ಅರಕಲಗೂಡು ದಸರಾ ಮಹೋತ್ಸವ: ಬೂಕರ್ ಪ್ರಶಸ್ತಿ ವಿಜೇತ ಅನುವಾದಕಿ ದೀಪಾ ಬಸ್ತಿಗೆ ಆಹ್ವಾನ

Date:

ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಪ್ರತಿವರ್ಷ ನಡೆಯುವ ಅದ್ಧೂರಿ ದಸರಾ ಮಹೋತ್ಸವ ಸೋಮವಾರದಿಂದ ಆರಂಭಗೊಂಡಿದ್ದು, ಶಾಸಕ ಎ.ಮಂಜು ಅವರು ವಿಜಯದಶಮಿ ದಿನದ ಅರಕಲಗೂಡು ದಸರಾ ಕಾರ್ಯಕ್ರಮಕ್ಕೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಮೊದಲ ಕನ್ನಡ ಅನುವಾದಕಿ ದೀಪಾ ಬಸ್ತಿ ಅವರಿಗೆ ಆಹ್ವಾನ ನೀಡಿದ್ದಾರೆ.

ನವರಾತ್ರಿ ಸಮಾರಂಭದೊಂದಿಗೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಭಕ್ತರ ಭಾಗವಹಿಸುವಿಕೆಯೊಂದಿಗೆ ಮಹೋತ್ಸವ ಉತ್ಸಾಹದಿಂದ ಸಾಗುತ್ತಿದೆ.

ಕೊಡಗು ಜಿಲ್ಲೆಯ ಮಡಿಕೇರಿಯ ನೂತನ ಬಡಾವಣೆಯಲ್ಲಿ ನೆಲೆಸಿರುವ ಬರಹಗಾರ್ತಿ, ಪತ್ರಕರ್ತೆ ಮತ್ತು ಸಾಹಿತ್ಯ ಅನುವಾದಕಿಯಾಗಿರುವ ದೀಪಾ ಬಸ್ತಿಯವರಿಗೆ ಅವರ ನಿವಾಸದಲ್ಲಿ ಮಾಜಿ ಸಚಿವ ಎ ಮಂಜು ಅವರು ಆಹ್ವಾನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೀಪಾ ಬಸ್ತಿ ಅವರು ಕನ್ನಡ ಲೇಖಕಿ. ಬಾನು ಮುಷ್ತಾಕ್ ಅವರ ಸಣ್ಣ ಕಥಾ ಸಂಕಲನ ‘ಎದೆಯ ಹಣತೆ’ಯನ್ನು ಆಂಗ್ಲ ಭಾಷೆಗೆ ಅನುವಾದಿಸಿ ‘ಹಾರ್ಟ್ ಲ್ಯಾಂಪ್’ ಎಂಬ ಹೆಸರಿನಲ್ಲಿ ಪ್ರಕಟಿಸಿದ್ದರು. ಈ ಕೃತಿ 2025ರಲ್ಲಿ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗಳಿಸಿದ್ದು, ಇದು ಕನ್ನಡ ಭಾಷೆಯಿಂದ ಅನುವಾದಗೊಂಡ ಮೊದಲ ಕೃತಿ ಮತ್ತು ಮೊದಲ ಸಣ್ಣ ಕಥಾ ಸಂಕಲನವಾಗಿದೆ. ಈ ಪ್ರಶಸ್ತಿಯ ಮೂಲಕ ದೀಪಾ ಬಸ್ತಿ ಭಾರತದ ಮೊದಲ ಅನುವಾದಕಿಯಾಗಿ ಮತ್ತು ಬಾನು ಮುಷ್ತಾಕ್ ಎರಡನೇ ಭಾರತೀಯ ಲೇಖಕಿಯಾಗಿ ಇತಿಹಾಸ ಸೃಷ್ಟಿಸಿದ್ದಾರೆ.

ನಿನ್ನೆಯೇ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿದ್ದ ಬಾನು ಮುಷ್ತಾಕ್ ಅವರೊಂದಿಗೆ ಈ ಸಾಹಿತ್ಯ ಸಾಧನೆಯಲ್ಲಿ ದೀಪಾ ಬಸ್ತಿ ಅವರ ಪಾತ್ರ ಅಪಾರವಾಗಿದ್ದು, ಅರಕಲಗೂಡು ದಸರಾ ಸಮಿತಿಯು ಈ ಸಾಧನೆಯನ್ನು ಗೌರವಿಸಿ ವಿಜಯದಶಮಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಎಡಗಾಲಿನ ರಾಡ್ ತೆಗೆಯಲು ಬಲಗಾಲಿಗೆ ಶಸ್ತ್ರಚಿಕಿತ್ಸೆ: ಹಿಮ್ಸ್ ವೈದ್ಯರ ಎಡವಟ್ಟಿಗೆ ಮಹಿಳೆ ಕಂಗಾಲು

“ಇದು ನಮ್ಮ ಜಿಲ್ಲೆಗೆ ಮತ್ತು ಕನ್ನಡ ಸಾಹಿತ್ಯಕ್ಕೆ ಗೌರವದ ಕ್ಷಣ. ದೀಪಾ ಬಸ್ತಿ ಅವರಂತಹ ಪ್ರತಿಭೆಯನ್ನು ನಮ್ಮ ಮಹೋತ್ಸವದಲ್ಲಿ ಭಾಗವಹಿಸಲು ಆಹ್ವಾನಿಸುವುದು ನಮ್ಮ ಆನಂದ” ಎಂದು ಶಾಸಕ ಎ.ಮಂಜು ಹೇಳಿದರು.

ಅರಕಲಗೂಡು ದಸರಾ ಮಹೋತ್ಸವವು ಹಾಸನ ಜಿಲ್ಲೆಯ ಪ್ರಮುಖ ಸಾಂಸ್ಕೃತಿಕ ಆಚರಣೆಯಾಗಿದ್ದು, ನವರಾತ್ರಿ ಅವಧಿಯಲ್ಲಿ ದೇವಿ ಪೂಜೆಗಳು, ನೃತ್ಯ-ಸಂಗೀತ ಕಾರ್ಯಕ್ರಮಗಳು, ಪ್ರತಿಭಾ ಪ್ರದರ್ಶನಗಳು ಮತ್ತು ವಿಜಯದಶಮಿ ದಿನದ ರಥಯಾತ್ರೆಯೊಂದಿಗೆ ಉಜ್ವಲವಾಗಿ ಜರುಗುತ್ತದೆ. ಈ ವರ್ಷ ಶಾರದೀಯ ನವರಾತ್ರಿ ಸೆಪ್ಟೆಂಬರ್ 22ರಿಂದ ಆರಂಭಗೊಂಡು ಅಕ್ಟೋಬರ್ 2ರಂದು ವಿಜಯದಶಮಿಯೊಂದಿಗೆ ಸಮಾಪನಗೊಳ್ಳುತ್ತದೆ. ಸ್ಥಳೀಯ ಭಕ್ತರು ಮತ್ತು ಸಾಂಸ್ಕೃತಿಕ ಸಂಘಟನೆಗಳು ಈ ಮಹೋತ್ಸವವನ್ನು ಯಶಸ್ವಿಗೊಳಿಸಲು ಸಿದ್ಧತೆ ನಡೆಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...