ಕಲಬುರಗಿ | 371 (ಜೆ) ಕಲಂ ವಿಶೇಷ ಸ್ಥಾನಮಾನದಲ್ಲಿ ಮುಂಬಯಿ ಕರ್ನಾಟಕ ಭಾಗ ಸೇರಿಸಲು ಬಿಡುವುದಿಲ್ಲ : ಲಕ್ಷ್ಮಣ ದಸ್ತಿ

Date:

ಮುಂಬಯಿ ಕರ್ನಾಟಕ ಪ್ರದೇಶದ ಇಂಡಿ ಉಪ – ವಿಭಾಗದ ತಾಲೂಕುಗಳು ಮತ್ತು ಮುದ್ದೇಬಿಹಾಳ ಹೈದರಾಬಾದ ಕರ್ನಾಟಕದ ಅನುಚ್ಛೆದ 371ನೇ (ಜೆ) ವಿಶೇಷ ಸ್ಥಾನಮಾನದಲ್ಲಿ ಸೇರಿಸಬೇಕೆಂದು ಮುಂಬಯಿ ಕರ್ನಾಟಕದ ನಾಯಕರು ಹಿಂದೆ ನಿಂತು ನಡೆಸುತ್ತಿರುವ ಸಂಚಿಕೆಗೆ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ತ್ರೀವವಾಗಿ ಖಂಡಿಸಿದೆ.

“ಪ್ರಸ್ತುತ ಹೈದರಾಬಾದ್ ಕರ್ನಾಟಕ ಪ್ರದೇಶದ ವಿಶೇಷ ಸ್ಥಾನಮಾನದ ವ್ಯಾಪ್ತಿಯಲ್ಲಿ ಒಂದೇ ಒಂದು ಗ್ರಾಮ ಸೇರಿಸಲು ಸಾಧ್ಯವಿಲ್ಲ. ಸೇರ್ಪಡೆಗೆ ನಾವು ಅವಕಾಶ ನೀಡುವುದಿಲ್ಲ, ಬೇಕಾದರೆ ಮುಂಬಯಿ ಕರ್ನಾಟಕದವರು ವಿಶೇಷ ಸ್ಥಾನಮಾನ ಬೇಡಿಕೆಯಿಟ್ಟು ಹೋರಾಟ ನಡೆಸಿ ಪ್ರತ್ಯೇಕವಾಗಿ ತಮ್ಮ ಭಾಗಕ್ಕೆ ವಿಶೇಷ ಸ್ಥಾನಮಾನ ಪಡೆಯಲು ನಮ್ಮ ಅಭ್ಯಂತರವಿಲ್ಲ, ಆದರೆ ನಮ್ಮ ಕಲ್ಯಾಣ ಕರ್ನಾಟಕದ ವಿಶೇಷ ಸ್ಥಾನಮಾನದ ವ್ಯಾಪ್ತಿಯಲ್ಲಿ ಸೇರಲು ಯತ್ನಿಸಿದರೆ ನಾವು ಬಿಡುವುದಿಲ್ಲ. ಇದಕ್ಕಾಗಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ” ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

“ಕರ್ನಾಟಕದಲ್ಲಿ ಅತ್ಯಂತ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ 371ನೇ (ಜೆ) ಕಲಂ ತಿದ್ದುಪಡಿ ಮಾಡಿ ವಿಶೇಷ ಸ್ಥಾನಮಾನ ನೀಡಬೇಕೆಂದು ದಶಕಗಳಿಂದ ನಡೆಸಿದ ನಿರಂತರ ಹೋರಾಟ ಹಾಗೂ ರಾಜಕೀಯ ಇಚ್ಛಾಶಕ್ತಿಯ ಫಲವಾಗಿ ಸಂವಿಧಾನದ 371(ಜೆ) ಕಲಂ ತಿದ್ದುಪಡಿಯ ಮೂಲಕ ವಿಶೇಷ ಸ್ಥಾನಮಾನ ಪಡೆದ್ದಿದ್ದೇವೆ. ಈ ರಚನಾತ್ಮಕ ಬೇಡಿಕೆ ಮುಂದಿಟ್ಟುಕೊಂಡು ಹೋರಾಟ ನಡೆಸುವಾಗ ಕನಿಷ್ಠ ಸೌಜನ್ಯಕ್ಕಾದರೂ ನೈತಿಕ ಬೆಂಬಲ ನೀಡದ ಮುಂಬಯಿ ಕರ್ನಾಟಕದವರು ಇದೀಗ ರೇಡಿಮೇಡ್ ಫಲ ಬೇಕೆಂಬುವುದು ಹಾಸ್ಯಾಸ್ಪದ ಸಂಗತಿಯಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸ ರೊಟ್ಟಿಯನು ಹೆಂಚಿಗೆ ಹಾಕಿದ ಮಿಜೋ ಮತದಾರರು

“ಮುಂಬಯ ಕರ್ನಾಟಕದವರು ಹೆ-ಕ ಭಾಗಕ್ಕೆ ದಕ್ಕಿದ 371ನೇ (ಜೆ) ಕಾನೂನು ಸಹ ಇದಕ್ಕೆ ಅವಕಾಶ ನೀಡುವುದಿಲ್ಲ. ಇಷ್ಟಾದರೂ ಏನೇ ಕುತಂತ್ರ ಮಾಡಿದರೆ ನಾವು ಸುಮ್ಮನೆ ಕೂಡುವುದಿಲ್ಲ” ಎಂದು ಲಕ್ಷ್ಮಣ ದಸ್ತಿ ಬಲವಾಗಿ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...