ಮಾಸಿಕ ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹಿಸಿ ಕಲಬುರಗಿ, ಯಾದಗಿರಿಯಲ್ಲಿ ಆಶಾ ಕಾರ್ಯಕರ್ತೆಯರ ಧರಣಿ

Date:

ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಗೌರವ ಧನ ನೀಡುವ ಆದೇಶವನ್ನು ತಕ್ಷಣ ಜಾರಿಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಬೀದರ್‌, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಜನವರಿಯಲ್ಲಿ ಬೆಂಗಳೂರಿನಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಾಗ, ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸುವುದಾಗಿ ಸರ್ಕಾರ ಭರವಸೆ ಕೊಟ್ಟಿತ್ತು. ಆದರೆ, ಈವರೆಗೂ ಅದು ಈಡೇರಿಲ್ಲ. ಹಾಗಾಗಿ ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೇ ಹೊರಡಿಸಿದ ಆದೇಶವನ್ನು ತಾವೇ ಜಾರಿ ಮಾಡುತ್ತಿಲ್ಲ. ಇದು ಅನ್ಯಾಯದ ಧೋರಣೆ. ಹಳ್ಳಿಗಳಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಯೊಂದು ಜವಾಬ್ದಾರಿ ಹೊತ್ತುಕೊಂಡು ಕೆಲಸ ಮಾಡುತ್ತಿದ್ದಾರೆ. ಆದರೂ ಸರ್ಕಾರ ಸೇವೆ ನಿರ್ಲಕ್ಷ್ಯ ಮಾಡುತ್ತಿದೆ. ಈ ಕೂಡಲೇ ಆದೇಶ ಜಾರಿ ಮಾಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆʼ ಎಂದು ಎಚ್ಚರಿಕೆ ನೀಡಿದರು.

ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು. ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣೆಯನ್ನು ಅವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡುವುದನ್ನು ಕೈಬಿಡಬೇಕು. ಸೂಕ್ತ ವೇತನದೊಂದಿಗೆ ಆಶಾ ಸುಗಮಕಾರರನ್ನು ಮುಂದುವರಿಸಬೇಕು. ಸೇವಾನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಮಾದರಿಯಲ್ಲಿ ಆಶಾ ಕಾರ್ಯಕರ್ತೆಯರಿಗೂ ₹1,000 ಪ್ರೋತ್ಸಾಹಧನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಹಕ್ಕೊತ್ತಾಯ ಮಂಡಿಸಿದರು.

ಕಲಬುರಗಿ ಜಿಲ್ಲಾ ಗೌರವಾಧ್ಯಕ್ಷ ವಿ.ಜಿ.ದೇಸಾಯಿ ಸೇರಿದಂತೆ ಪ್ರಮುಖರಾದ ಗೀತಾ ಮಳ್ಳಿ, ಶಿವಲಿಂಗಮ್ಮ, ಸಂಗೀತಾ ಸಾವಳಗಿ, ಜಯಶ್ರೀ, ವಿಜಯಲಕ್ಷ್ಮೀ ತಾಯಮ್ಮ, ಶಾರದಾ ಈಜೇರಿ, ಲಕ್ಷ್ಮೀ ಮಂದೇವಾಲ, ಯಾಸಮೀನ ಅಂಕಲಗಾ, ಸುಗಂಧಾ ಅನ್ನೋಳ್ಳಿ, ಪ್ರಭಾ ಶಹಾಬಾದ, ಮಂಜುಳಾ ವಾಡಿ, ಸಾವಿತ್ರಿ ಇಂಗಳಗಿ, ರೇಣುಕಾ, ನಾಗವೇಣಿ ಚಿಂಚೋಳಿ, ಯಶೋಧಾ, ಲಕ್ಷ್ಮೀ ಸುಲೆಪೇಟ, ಲಕ್ಷ್ಮೀ ಚಿಮ್ಮನಚೂಡ, ಸಾಬಮ್ಮ, ವಿಜಯಲಕ್ಷ್ಮೀ, ಲಕ್ಷ್ಮೀ ಮಲಖೇಡ, ಲಕ್ಷ್ಮೀ ಕುರಕುಂಟಾ, ಸವಿತಾ ಅಫಜಲಪುರ, ಭಾರತಿ, ಗೌರಮ್ಮ, ಲಕ್ಷ್ಮೀ ಗೊಬ್ಬುರ, ಮಮತಾಜ, ಸೇರಿದಂತೆ, ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕಿನ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಯಾದಗಿರಿಯಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ :

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಯಾದಗಿರಿ ಜಿಲ್ಲಾ ಸಮಿತಿಯಿಂದ ನಗರದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

IMG 20250812 WA0057
ಯಾದಗಿರಿಯಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು

ಸಂಘದ ಜಿಲ್ಲಾಧ್ಯಕ್ಷೆ ಡಿ.ಉಮಾದೇವಿ, ಸಂಘದ ಕಾರ್ಯದರ್ಶಿ ದೇವಕ್ಕಿ ವನದುರ್ಗ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್ ಸೇರಿದಂತೆ ಪುಷ್ಪಲತಾ, ನೀಲಮ್ಮ, ತಾಯಮ್ಮ , ಶಾಂತವ್ವ, ನಿಂಗಮ್ಮ, ಅಮೃತ, ದಾನಮ್ಮ, ಗೀತಾ, ಮೀನಾಕ್ಷಿ, ಗೌರಮ್ಮ, ಶಾರದಾದೇವಿ ಹಾಗೂ ನೂರಾರು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಸರ್ಕಾರಿ ಸೌಲಭ್ಯದಿಂದ ವಂಚಿತರಾದ ಅಂಗವಿಕಲ ಸಹೋದರಿಯರಿಗೆ ಬೇಕಿದೆ ಸಹಾಯಹಸ್ತ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...