ವಿಶ್ವ ಶಿಟೊರಿಯೋ ಕರಾಟೆ ಮಂಡಳಿ ನಿರ್ದೇಶಕರಾಗಿ ಅರುಣ್ ಮಾಚಯ್ಯ ಆಯ್ಕೆ

Date:

ವಿಶ್ವ ಶಿಟೋರಿಯೋ ಕರಾಟೆ ಮಂಡಳಿಯ ನೂತನ ಸ್ಟ್ಯಾಂಡಿಂಗ್ ನಿರ್ದೇಶಕರಾಗಿ ಅಖಿಲ ಭಾರತ ಶಿಟೋರಿಯೋ ಕರಾಟೆ ಸಂಸ್ಥೆಯ ಅಧ್ಯಕ್ಷ, ಭಾರತದ ಹಿರಿಯ ಕರಾಟೆಪಟು ಕೊಡಗಿನ ಚೆಪ್ಪುಡಿರ ಎಸ್ ಅರುಣ್ ಮಾಚಯ್ಯ ಆಯ್ಕೆಯಾಗಿದ್ದಾರೆ.

ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 10ನೇ ಅಂತರಾಷ್ಟ್ರೀಯ ಶಿಟೋರಿಯೋ ಕರಾಟೆ ಚಾಂಪಿಯನ್ಶಿಪ್‌ನ ಅಂಗವಾಗಿ ವಿಶ್ವ ಶಿಟೋರಿಯೋ ಕರಾಟೆ ಮಂಡಳಿಯ ಚುನಾವಣಾ ಪ್ರಕ್ರಿಯೆ ಸಭೆ ನಡೆದಿದೆ. ಸಭೆಯಲ್ಲಿ ಅರುಣ್ ಮಾಚಯ್ಯ ಅವರನ್ನು ಏಷ್ಯಾ ಮತ್ತು ಪೆಸಿಫಿಕ್ ಖಂಡದ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ, ಈ ಬಗ್ಗೆ ಕರಾಟೆ ಮಂಡಳಿಯ ಅಧ್ಯಕ್ಷ ಕೆನ್ ಜೋ ಈವಾಟ್ ಅವರು ಪ್ರಕಟಿಸಿದ್ದಾರೆ.

ಅರುಣ್ ಮಾಚಯ್ಯ ಅವರು ಮುಂದಿನ ಮೂರು ವರ್ಷಗಳ ಕಾಲ ವಿಶ್ವ ಶಿಟೋರಿಯೋ ಕರಾಟೆ ಮಂಡಳಿಯ ಸ್ಟ್ಯಾಂಡಿಂಗ್ ನಿರ್ದೇಶಕರಾಗಿ ವಿಶ್ವಮಟ್ಟದಲ್ಲಿ ಏಷ್ಯಾ ಮತ್ತು ಪೆಸಿಫಿಕ್ ಖಂಡವನ್ನು ಪ್ರತಿನಿಧಿಸಲಿದ್ದಾರೆ. ಈ ಹಿಂದೆಯೂ ಇವರು 1996ರಿಂದ 2002ರವರೆಗೆ ಇದೇ ಹುದ್ದೆಯನ್ನು ಅಲಂಕರಿಸಿದ್ದರು. ಇದೀಗ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಅಲ್ಲದೆ ವಿಶ್ವ ಕರಾಟೆ ಮಂಡಳಿಯಲ್ಲಿ 2ನೇ ಬಾರಿಗೆ ನಿರ್ದೇಶಕರಾಗಿರುವ ಭಾರತದ ಮೊದಲ ಕರಾಟೆಪಟು ಎಂಬ ಹೆಗ್ಗಳಿಕೆಗೂ ಅರುಣ್ ಮಾಚಯ್ಯ ಪಾತ್ರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಐದು ದಶಕಗಳಿಂದ ಕರಾಟೆ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಅದರ ಉನ್ನತಿಗೆ ಕಾರಣರಾಗಿರುವ ಅರುಣ್ ಮಾಚಯ್ಯ ಅವರು, ಪ್ರಸ್ತುತ ಅಖಿಲ ಭಾರತ ಶಿಟಾರಿಯೋ ಕರಾಟೆ ಸಂಸ್ಥೆಯ ಮತ್ತು ದಕ್ಷಿಣ ಭಾರತ ಕರಾಟೆ ಫೆಡರೇಷನ್ ಅಧ್ಯಕ್ಷರಾಗಿ, ಕರಾಟೆ ಇಂಡಿಯಾ ಆರ್ಗನೈಜೇಷನ್ ಹಿರಿಯ ಉಪಾಧ್ಯಕ್ಷರಾಗಿ, ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಂತರಾಷ್ಟ್ರೀಯ ಕರಾಟೆ ತೀರ್ಪುಗಾರರಾಗಿರುವ ಸಿ.ಎಸ್. ಅರುಣ್ ಮಾಚಯ್ಯ ಅವರು ಕರಾಟೆಯಲ್ಲಿ 8ನೇ ಡ್ಯಾನ್ ಬ್ಲಾಕ್ ಬೆಲ್ಟ್ ಪದವೀಧರಾಗಿದ್ದಾರೆ. 2022ರಲ್ಲಿ ಲಂಡನಿನ ಬರ್ಮಿಂಗ್ಹ್ಯಾಮ್ ನಲ್ಲಿ ನಡೆದ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಅರುಣ್ ಮಾಚಯ್ಯ, ಈ ಹಿಂದೆ ವಿಶ್ವದ ಹಲವೆಡೆ ನಡೆದ ಹಲವಾರು ಅಂತರರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...