ರಾಯಚೂರು | ವಸತಿಶಾಲೆ ಕಾರ್ಮಿಕರ ಬಾಕಿ ವೇತನ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಟಿಯುಸಿಐ ಒತ್ತಾಯ

Date:

ರಾಯಚೂರು ಜಿಲ್ಲೆಯ ವಸತಿಶಾಲೆ ಕಾರ್ಮಿಕರ ಬಾಕಿ ವೇತನ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಟಿಯುಸಿಐ ವತಿಯಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.

“ಕಳೆದ 15-20 ವರ್ಷಗಳಿಂದ ವಸತಿಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಕಡಿಮೆ ವೇತನ ನೀಡಲಾಗುತ್ತಿದೆ. ಸೌಲಭ್ಯಗಳಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕ ಇಲಾಖೆ ತುಟ್ಟಿ ಭತ್ಯೆ ಹೆಚ್ಚುವರಿ ಕೆಲಸಕ್ಕೆ ಓಟಿ ನೀಡದೇ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.

“ಕಾರ್ಮಿಕರಿಗೆ ನೀಡುವ ವೇತನವನ್ನೂ ಸರಿಯಾಗಿ ನೀಡಿಲ್ಲ. ಇದೀಗ ಕಳೆದ 5 ತಿಂಗಳ ಬಾಕಿ ವೇತನ ಪಾವತಿ ಮಾಡಿಲ್ಲ. ಜತೆಗೆ ಕಳೆದ 2017ರಿಂದ ಪ್ರತಿ ವರ್ಷ ಹೆಚ್ಚಳಗೊಂಡಿದ್ದ 7 ವರ್ಷಗಳ ಹಿಂಬಾಕಿ ವೇತನವನ್ನೂ ಪಾವತಿಸಿಲ್ಲ. ಕಾರ್ಮಿಕರಿಗೆ ಹಬ್ಬ ಹರಿದಿನಗಳಲ್ಲಿ ಇತರೆ ಕೆಲಸ ಕಾರ್ಯಕ್ಕಾಗಿ ರಜೆ ಪಡೆಯಲು ಸಾಧ್ಯವಾಗುತ್ತಿಲ್ಲ. ವಾರದ ರಜೆ ಮತ್ತು ಹಬ್ಬದ ದಿನಗಳಲ್ಲಿ ರಜೆ ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಲಸದ ಸಂದರ್ಭದಲ್ಲಿ ಹೆಚ್ಚುವರಿ ಕೆಲಸ ಮಾಡಿಸಿಕೊಳ್ಳುತ್ತಿದ್ದು, ಓಟಿ ವೇತನ ನೀಡುತ್ತಿಲ್ಲ. ಅದನ್ನು ಕೂಡಲೇ ನೀಡಬೇಕು. ಮಾಸಿಕ ವೇತನವನ್ನು ಮೊದಲ ವಾರದಲ್ಲಿ ಪಾವತಿಯಾಗುವಂತೆ ಕ್ರಮ ವಹಿಸಬೇಕು. ಪಿಎಫ್ ಮತ್ತು ಇಎಸ್‌ಐ ಸೌಲಭ್ಯ ಕಲ್ಪಿಸಬೇಕು. 15 ವರ್ಷದ ಸೇವಾ ಪ್ರಮಾಣ ಪತ್ರ ನೀಡಬೇಕು. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವಿಧಿಸಿದ ಷರತ್ತುಗಳನ್ನು ರದ್ದು ಮಾಡಬೇಕು ಹಾಗೂ ನಿವೃತ್ತಿ ನಂತರ ಪಿಂಚಣಿ, ಇಡಿಗಂಟು ನೀಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರಿಗೆ ಹೆಚ್ಚುವರಿ ರೈಲು ಸಂಚಾರಕ್ಕೆ ಆಗ್ರಹಿಸಿ ಕೇಂದ್ರ ಸಚಿವ ವಿ ಸೋಮಣ್ಣಗೆ ಮನವಿ

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಜಿ ಅಮರೇಶ, ಜಿಲ್ಲಾಧ್ಯಕ್ಷ ಹುಸೇನಪ್ಪ, ಲಾಳೆಸಾಬ್, ಶಿವರಾಜ ಆಲ್ಕೋಡ್, ಹುಸೇನಪ್ಪ ಸಿರವಾರ, ಹನುಮಂತ ಮಸ್ಕಿ, ಮಹಮ್ಮದ್ ಇಬ್ರಾಹಿಂ, ರಫಿ ಸಿಂಗನೋಡಿ, ರಂಗನಾಥ, ಕಮಲಮ್ಮ, ಸೋಮಣ್ಣ, ದೇವಮ್ಮ ಸೇರಿದಂತೆ ಬಹುತೇಕರು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...