ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಹೈಕೋರ್ಟ್ ಆದೇಶ ವದಂತಿ; ‘ಮಾಹಿತಿ ಇಲ್ಲ’ ಎಂದ ದ.ಕ. ಎಸ್‌ಪಿ

Date:

  • ಉಜಿರೆಯ ಭಾಸ್ಕರ್ ನಾಯ್ಕ ಎಂಬವರ ಮೇಲೆ ಹಲ್ಲೆ ಪ್ರಕರಣ
  • ಈದಿನ.ಕಾಮ್‌ಗೆ ದಕ್ಷಿಣ ಕನ್ನಡ ಎಸ್‌ಪಿ ಪ್ರತಿಕ್ರಿಯೆ

ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸಂಗಡಿಗರನ್ನು ಬಂಧಿಸುವಂತೆ ಹೈಕೋರ್ಟ್ ಆದೇಶಿಸಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ‘ಆ ರೀತಿಯ ಯಾವುದೇ ಆದೇಶ ನಮಗೆ ಬಂದಿಲ್ಲ. ಹೈಕೋರ್ಟ್‌ ಆದೇಶ ನೀಡಿದೆ ಎಂಬುದು ಗಾಳಿ ಸುದ್ದಿ’ ಎಂದು ಹೇಳಿದ್ದಾರೆ.

ಉಜಿರೆ ಗ್ರಾಮದ ಬಡೆಕೊಟ್ಟು ನಿವಾಸಿ ಭಾಸ್ಕರ ನಾಯ್ಕ ಎಂಬುವವರ ಮೇಲೆ ಕಳೆದ ಸೆಪ್ಟೆಂಬರ್ 3ರಂದು ಸಂಜೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡದವರು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿತ್ತು.

ತಿಮರೋಡಿ

ವಾಟ್ಸಪ್‌ನಲ್ಲಿ ಹರಿದಾಡಿದ ಸುದ್ದಿಯ ಸ್ಕ್ರೀನ್ ಶಾಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣವನ್ನೇ ದಾಳವಾಗಿಸಿಕೊಂಡಿರುವ ಕೆಲವರು, ‘ಅಟ್ರಾಸಿಟಿ ಪ್ರಕರಣ ದಾಖಲಾಗಿ ಒಂಭತ್ತು ದಿನ ಕಳೆದರೂ ಈವರೆಗೆ ಆರೋಪಿಗಳನ್ನು ಪೊಲೀಸರು ಬಂಧಿಸದೆ ಸುಮ್ಮನಿದ್ದಾರೆ ಎಂದು ದೂರಿ, ಭಾಸ್ಕರ್ ನಾಯ್ಕ್ ಸೋಮವಾರ ಹೈಕೋರ್ಟ್‌ ಮೊರೆ ಹೋಗಿದ್ದರು. ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದೆ ಮತ್ತು ಮೂರು ದಿನದ ಒಳಗೆ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕೆಂದು ಆದೇಶಿಸಿದೆ’ ಎಂಬ ವದಂತಿಯನ್ನು ಹರಿಯಬಿಟ್ಟಿದ್ದಾರೆ. ಕೆಲವು ಮಾಧ್ಯಮಗಳೂ ಕೂಡ ಇದನ್ನು ವರದಿ ಮಾಡಿವೆ.

ಪ್ರಕರಣ ಮತ್ತು ವದಂತಿ ಸಂಬಂಧ ಈ ದಿನ.ಕಾಮ್‌ ಜೊತೆ ಮಾತನಾಡಿದ ದಕ್ಷಿಣ ಕನ್ನಡ ಎಸ್‌ಪಿ ರಿಷ್ಯಂತ್ ಸಿ.ಬಿ, “ಮಹೇಶ್ ತಿಮರೋಡಿ ಬಂಧನಕ್ಕೆ ಹೈಕೋರ್ಟ್‌ನಿಂದ ನಮಗೆ ಯಾವುದೇ ಆದೇಶ ಬಂದಿಲ್ಲ. ಸುದ್ದಿ ಮಾಡಿರುವ ಮಾಧ್ಯಮಗಳಲ್ಲಿ ಯಾರಿಗಾದರೂ ಆದೇಶ ಪ್ರತಿ ದೊರೆತಿದ್ದರೆ, ನಮಗೆ ಕಳಿಸಿಕೊಡಲಿ” ಎಂದು ಹೇಳಿದ್ದು, ವದಂತಿಯನ್ನು ತಳ್ಳಿ ಹಾಕಿದ್ದಾರೆ.

bhaskar naik

ಹಲ್ಲೆಗೊಳಗಾಗಿರುವ ಭಾಸ್ಕರ ನಾಯ್ಕ್

ಪ್ರಕರಣವೇನು?

ಮಹೇಶ್ ಶೆಟ್ಟಿ ತಿಮರೋಡಿಯ ಮಾಜಿ ಆಪ್ತರಾಗಿರುವ ಭಾಸ್ಕರ ನಾಯ್ಕ್ ಸೆ. 3 ರಂದು ಸಂಜೆ ಮಂಗಳೂರಿನಲ್ಲಿ ಯೂಟ್ಯೂಬ್ ಚಾನಲ್‌ವೊಂದಕ್ಕೆ ಸಂದರ್ಶನ ನೀಡಿ ವಾಪಸ್ ಬರುವಾಗ ಮಹೇಶ್ ಶೆಟ್ಟಿ ತಿಮರೋಡಿ, ಮೋಹನ್ ಶೆಟ್ಟಿ, ಮುಖೇಶ್ ಶೆಟ್ಟಿ, ನಿತಿನ್, ಪ್ರಜ್ವಲ್ ಕೆವಿ ಗೌಡ, ಪ್ರಮೋದ್ ಶೆಟ್ಟಿ ಮತ್ತಿತರರು ಕಾರು ಅಡ್ಡ ಹಾಕಿ, ಹಲ್ಲೆ ಮಾಡಿದ್ದರು ಎಂದು ಆರೋಪಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಭಾಸ್ಕರ್ ನಾಯ್ಕ ದೂರು ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...