅಕಾಡೆಮಿ ಅಧ್ಯಕ್ಷ ಸಿ.ಎಸ್ .ಮೂರ್ತಿ ತಿಳಿಸಿದರು.

ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಪ್ಪು ಕಪ್ ಪಂದ್ಯಾವಳಿಯನ್ನು ಆ.29 ರಂದು ತುರುವೇಕೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಪಂದ್ಯಾವಳಿಗೆ ಚಾಲನೆ ನೀಡಲಾಗುವುದು. 30 ಹಾಗೂ 31 ರಂದು ವಿವಿಧ ತಂಡಗಳೊಂದಿಗೆ ಸೌಹಾರ್ದಯುತ ಪಂದ್ಯಗಳನ್ನು ಆಡಿಸಲಾಗುತ್ತದೆ ಎಂದರು.

ಈಗಾಗಲೇ ಅಪ್ಪು ಕಪ್ ಚಿಹ್ನೆಯನ್ನು ಬಿಡುಗಡೆಗೊಳಿಸಲಾಗಿದೆ. ತಾಲೂಕಿನ ಗ್ರಾಮೀಣ ಪ್ರತಿಭೆಗಳು ಮತ್ತು ಪಟ್ಟಣದ ಪ್ರತಿಭೆಗಳನ್ನು ಸಮನಾಂತರವಾಗಿ ಗುರುತಿಸುವ ಸಲುವಾಗಿ ತಂಡಗಳ ಆಯ್ಕೆಯ ಸಂಬಂಧ 16 ತಂಡಗಳನ್ನು ಮಾಡಲಾಗಿದೆ. ಈ 16 ತಂಡಗಳ ಮಾಲೀಕರು ತಮಗೆ ಬೇಕಾದ ಕ್ರೀಡಾಪಟುಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. 16 ತಂಡಗಳಿಗೂ ಅಪ್ಪು ಅಭಿನಯಿಸಿರುವ ಚಲನ ಚಿತ್ರಗಳಾದ ಗಂಧದಗುಡಿ, ರಣವಿಕ್ರಮ, ಅಜಯ್, ದೊಡ್ಡಮನೆ ಹುಡುಗ, ವಂಶಿ, ರಾಜಕುಮಾರ, ಬೆಟ್ಟದ ಹೂವು, ಪವರ್, ಅರಸು, ಅಣ್ಣಾ ಬಾಂಡ್, ಯುವರತ್ನ, ಬಿಂದಾಸ್, ಪರಮಾತ್ಮ, ಆಕಾಶ್, ಜೇಮ್ಸ್, ಮಿಲನ ಎಂದು ಹೆಸರಿಡಲಾಗಿದೆ ಎಂದು ಸಿ.ಎಸ್.ಮೂರ್ತಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕಿನಿಂದ ಸುಮಾರು 300 ಕ್ಕೂ ಹೆಚ್ಚು ಆಟಗಾರರು ನೊಂದಣಿ ಮಾಡಿಸಿಕೊಂಡಿದ್ದರು. ಅವರಲ್ಲಿ ಸುಮಾರು 240 ಮಂದಿ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಫ್ರಾಂಚೈಸೀಯವರು ಕ್ರಿಕೆಟ್ ಆಟಗಾರನ್ನು ಬಿಡ್ ಮೂಲಕ ಆಯ್ಕೆ ಮಾಡಿಕೊಂಡಿದ್ದಾರೆ. ರಾಜು, ಅಭಿಷೇಕ್, ಶಿವ, ಕುಶಾಲ್ ಹೆಚ್ಚು ಮೊತ್ತಕ್ಕೆ ಹರಾಜು ಆದ ಆಟಗಾರರಾಗಿದ್ದಾರೆ. ಈ ಕ್ರಿಕೆಟ್ ಪಂದ್ಯಾವಳಿ ಉದ್ದೇಶ ತಾಲೂಕಿನ ಪ್ರತಿಭಾನ್ವಿತ ಆಟಗಾರಿಗೆ ಅವಕಾಶ ದೊರೆಯುವಂತೆ ಮಾಡುವುದು. ತಾಲೂಕಿನ ಎಲ್ಲಾ ಕ್ರೀಡಾ ಪ್ರೇಮಿಗಳು ಆಸಕ್ತರು ಅಭಿಮಾನಿಗಳು ಪಂದ್ಯಾವಳಿಗಳನ್ನು ಯಶಸ್ವಿಯಾಗಿ ನಡೆಯಲು ಸಹಕರಿಸಬೇಕು ಎಂದು ಆರ್ ಎಸ್ ಅಕ್ಷರ ಅಕಾಡೆಮಿ ಅಧ್ಯಕ್ಷ ಸಿ.ಎಸ್. ಮೂರ್ತಿ ವಿನಂತಿಸಿಕೊಂಡರು.

ಪತ್ರಿಕಾಗೋಷ್ಠಿ ಯಲ್ಲಿ ನವೀನ್ ಬಾಬು, ಮಲ್ಲಾಘಟ್ಟ ಪುಟ್ಟಣ್ಣ, ರವಿ, ಅಶೋಕ, ನಂದೀಪ್ ಮಂಜಣ್ಣ, ವಿನೋದ್, ಕಿಟ್ಟಿ, ಬಾಣಸಂದ್ರ ಕೃಷ್ಣ ಮಾದಿಗ, ಚಿರಂಜೀವಿ, ಅರುಣ್ ಕುಮಾರ್, ಗಣೇಶ್, ಉಮೇಶ್, ಕೇಶವ ಇತರರು ಇದ್ದರು

ವರದಿ – ಎಸ್. ನಾಗಭೂಷಣ್ ತುರುವೇಕೆರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...