ಗುಬ್ಬಿ ಪಟ್ಟಣ ಪಂಚಾಯಿತಿ ನಿರೀಕ್ಷೆಯಂತೆ ಕಾಂಗ್ರೆಸ್ ತೆಕ್ಕೆಗೆ : ಅಧ್ಯಕ್ಷರಾಗಿ ಮಂಗಳಮ್ಮ, ಉಪಾಧ್ಯಕ್ಷರಾಗಿ ಮಮತಾ ಅವಿರೋಧ ಆಯ್ಕೆ

Date:

ನ್ಯಾಯಾಲಯದ ತಡೆಯಾಜ್ಞೆ ತೆರವುಗೊಂಡ ಹಿನ್ನಲೆ ಸ್ಥಳೀಯ ಪಟ್ಟಣ ಪಂಚಾಯಿತಿ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ನಿರೀಕ್ಷೆಯಂತೆ ಅಧಿಕಾರ ಚುಕ್ಕಾಣಿ ಹಿಡಿದಿದೆ.

ಬುಧವಾರ ಗುಬ್ಬಿ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಬಿ.ಆರತಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಮೀಸಲಾತಿ ನಿರ್ಣಯ ಕುರಿತಂತೆ ನ್ಯಾಯಾಲಯ ತಡೆಯಾಜ್ಞೆ ತೆರೆವಿನ ಬಳಿಕ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ ಮೀಸಲು ನಿಗದಿಯಾಗಿತ್ತು. ಈ ಹಿನ್ನಲೆ ನಡೆದ ಚುನಾವಣೆಯಲ್ಲಿ ಶಾಸಕರ ಬೆಂಬಲದಲ್ಲಿ ಮಂಗಳಮ್ಮ ರಾಜಣ್ಣ ಅಧ್ಯಕ್ಷರಾಗಿ ಮಮತಾ ಶಿವಪ್ಪ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.

ಪಟ್ಟಣ ಪಂಚಾಯಿತಿ ಒಟ್ಟು 19 ಸದಸ್ಯರಲ್ಲಿ ಶಾಸಕರ ಬೆಂಬಲದ ಒಟ್ಟು 12 ಮಂದಿ ಸದಸ್ಯರ ಸ್ಪಷ್ಟ ಬಹುಮತ ಹಿನ್ನಲೆ ಕಾಂಗ್ರೆಸ್ ಪಕ್ಷ ಅವಿರೋಧ ಚುಕ್ಕಾಣಿ ಗಳಿಸಿಕೊಂಡಿದೆ. ಉಳಿದಂತೆ ಬಿಜೆಪಿ ಆರು ಸದಸ್ಯರು, ಜೆಡಿಎಸ್ ಓರ್ವ ಸದಸ್ಯರು ಸಹ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಏಕೈಕ ನಾಮಪತ್ರ ಸಲ್ಲಿಕೆ ಹಿನ್ನಲೆ ಎರಡೂ ಸ್ಥಾನವನ್ನು ಅವಿರೋಧ ಆಯ್ಕೆ ಎಂದು ತಹಶೀಲ್ದಾರ್ ಘೋಷಣೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಎಸ್.ಆರ್.ಶ್ರೀನಿವಾಸ್ ಸುದ್ದಿಗಾರರೊಂದಿಗೆ ಮಾತನಾಡಿ ಅಧಿಕಾರ ಹಿಡಿದ ಕಾಂಗ್ರೆಸ್ ಆಡಳಿತ ಶೀಘ್ರದಲ್ಲಿ ಪಟ್ಟಣದ ಯುಜಿಡಿ ಕಾಮಗಾರಿ ಪೂರ್ಣಗೊಳಿಸಲಿದೆ. ಈಗಾಗಲೇ 3.80 ಕೋಟಿ ರೂ ಮಂಜೂರು ಮಾಡಲಾಗಿದೆ. ರೈತರ ಜಮೀನು ವಶಕ್ಕೆ ಪಡೆದು ಕಾರ್ಯ ಪೂರ್ತಿಯಾಗಲಿದೆ. ಈ ಜೊತೆಗೆ ಪಟ್ಟಣದಲ್ಲಿ ಬಾಕಿ ಇರುವ ರಸ್ತೆಗಳ ಅಭಿವೃದ್ಧಿಗೆ ಹಾಗೂ ಹೊರ ಭಾಗದಲ್ಲಿ ನೀರು ಪಟ್ಟಣದೊಳಗೆ ಬಾರದಂತೆ ದೊಡ್ಡ ಚಾನಲ್ ನಿರ್ಮಾಣಕ್ಕೆ ವಿಶೇಷವಾಗಿ 8 ಕೋಟಿ ರೂ ಅನುದಾನ ಬರಲಿದೆ ಎಂದು ಭರವಸೆ ನೀಡಿದರು.

ನೂತನ ಅಧ್ಯಕ್ಷೆ ಮಂಗಳಮ್ಮ ರಾಜಣ್ಣ ಹಾಗೂ ಉಪಾಧ್ಯಕ್ಷೆ ಮಮತಾ ಶಿವಪ್ಪ ಮಾತನಾಡಿ ಶಾಸಕರ ಮಾರ್ಗದರ್ಶನದಲ್ಲಿ ಪಟ್ಟಣದ ಅಭಿವೃದ್ಧಿಗೆ ಪಣ ತೊಟ್ಟು ಸ್ವಚ್ಚತೆ, ರಸ್ತೆ, ನೀರು ಸೇರಿದಂತೆ ಎಲ್ಲಾ ಮೂಲಭೂತ ಸವಲತ್ತು ಒದಗಿಸುತ್ತೇವೆ. ಅವಿರೋಧ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೂ ಕೃತಜ್ಞತೆ ಸಲ್ಲಿಸಿದರು.

ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಪಪಂ ಸದಸ್ಯರು, ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಭಾಗಿಯಾಗಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದರು. ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...