ಅರಸೀಕೆರೆ | ಎತ್ತಿನಹೊಳೆ ನೀರಿನ ಕೊರಗು ನೀಗಿಸಿ: ಕೆ ಎಂ ಶಿವಲಿಂಗೇಗೌಡ ಸರ್ಕಾರಕ್ಕೆ ಮನವಿ

Date:

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ನನ್ನ ಕ್ಷೇತ್ರಕ್ಕೆ ಸಾಕಷ್ಟು ಕೆಲಸ ಮಾಡಿಕೊಟ್ಟಿದ್ದಾರೆ. ಆದರೆ ಎತ್ತಿನಹೊಳೆ ನೀರಿನ ಕೊರಗು ಕಾಡುತ್ತಿದ್ದು, ಅದೊಂದು ಕೊರತೆ ನೀಗಿಸಿಕೊಡಿ ಎಂದು ಸ್ಥಳೀಯ ಶಾಸಕರೂ ಆದ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ ಎಂ ಶಿವಲಿಂಗೇಗೌಡ ಮನವಿ ಮಾಡಿದರು.

ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಪಲಾನುಭವಿಗಳ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಅರಸೀಕೆರೆಯಲ್ಲಿ ಎಂಜಿನಿಯರಿಂಗ್ ಕಾಲೇಜು ಉದ್ಘಾಟನೆಗೊಂಡಿದೆ. ವಸತಿ ಶಾಲೆ ಸೇರಿ ಅನೇಕ ಕಾಮಗಾರಿಗಳಿಗೆ ಶಂಕುಸ್ಥಾಪನೆ ಆಗಿದೆ. ಅರಸೀಕೆರೆ ಈವರೆಗೆ ನತದೃಷ್ಟ ತಾಲೂಕಾಗಿತ್ತು. ಕುಡಿಯುವ ನೀರಿರಲಿಲ್ಲ, ಅದೂ ಸೇರಿದಂತೆ ಎಲ್ಲ ಕೆಲಸವನ್ನು ಮಾಡಿಕೊಟ್ಟಿದ್ದು ಸಿದ್ರಾಮಣ್ಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇನ್ನೊಂದು ಕೊರಗಿದೆ. ಹೇಮಾವತಿ ನದಿ ಹಾಸನದಲ್ಲಿದ್ದರೂ ನೀರು ಬರಲಿಲ್ಲ. ಕೃಷ್ಣ ದಂಡೆ ಎಂದು ಕಾಲಹಣರ ಮಾಡಿದರು. ಕೆರೆಗಳು ತುಂಬಲಿಲ್ಲ, ಎತ್ತಿನಹೊಳೆ ಯೋಜನೆಗೆ ನಮ್ಮ ಪಕ್ಷದವರೇ ವಿರೋಧ ಮಾಡಿದ್ರು, ಅರಸೀಕೆರೆ ತಾಲೂಕಿಗೆ ಎತ್ತಿನಹೊಳೆ ನೀರು ಬರಬೇಕು, ಡಿ ಕೆ ಶಿವಕುಮಾರ್ ಅವರು ನೀರಾವರಿ ಮಂತ್ರಿ ಆಗಿದ್ದಾರೆ. ಹತ್ತು ಬಾರಿ ದೆಹಲಿಗೆ ಹೋಗಿ ಬಂದಿದ್ದಾರೆ, ಎತ್ತಿನಹೊಳೆ ನೀರು ಎಲ್ಲೆಲ್ಲೋ ಹರಿದು ಹೋಗ್ತಿದೆ, ಮೊನ್ನೆ ಸಂಪುಟ ಸಭೆಯಲ್ಲೂ ಅನುಮೋದನೆ ನೀಡಿದ್ದೀರಿ, ಸಿಎಂ-ಡಿಸಿಎಂ ಆಪದ್ಭಾಂದವರಾಗಿ ನನ್ನ ಕ್ಷೇತ್ರಕ್ಕೆ ಎತ್ತಿನಹೊಳೆ ನೀರು ಕೊಡಿ” ಎಂದು ಮನವಿ ಮಾಡಿದರು.

