ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ

Date:

  • ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಮೇಲೆ ದಾಳಿ
  • ಚಿಕ್ಕಜಾಲ ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮೀಪತಿ ಮೇಲೂ ದಾಳಿ

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೊಪ್ಪಳ, ದಾವಣಗೆರೆ, ಕೊಡಗು, ಬೀದರ್‌ ಹಾಗೂ ಧಾರವಾಡ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಮೇಲೆ ಈ ದಾಳಿ ನಡೆದಿದೆ.

ಧಾರವಾಡ
ಬೆಳಗಾವಿ ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿ ಸಂತೋಷ್ ಅನಿ ಶೆಟ್ಟರ ಮನೆಗೆ ಆಯುಕ್ತ ಪೊಲೀಸರು ದಾಳಿ ಮಾಡಿದ್ದು, ಧಾರವಾಡದ ಮಿಚಿಗನ್ ಬಡಾವಣೆಯ ಮನೆ ಮೇಲೆ ದಾಳಿ ನಡೆದಿದೆ.

ತುಮಕೂರು
ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕ ನಾಗರಾಜು ಅವರ ಮನೆ ಹಾಗೂ ಕಚೇರಿ ಮೇಲೆ ಗುರುವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರು ನಗರದ ದೇವನೂರು ಚರ್ಚ್ ಬಳಿ ಇರುವ ನಾಗರಾಜು ಮನೆ ಮತ್ತು ನಗರದ ಬೆಳಗುಂಬ ರಸ್ತೆಯಲ್ಲಿರುವ ಟೂಡಾ (ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ) ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು
ದೇವನಹಳ್ಳಿಯ ಗ್ರೇಡ್- 2 ತಹಶೀಲ್ದಾರ್ ಶಿವರಾಜ್, ಚಿಕ್ಕಜಾಲ ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮೀಪತಿ ಸೇರಿದಂತೆ ನಾಲ್ವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ತುಮಕೂರು ಜನಸ್ಪಂದನ ಕಚೇರಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೂವನಹಳ್ಳಿ ನಾಗರಾಜ್‌, ಲಂಚ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಬಂಧಿತರಾಗಿದ್ದ ಬಿಬಿಎಂಪಿ ಕಂದಾಯ ನಿರೀಕ್ಷಕ ನಟರಾಜ್ ದಾಳಿಗೊಳಗಾದವರಲ್ಲಿ ಸೇರಿದ್ದಾರೆ.

ಭೂವನಹಳ್ಳಿ ನಾಗರಾಜ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರಾಗಿ ನಿವೃತ್ತರಾಗಿದ್ದರು. ಬಳಿಕ ಜನಸ್ಪಂದನ ಕಚೇರಿಯ ಸಿಇಒ ಹುದ್ದೆಗೆ ನೇಮಕಗೊಂಡಿದ್ದರು. ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ವಿಭಾಗದಲ್ಲಿ ಈ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇವರಿಗೆ ಸಂಬಂಧಿಸಿದಂತೆ 23 ಸ್ಥಳಗಳಲ್ಲಿ ಶೋಧ ನಡೆಯುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

ಚಿಕ್ಕಬಳ್ಳಾಪುರ
ಬೆಂಗಳೂರಿನ ಚಿಕ್ಕಜಾಲ ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮಿಪತಿ ಅವರಿಗೆ ಸೇರಿದ ತಾಲ್ಲೂಕಿನ ಕೋಡೂರು ಗ್ರಾಮದ ತೋಟದ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕೋಡೂರಿನಲ್ಲಿ ಮೂರು ಎಕರೆ ಜಮೀನು ಹಾಗೂ ತೋಟದ ಮನೆ ಇದೆ. ಬೆಳಿಗ್ಗೆಯೇ ತೋಟದ ಮನೆಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.

