ಉಡುಪಿ | ಮಣಿಪಾಲ ಲಾಡ್ಜ್ ನಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಬಿಜೆಪಿ ಮುಖಂಡನ ಮಗ ಸಿಕ್ಕಿಬಿದ್ದ ಪ್ರಕರಣ : ಕೂಲಂಕುಶ ತನಿಖೆಗೆ ಎಸ್ ಡಿ ಪಿಐ ಒತ್ತಾಯ

Date:

ಉಡುಪಿ ಜಿಲ್ಲೆಯ ಮಣಿಪಾಲದಲ್ಲಿರುವ ಲಾಡ್ಜ್ ಒಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ಬಿಜೆಪಿ ಮುಖಂಡನೋರ್ವನ ಮಗ ಸಿಕ್ಕಿಬಿದ್ದಿರುವ ಘಟನೆ ನಡೆದಿದ್ದು ಯುವಕ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದಿದ್ದ ಎನ್ನಲಾಗಿದೆ.

ವಿಚಾರಣೆ ವೇಳೆ ಇನ್ನೋರ್ವ ಬಾಲಕಿಗೂ ಇದೇ ರೀತಿ ಆಮಿಷ ಒಡ್ಡಿ ಲಾಡ್ಜ್ ಗೆ ಕರೆದಿರುವ ವಿಷಯ ಬೆಳಕಿಗೆ ಬಂದಿದೆ. ಈ ಅಂಶಗಳನ್ನು ಗಮನಿಸುವಾಗ ಈ ಪ್ರಕರಣದ ಹಿಂದೆ ದೊಡ್ಡ ಜಾಲ ಇರುವ ಶಂಕೆ ಇದ್ದು ಪೊಲೀಸರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಕೂಲಂಕುಶವಾಗಿ ತನಿಖೆ ನಡೆಸಿ ಇದರ ಹಿಂದೆ ಇರುವ ಷಡ್ಯಂತರವನ್ನು ಬಯಲಿಗೆಲೆಯಬೇಕು ಎಂದು ಎಸ್ ಡಿ ಪಿ ಐ ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಭಾವ ರವರು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

ಬಾಯಿ ತೆರೆದರೆ ಸಂಸ್ಕೃತಿ, ಮಹಿಳೆಯರ ರಕ್ಷಣೆ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಯಾವ ರೀತಿಯ ಸಂಸ್ಕೃತಿಯನ್ನು ಕಳಿಸಿದ್ದಾರೆ ಎಂದು ಇದರಿಂದ ತಿಳಿಯುತ್ತದೆ. ಜಿಲ್ಲೆಯಲ್ಲಿ ಇದಕ್ಕಿಂತ ಮುಂಚೆಯೂ ಸಹ ಬಿಜೆಪಿಯ ನಾಯಕರುಗಳಿಂದ ಇಂತಹದೇ ಹಲವು ಘಟನೆಗಳು ನಡೆದಿದೆ ಇತ್ತೀಚೆಗೆ ಕಾರ್ಕಳದಲ್ಲಿ ಬಿಜೆಪಿ ಮುಖಂಡ ಉಪನ್ಯಾಸಕ ನೋರ್ವ ತನ್ನ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಘಟನೆಯು ವರದಿಯಾಗಿತ್ತು, ಅದೇ ರೀತಿ ಅಮಾಸೆಬೈಲಿನಲ್ಲಿ ಧರ್ಮಸ್ಥಳ ಸಂಘದ ಮಹಿಳೆಗೆ ಬಿಜೆಪಿ ಮುಖಂಡನೊಬ್ಬ ಲೈಂಗಿಕ ದೌರ್ಜನ್ಯ ವೆಸಗಿ ಜೈಲಿಗೆ ಹೋದ ಘಟನೆಯು ನಡೆದಿತ್ತು ಅಲ್ಲದೆ ಪಕ್ಕದ ಮೂಡಬಿದ್ರೆಯ ಬಿಜೆಪಿ ಶಾಸಕರ ಆಪ್ತನೊಬ್ಬನ ಮೊಬೈಲಿನಲ್ಲಿ ಹಲವು ಮಹಿಳೆಯರ ಅಶ್ಲೀಲ ವಿಡಿಯೋಗಳು ಪತ್ತೆಯಾಗಿ ಹಲವು ಮಹಿಳೆಯರಿಗೆ ಬ್ಲಾಕ್ ಮೇಲ್ ಮಾಡಿರುವ ಪ್ರಕರಣವು ವರದಿಯಾಗಿತ್ತು. ಹಾಗೂ ಪುತ್ತೂರಿನಲ್ಲಿ ಬಿಜೆಪಿ ಮುಖಂಡ ರೋರ್ವರ ಮಗ ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮಗು ಕರುಣಿಸಿದ ಘಟನೆಯು ನಡೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ರೀತಿಯ ಹಲವು ಪ್ರಕರಣಗಳು ಬಿಜೆಪಿಯವರಿಂದ ನಡೆದಿದೆ ಆದ್ದರಿಂದ ಧರ್ಮದ ಲೇಬಲ್ ಹಚ್ಚಿಕೊಂಡು ಇವರು ಮಾಡುತ್ತಿರುವ ಅನಾಚಾರದ ಬಗ್ಗೆ ಸಮಾಜ ಜಾಗೃತರಾಗಬೇಕು ಎಂದು ಅಶ್ರಫ್ ಭಾವ ರವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...