ಅರಸೀಕೆರೆ ಕಾಂಗ್ರೆಸ್‌ ಸಮಾವೇಶ

“ನಿಮ್ಮಿಬ್ಬರಿಗೂ ಕೈಮುಗಿದು ಬೇಡುತ್ತೇನೆ, ಇಬ್ಬರು ಸೇರಿ ಮಾಡಿಕೊಡಿ ನಿಮ್ಮ ಋಣ ಮರೆಯೋದಿಲ್ಲ. ನಾವು ಬರಗಾಲ ಪ್ರದೇಶದವರು, ಹಿಂದೆ ನಮ್ಮ ತಾಲೂಕನ್ನು ಬೇರೆ ರೀತಿ ನೋಡಿದ್ರು ಎಂದು ಮನವರಿಕೆ ಮಾಡಿದರು. ತೆಂಗಿನ ಮರಗಳಿಗೆ ನಾಲ್ಕು ತರಹದ ರೋಗ ಬಂದಿದೆ. ಉತ್ತಮ ಬೆಲೆ ಇರುವಾಗ ಮರಗಳು ಸರ್ವನಾಶ ಆಗುತ್ತಿವೆ. ಸರ್ಕಾರ ಸಮರೋಪಾದಿಯಲ್ಲಿ ಕಲ್ಪತರು ನಾಡನ್ನು ಉಳಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಅರಸೀಕೆರೆ | ದೇಶದಲ್ಲೇ ರಾಜ್ಯದ ತಲಾ ಆದಾಯ ಹೆಚ್ಚಳಕ್ಕೆ ಪಂಚ ಗ್ಯಾರೆಂಟಿಗಳೇ ಕಾರಣ: ಸಿಎಂ ಸಿದ್ದರಾಮಯ್ಯ

“ವಿರೋಧ ಪಕ್ಷದವರು ಸರ್ಕಾರ ಹೋಗುತ್ತೆ ಅಂತರೆ, ಸರ್ಕಾರ ದಿವಾಳಿಯಾಗಿದೆ ಅಂತರೆ, ಅವರಿಗೆ ಕೆಲಸವಿಲ್ಲ, ರಾಜ್ಯದಲ್ಲಿ ಬಡವರ ಬಗ್ಗೆ ಕಾಳಜಿ ಇಟ್ಟಿರುವುದು ಸಿದ್ರಾಮಣ್ಣನ ಸರ್ಕಾರ, ʼನಿಮಗೆ ತಾಕತ್ ಇದ್ರೆ ಗ್ಯಾರಂಟಿ ರದ್ದು ಮಾಡಿʼ ಎಂದು ಸವಾಲು ಹಾಕಿತು. ಆಗ ಜನ ಏನು ಮಾಡುತ್ತಾರೆ ನಿಮಗೆ ಗೊತ್ತಾಗುತ್ತೆಂದು ಎಚ್ಚರಿಸಿದರು. ರಾಜ್ಯದ ಆರ್ಥಿಕ ಸ್ಥಿತಿ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ, ಬರೀ ಗೂಬೆ ಕೂರಿಸುವ ಕೆಲಸ ಮಾಡಬೇಡಿರೆಂದು ಸಿಡಿದೆದ್ದರು. ಈಗ ಕಾರ್ಯಕ್ರಮಕ್ಕೆ ಹೆಚ್ಚು ಜನರ ಆಗಮಿಸಿದ್ದು ಸಂತಸ ತಂದಿದೆ. ಇಷ್ಟು ಜನ ಸೇರಿ ಇತಿಹಾಸ ಸೃಷ್ಟಿಸಿದ್ದೀರಿ, ಇದರಿಂದ ಸಿದ್ದರಾಮಯ್ಯ ಸರ್ಕಾರ ಬಡವರ ಪರ ಕೆಲಸ ಮಾಡಿದೆ ಎಂಬುದನ್ನು ಸಾಬೀತು ಮಾಡಿದ್ದೀರಿ” ಎಂದರು.

“ಎಂಜಿನಿಯರಿಂಗ್ ಕಾಲೇಜಿಗೆ 240 ಸೀಟುಗಳ ಪ್ರವೇಶಕ್ಕೆ ಅವಕಾಶ ನೀಡಿದ್ದಾರೆ. ಅರಸೀಕೆರೆಯವರೇ 200 ಮಂದಿ ವಿದ್ಯಾರ್ಥಿಗಳು ಓದುವುದಕ್ಕೆ ತಯಾರಾಗಿದ್ದಾರೆ. ಇಲ್ಲಿ ಪಾಲಿಟೆಕ್ನಿಕ್ ಓದಿ ಬೆಂಗಳೂರಿಗೆ ಹೋದ್ರೆ ಒಳ್ಳೆ ಸಂಬಳ ಸಿಗುತ್ತೆ, ಇದಕ್ಕೆ ಅವಕಾಶ ಮಾಡಿಕೊಟ್ಟ ನಮ್ಮ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ” ಎಂದು ಶಾಸಕ ಶಿವಲಿಂಗೇಗೌಡ ಅವರು ಕೃತಜ್ಞತೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...