ಗುಬ್ಬಿ | ಹಳೆ ವೈಷಮ್ಯ ಹಿನ್ನೆಲೆ ಹತ್ಯೆಗೆ ಯತ್ನ; ಕೂದಲೆಳೆ ಅಂತರದಲ್ಲಿ ಪಾರಾದ ಯುವಕ

Date:

ಹಳೆಯ ವೈಷ್ಯಮದ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನಕ್ಕೆ ಗುದ್ದಿ ಯುವಕನನ್ನು ಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಗುಬ್ಬಿ ಪಟ್ಟಣದ ತಹಶೀಲ್ದಾರ್ ಕ್ವಾಟ್ರಸ್ ಮುಂಭಾಗದ ಎಂ.ಜಿ.ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಳೆದೆರಡು ವರ್ಷದ ಹಿಂದೆ ಹತ್ಯೆಗೆ ಒಳಗಾದ ಜಿ.ಸಿ.ನರಸಿಂಹಮೂರ್ತಿ (ಕುರಿ ಮೂರ್ತಿ) ಅವರ ಎರಡನೇ ಪುತ್ರ ಜಿ.ಎನ್.ಮನೋಜ್(29) ಕೊಲೆ ಸಂಚಿನ ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಯುವಕ ಎಂದು ಗುರುತಿಸಲಾಗಿದೆ.

ಗುಬ್ಬಿ ಪಟ್ಟಣದ ಪಂಚಮುಖಿ ಆಂಜನೇಯ ದೇವಸ್ಥಾನ ಸಮೀಪದಲ್ಲಿ ವಾಸವಿದ್ದ ಮನೆಯಿಂದ ಡಿಯೊ ಬೈಕಿನಲ್ಲಿ ಬಸ್ ನಿಲ್ದಾಣದತ್ತ ತೆರಳುತ್ತಿದ್ದ ಯುವಕ ಮನೋಜ್ ಮೇಲೆ ಸ್ಕಾರ್ಪಿಯೋ ಕಾರಿನ ಮೂಲಕ ಹತ್ಯೆಗೆ ಯತ್ನಿಸಲಾಗಿದೆ. ಹಳೇ ಕೆಇಬಿ ಕಟ್ಟಡ ಮುಂಭಾಗದ ರಸ್ತೆಯಲ್ಲಿ ಯುವಕನ ಆಗಮನಕ್ಕೆ ಕಾದು ನಿಂತಿದ್ದು, ಆ ಬಳಿಕ ಬೈಕ್ ಹಿಂಬಾಲಿಸಿ ಗುದ್ದಿ, ಹತ್ಯೆಗೆ ಯತ್ನಿಸಲಾಗಿದೆ. ಕೊಲೆ ಮಾಡುವ ಸಂಚು ಅರಿತ ಯುವಕ ಮನೋಜ್, ಸ್ಥಳದಿಂದ ಓಡಿ ಮಾರುತಿನಗರ ಬಡಾವಣೆಯ ಸಹೋದರನ ಮನೆಯಲ್ಲಿ ಆಶ್ರಯ ಪಡೆದು ಅಪಾಯದಿಂದ ಪಾರಾಗಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಗುಬ್ಬಿ

ಬೈಕಿಗೆ ಗುದ್ದಿದ ನಂತರ ಓಡಿಹೋದ ಮನೋಜ್‌ನನ್ನು ಬೆನ್ನತ್ತಿದ ಕಾರಿನಲ್ಲಿದ್ದವರು, ಆಶ್ರಯ ಪಡೆದ ಮನೆಯ ಮುಂದೆ ನಿಂತು ಕೊಲೆ ಮಾಡುವ ಸಂಚು ರೂಪಿಸಿದ್ದರು. ಕೂಡಲೇ ಮನೆಯಲ್ಲಿದ್ದವರು ಕೂಗಾಡಿದ್ದರಿಂದ ಕ್ಷಣಾರ್ಧದಲ್ಲಿ ಬಂದ ವೇಗದಲ್ಲೇ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

ಘಟನೆ ನಡೆದ ಕೂಡಲೇ ಗುಬ್ಬಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿರುವ ಯುವಕ ಮನೋಜ್, “ಈ ಹಿಂದೆ ನನ್ನ ತಂದೆ ನರಸಿಂಹಮೂರ್ತಿ ಅವರ ಕೊಲೆ ನಡೆದಿತ್ತು. ಈಗ ಕಾರಿನಲ್ಲಿ ಅಪಘಾತ ಮಾಡುವ ರೀತಿ ನನ್ನ ಕೊಲೆ ಸಂಚು ರೂಪಿಸಿರುವ ಸಾಧ್ಯತೆ ಇದೆ. ಕೂಡಲೇ ದುಷ್ಕರ್ಮಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಕ್ಷೌರ ಮಾಡಲು ನಿರಾಕರಿಸಿದ ಮುದುಕಪ್ಪ ಹಡಪದ್ ಆಸ್ತಿ ಮುಟ್ಟುಗೋಲು ಹಾಕಬೇಕು : ಮಾದಿಗ ಸಮುದಾಯ ಒತ್ತಾಯ

ಸ್ಥಳಕ್ಕೆ ಧಾವಿಸಿದ ಹೆಚ್ಚುವರಿ ಜಿಲ್ಲಾ ವರಿಷ್ಠಾಧಿಕಾರಿ ಮರಿಯಪ್ಪ, ಸಿಪಿಐ ಗೋಪಿನಾಥ್ ಸ್ಥಳ ಪರಿಶೀಲನೆ ನಡೆಸಿದರು. ತಂಡವೊಂದನ್ನು ರಚಿಸಿ ಸಿಸಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ತನಿಖೆ ಚುರುಕುಗೊಳಿಸಿದ್ದಾರೆ.

ಸದಾಕಾಲ ಜನ ಸಂದಣಿ, ವಾಹನ ದಟ್ಟಣೆಯಿರುವ ಎಂ.ಜಿ.ರಸ್ತೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು ಸೇರಿದಂತೆ ತಹಶೀಲ್ದಾರ್ ವಸತಿ ಗೃಹ ಮುಂದೆ ಬೆಳಗ್ಗೆ ನಡೆದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...