ವಿಧಾನಸಭಾ ಚುನಾವಣೆ | ಮತದಾನ ಬಹಿಷ್ಕಾರ; ಬ್ಯಾನರ್‌ ಅಳವಡಿಸಿ ಗ್ರಾಮಸ್ಥರ ಆಕ್ರೋಶ

Date:

  • ಎಲ್ಲ ಕಾಲದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಸೌಭಾಗ್ಯ ನಗರ ನಿವಾಸಿಗಳು
  • ಕಲ್ಲು ಗಣಿಗಾರಿಕೆ ಪರವಾನಗಿ ರದ್ದುಗೊಳಿಸುವಂತೆ ಒತ್ತಾಯಿಸಿದ ತುಮಕೂರು ಭಾಗದ ನಿವಾಸಿಗಳು

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಚುನಾವಣಾ ಆಯೋಗವು ರಾಜ್ಯದಲ್ಲಿ ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿ ಮಾಡಿದೆ. ಆದರೆ, ಬಹುತೇಕ ಕಡೆ ಮತದಾರರು ಸೌಕರ್ಯಗಳಿಗೆ ಆಗ್ರಹಿಸಿ ಚುನಾವಣಾ ಬಹಿಷ್ಕಾರದ ಅಸ್ತ್ರ ಪ್ರಯೋಗಿಸುತ್ತಿದ್ದಾರೆ.

ಅದರಂತೆಯೇ ಜನರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರದ ವಿರುದ್ಧ ವಿಜಯಪುರ, ಶಿವಮೊಗ್ಗ ಹಾಗೂ ತುಮಕೂರಿನ ಕೆಲವು ಗ್ರಾಮಗಳ ಜನರು ಮೂಲ ಸೌಕರ್ಯಗಳಿಗೆ ಆಗ್ರಹಿಸಿ ಚುನಾವಣೆ ಬಹಿಷ್ಕರಿಸುವ ಪೋಸ್ಟರ್‌ ಅಂಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ ನಗರದ ಶಿವಗಿರಿ ರಸ್ತೆಯ ಸೌಭಾಗ್ಯ ನಗರ ನಿವಾಸಿಗಳು ಪೋಸ್ಟರ್‌ ಅಂಟಿಸಿ ಮತದಾನ ಬಹಿಷ್ಕಾರ ಮಾಡಿದ್ದು, “ನಗರದಲ್ಲಿ ಎಲ್ಲ ಕಾಲದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ, ಬೀದಿ ದೀಪ, ಒಳಚರಂಡಿ, ಕಾಂಗ್ರೀಟ್‌ ರಸ್ತೆ ಸಮಸ್ಯೆ ಎದುರಿಸಲಾಗುತ್ತಿದೆ. ಈ ಹಿನ್ನೆಲೆ ಮತದಾನ ಬಹಿಷ್ಕಾರ ಮಾಡಲಾಗುತ್ತಿದೆ” ಎಂದು ಸ್ಥಳೀಯ ನಿವಾಸಿಗಳು ಪೋಸ್ಟರ್‌ ಅಂಟಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ, ಕೂಡಲೇ ಸಮಸ್ಯೆ ಬಗೆಹರಿಸಿಕೊಡುವ ಭರವಸೆ‌ ನೀಡಿದ್ದಾರೆ.

“ಕೆಲವೇ ದಿನಗಳಲ್ಲಿ ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲಿದ್ದೇವೆ. ಬೀದಿ ದೀಪಗಳನ್ನು ಅಳವಡಿಸಿ ಕೊಡುತ್ತೇವೆ. ಯಾರೂ ಮತದಾನ ಬಹಿಷ್ಕರಿಸದೆ ಕಡ್ಡಾಯವಾಗಿ ಮತದಾನ ಮಾಡಿ” ಎಂದು ಸ್ಥಳೀಯರಲ್ಲಿ ಮನವಿ ಮಾಡಿದರು.

ತುಮಕೂರು

ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಪ್ರತಿನಿಧಿಸುವ ಕೊರಟಗೆರೆ ಕ್ಷೇತ್ರಕ್ಕೆ ಸೇರುವ ಗ್ರಾಮಸ್ಥರು ಜನರು ಮತದಾನ ಬಹಿಷ್ಕಾರ ಮಾಡಿದ್ದಾರೆ. ಕಲ್ಲು ಗಣಿಗಾರಿಕೆ ಪರವಾನಗಿ ರದ್ದುಗೊಳಿಸುವಂತೆ ಒತ್ತಾಯಿಸಿ ತುಮಕೂರು ತಾಲೂಕಿನ ಚಿನ್ನವಾರನಹಳ್ಳಿ ಗ್ರಾಮ ಸೇರಿ 13 ಗ್ರಾಮಸ್ಥರು ಜನರು ಸಾಮೂಹಿಕವಾಗಿ ಮತದಾನ ಬಹಿಷ್ಕಾರ ಹಾಕಲು ನಿರ್ಧರಿಸಿದ್ದಾರೆ.

