ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣ; ʼಬೆಳಗಾವಿ ಚಲೋʼ ಕೈಬಿಡಬೇಕೆಂದು ಸತೀಶ್​ ಜಾರಕಿಹೊಳಿ ಮನವಿ

Date:

ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮವಾಗುತ್ತದೆ. ಇಲ್ಲಿಗೆ ಯಾವುದೇ ಸಂಘಟನೆ ಬಂದರೂ ಹೊಡೆತ ಬೀಳುವುದು ನಮಗೆ ಎಂಬುದನ್ನು ಗಮನಿಸಬೇಕಾಗುತ್ತದೆ. ಹಾಗಾಗಿ, ʼಬೆಳಗಾವಿ ಚಲೋʼ ಕೈ ಬಿಡಬೇಕು ಎಂದು ಸಚಿವ ಸತೀಶ್​ ಜಾರಕಿಹೊಳಿ ಮನವಿ ಮಾಡಿದ್ದಾರೆ.

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪೊಲೀಸರು ಮತ್ತು ಜಿಲ್ಲಾಧಿಕಾರಿ ಮಾಹಿತಿ ಕೊಟ್ಟಿದ್ದಾರೆ. ಇಬ್ಬರ ನಡುವೆ ನಡೆದ ಜಗಳವಷ್ಟೇ ಅದು. ಯಾವುದೇ ಸಂಘಟನೆ, ಭಾಷೆಗೆ ಹೋಗಬಾರದು ಎಂಬುದು ನಮ್ಮ ಮನವಿ‌. ಈ ರೀತಿಯ ಘಟನೆಗಳು ಹೊಸದೇನೂ ಅಲ್ಲ. ಇಡೀ ರಾಜ್ಯದಲ್ಲಿ ಪ್ರತಿದಿನ ಒಂದು ಕಡೆ ನಡೆಯುತ್ತವೆ. ಆದರೆ, ಅದು ಅಲ್ಲಿಯೇ ಮುಗಿಯುತ್ತದೆ. ಪೊಲೀಸ್ ಠಾಣೆಗೆ ಬಸ್ಸನ್ನೇ ತೆಗೆದುಕೊಂಡು ಹೋದ ಉದಾಹರಣೆಗಳೂ ಸಾಕಷ್ಟಿವೆ. ಪೊಲೀಸರು ಮತ್ತು ಕಾನೂನಿಗೆ ಆ ವಿಚಾರವನ್ನು ಬಿಡಬೇಕು. ಕನ್ನಡ-ಮರಾಠಿ ಸಂಘಟನೆಯೆಂದು ಬಿಂಬಿಸಬಾರದು” ಎಂದರು.

“ಪೊಲೀಸರು ಎರಡೂ ಕಡೆ ತನಿಖೆ ಮಾಡುತ್ತಿದ್ದಾರೆ. ಆದರೆ, ಪೋಕ್ಸೊ ಪ್ರಕರಣ ದಾಖಲಿಸಬಾರದಿತ್ತು. ನೂರು ಜನರ ಮುಂದೆ ನಡೆದಿರುವ ಘಟನೆ ಇದು. ಹಾಗಾಗಿ, ಆ ಪ್ರಶ್ನೆ ಬರುವುದಿಲ್ಲ. ಇದರಲ್ಲಿ ಪೊಲೀಸರಿಂದ ತಪ್ಪಾಗಿದೆ ಎಂಬುದೂ ಕೂಡ ನನ್ನ ಭಾವನೆ. ಮುಂದೆ ಕಾನೂನಿನಲ್ಲಿ ಸರಿಮಾಡಲು ಅವಕಾಶವಿದೆ. ಅದೊಂದು ಸಾಮಾನ್ಯ ಕೇಸ್ ಆಗಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ | ಸರಕಾರದ ಹೆಸರು ಕೆಡಿಸುವ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡುವುದಿಲ್ಲ – ಕೃಷ್ಣ ಶೆಟ್ಟಿ

“ಎರಡೂ ಕಡೆಯ ಬಸ್​ಗಳಿಗೆ ಮಸಿ ಬಳಿಯುವ ಕೆಲಸವಾಗಿದೆ. ಕೊನೆಯದಾಗಿ ತೊಂದರೆಯಾಗುವುದು ಬೆಳಗಾವಿ ಮತ್ತು ಸರ್ಕಾರಕ್ಕೆ. ಇಂಥ ಘಟನೆಗಳು ನಡೆಯುವುದರಿಂದ ನೇರವಾಗಿ ಬೆಳಗಾವಿಗೆ ನಷ್ಟವಾಗುತ್ತದೆ. ಬೆಳೆಯುತ್ತಿರುವ ಬೆಳಗಾವಿಯನ್ನು ನಾವು ಪ್ರೋತ್ಸಾಹಿಸಬೇಕೇ ಹೊರತು ಇಂಥ ಘಟನೆಗಳನ್ನು ಪ್ರೋತ್ಸಾಹಿಸಬಾರದು” ಎಂದು ಹೇಳಿದರು.

“ಜಲಲ್ಪುರದಲ್ಲಿ ಇಂದು ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ನಾಳೆ ಮೃತದೇಹಗಳು ಬರಲಿವೆ. ನಮ್ಮ ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್, ಗೋಕಾಕ್ ಡಿವೈಎಸ್‌ಪಿ ಅವರು ಈಗಾಗಲೇ ಜಲಲ್ಪುರ ಪೊಲೀಸರ ಜತೆಗೆ ಮಾತನಾಡಿದ್ದಾರೆ. ಇಂದು ಬೆಳಿಗ್ಗೆಯೇ ಜಲಲ್ಪುರದಿಂದ ಮೃತದೇಹಗಳು ಬೆಳಗಾವಿ ಕಡೆ ಬರುತ್ತಿವೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...