ರಾಮನಗರ
ಬೆಂಗಳೂರಿನ ಬಿಬಿಎಂಪಿ ಮಹದೇವಪುರ ವಲಯದ ಕಂದಾಯ ನಿರೀಕ್ಷಕ ನಟರಾಜ್‌ ಅವರಿಗೆ ಸೇರಿರುವ ಕನಕಪುರ ತಾಲ್ಲೂಕಿನ ಶಿವನಹಳ್ಳಿಯಲ್ಲಿಯಲ್ಲಿರುವ ತೋಟದ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಶಿವನಹಳ್ಳಿಯವರಾದ ನಟರಾಜ್ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಕೇಳಿ ಬಂದಿತ್ತು. ಹಾಗಾಗಿ, ನಟರಾಜ್‌ ಅವರ ಸ್ವಂತ ಊರಿನಲ್ಲಿ ಕಟ್ಟಿರುವ ಭವ್ಯ ಬಂಗಲೆಗೆ ದಾಳಿ ನಡೆಸಿ ಹಾಗೂ ಸಮೀಪದಲ್ಲಿರುವ 7.5 ಎಕರೆ ತೆಂಗಿನತೋಟ, ಅಡಿಕೆ ತೋಟದ ದಾಖಲೆ ಪತ್ರಗಳನ್ನು ಪರಿಶೀಲಿಸಿದ್ದಾರೆ.

ಕೊಡಗು
ಕೊಡಗು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ನಂಜುಂಡೇಗೌಡ ಹಾಗೂ ಹಾರಂಗಿ ಜಲಾಶಯದ ಅಧೀಕ್ಷಕ ಎಂಜಿನಿಯರ್ ರಘುಪತಿ ಅವರ ನಿವಾಸದ ಮೇಲೆ ಗುರುವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ನಂಜುಂಡೇಗೌಡ ಅವರ ಇಲ್ಲಿನ ನಿವಾಸ ಹಾಗೂ ಕಚೇರಿ, ಮೈಸೂರಿನ ಇವರ ಸಂಬಂಧಿಕರ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಹಾರಂಗಿ ಜಲಾಶಯದ ಅಧೀಕ್ಷಕ ಎಂಜಿನಿಯರ್ ರಘುಪತಿ ಅವರ ಮೈಸೂರಿನ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ದಾವಣಗೆರೆ
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ಕೆ.ಮಹೇಶ್‌ ಹಾಗೂ ಪತ್ನಿ ಬಿಬಿಎಂಪಿ ಎಇ ಎಚ್. ಭಾರತಿ ಅವರ ಜಯನಗರದಲ್ಲಿನ ಮನೆ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ‍15 ಲಕ್ಷ ನಗದು ಹಾಗೂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.‌

ಕೊಪ್ಪಳ
ಕೊಪ್ಪಳದ ನಿರ್ಮಿತಿ ಕೇಂದ್ರದಲ್ಲಿ ಕಚೇರಿ ವ್ಯವಸ್ಥಾಪಕರಾಗಿರುವ ಮಂಜುನಾಥ ಬನ್ನಿಕೊಪ್ಪ ಕೆಲಸ ಮಾಡುವ ಕಚೇರಿ ಹಾಗೂ ಮನೆ ಮೇಲೆ ದಾಳಿ ನಡೆಸಿದೆ. ನಿರ್ಮಿತಿ ಕೇಂದ್ರದ ಬಡಾವಣೆಯಲ್ಲಿರುವ ಕಚೇರಿಯಲ್ಲಿ ರಾಯಚೂರಿನಿಂದ ಬಂದಿರುವ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಒಟ್ಟು ಐದು ತಂಡಗಳಲ್ಲಿ ದಾಳಿ ನಡೆಸಲಾಗಿದ್ದು, ಮಂಜುನಾಥ ಹೂಡಿಕೆ ಮಾಡಿರುವ ಕೊಪ್ಪಳ ತಾಲ್ಲೂಕಿನ ಹುಲಿಗಿಯ ಮಾರ್ಕ್ ಇನ್ ಲಾಡ್ಜ್ ನ ಮೇಲೂ ದಾಳಿ ನಡೆದಿದೆ.

ಬೀದ‌ರ್
ಚಿಟಗುಪ್ಪ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ವಿಜಯಕುಮಾರ ಎಂಬುವರ ಎರಡು ಮನೆಗಳ ಮೇಲೆ ಲೋಕಾಯುಕ್ತ
ಪೊಲೀಸರು ಗುರುವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೀದರ್ ತಾಲ್ಲೂಕಿನ ಹೊಸಕನಹಳ್ಳಿ ಗ್ರಾಮ ಹಾಗೂ
ಹುಮನಾಬಾದ್‌ ಪಟ್ಟಣದ ಟೀಚರ್ಸ್‌ ಕಾಲೊನಿಯಲ್ಲಿನ ಅವರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...