ಡಾ. ಪರಮೇಶ್ವರ್
ಮತದಾನ ಬಹಿಷ್ಕರಿಸಲು ನಿರ್ಧರಿಸಿದ ಮತದಾರರೊಂದಿಗೆ ಮಾತುಕತೆ

ವಿಷಯ ತಿಳಿಯುತ್ತಿದ್ದಂತೆ ಡಾ.ಜಿ.ಪರಮೇಶ್ವರ್ ಸ್ಥಳಕ್ಕೆ ಭೇಟಿ ನೀಡಿದ್ದು, ಮತದಾನ ಬಹಿಷ್ಕರಿಸದಂತೆ ಗ್ರಾಮಸ್ಥರ ಮನವೊಲಿಸಲು ಮುಂದಾಗಿದ್ದಾರೆ. ಈ ವೇಳೆ ಕೂಡಲೇ ಗಣಿಗಾರಿಕೆಗೆ ನೀಡಿರುವ ಪರವಾನಗಿ ಹಿಂಪಡೆಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಡಾ. ಜಿ ಪರಮೇಶ್ವರ್‌ ಅವರು ಚಿನಿವಾರನಹಳ್ಳಿಗೆ ಭೇಟಿ‌ ನೀಡಿ, ತುಮಕೂರು ಜಿಲ್ಲಾಧಿಕಾರಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಗಣಿಗಾರಿಕೆಗೆ ನೀಡಿರುವ ಅನುಮತಿ ರದ್ದುಗೊಳಿಸುವಂತೆ ಸೂಚನೆ ನೀಡಿದ್ದಾರೆ.

“ಗಣಿಗಾರಿಕೆಯನ್ನು ಪ್ರಾರಂಭಿಸಲು ಯಾವುದೇ ಕಾರಣಕ್ಕೂ ನಾನು ಬಿಡುವುದಿಲ್ಲ, ನಾನು ನಿಮ್ಮೊಂದಿಗೆ ಇದ್ದೇನೆ” ಎಂದು ಗ್ರಾಮಸ್ಥರಿಗೆ ಧೈರ್ಯ ತುಂಬಿದರು.

ರಾಮನಗರ

ರಾಮನಗರ ತಾಲೂಕಿನ ರಾಂಪುರದೊಡ್ಡಿ ಗ್ರಾಮದ ಬಳಿ ಸ್ಥಳೀಯರು ಪ್ರತಿಭಟನೆ ಮಾಡಿದರು. ರಾಂಪುರ ದೊಡ್ಡಿ, ಗೋಪಾಲಪುರ, ಇರುಳಿಗದೊಡ್ಡಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಸರಿಪಡಿಸದಿದ್ದರೆ ಮತದಾನ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ.

ರಾಮನಗರ ಮತ ಬಹಿಷ್ಕಾರ
ರಸ್ತೆ ದುರಸ್ತಿಪಡಿಸುವಂತೆ ರಾಮನಗರ ತಾಲೂಕಿನ ನಿವಾಸಿಗಳು ಮತ ಬಹಿಷ್ಕಾರ ಮಾಡುತ್ತಿರುವುದು

ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ಓಡಾಡಲು ತೊಂದರೆಯಾಗುತ್ತಿದೆ. ಹಲವು ಬಾರಿ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮೂರು ಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ರಸ್ತೆ ಸರಿಪಡಿಸುವ ಭರವಸೆ ನೀಡಿದವರಿಗಷ್ಟೇ ಈ ಬಾರಿ ಮತ ಹಾಕುತ್ತೇವೆ” ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗ

ಶಿವಮೊಗ್ಗದ ಹಲವು ಗ್ರಾಮಗಳಲ್ಲಿ ಮತದಾನ ಬಹಿಷ್ಕಾರದ ಅಸ್ತ್ರ ಪ್ರಯೋಗ ಮುಂದುವರಿದಿದೆ. ಶಿವಮೊಗದ ಸಾಗರ ತಾಲೂಕಿನ ಶಾನ್ ಭೋಗ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿದೆ.

ಸಾಗರ
ಅರಣ್ಯ ಇಲಾಖೆ ಕಂದಾಯ ಗ್ರಾಮವನ್ನು ಅಭಯಾರಣ್ಯ ಎಂದು ಘೋಷಿಸಿರುವುದನ್ನು ಖಂಡಿಸಿ ಚುನಾವಣಾ ಬಹಿಷ್ಕಾರ

ಅರಣ್ಯ ಇಲಾಖೆಯ ಧೋರಣೆ ಖಂಡಿಸಿ ಶಾನ್ ಭೋಗ್ ಗ್ರಾಮ ಪಂಚಾಯಿತಿಯ ಮರಾಠಿ, ಮುರಳ್ಳಿ, ಕೋಡಾನಹಳ್ಳಿ, ಹಾಳಸಸಿ, ಹಾಳಗಳಲೆ ಗ್ರಾಮಗಳ ಜನರು ಚುನಾವಣೆ ಬಹಿಷ್ಕಾರ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ವಿಧಾನಸಭೆ ಚುನಾವಣಾ ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಸುಳ್ಳು ಆಮಂತ್ರಣ ಪತ್ರಿಕೆ ಮುದ್ರಣ

“ಅರಣ್ಯ ಇಲಾಖೆಯು ಈ ಭಾಗದ ಜಾಗವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಿದೆ. ಪಹಣಿಯಲ್ಲಿ ಕಂದಾಯ ಗ್ರಾಮ ಎಂದು ಘೋಷಿಸದೆ ಅಭಯಾರಣ್ಯ ಎಂದು ಉಲ್ಲೇಖ ಮಾಡಿದೆ. ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಅರಣ್ಯ ಇಲಾಖೆಯ ಈ ನಿರ್ಧಾರ ಸರಿಯಲ್ಲ. ಕೂಡಲೇ ಪರಿಸರ ಸೂಕ್ಷ್ಮ ಪ್ರದೇಶವೆಂಬ ಪಟ್ಟಿಯಿಂದ ಕೈ ಬಿಡಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...