ಪಟಾಕಿ ದುರಂತ | ಗಾಯಾಳು ಚಿಕಿತ್ಸೆಗೆ ಹಣ ಪಡೆದ ಸೇಂಟ್‌ ಜಾನ್ಸ್‌ ಆಸ್ಪತ್ರೆ ವಿರುದ್ಧ ಎಫ್‌ಐಆರ್‌

Date:

ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದ ವೆಂಕಟೇಶ್ (25) ಅವರ ಕುಟುಂಬಸ್ಥರಿಂದ ಚಿಕಿತ್ಸೆಗೆ ₹70 ಸಾವಿರ ಹಣ ಪಡೆದಿದ್ದ ಆರೋಪದಡಿ ನಗರದ ಸೇಂಟ್‌ ಜಾನ್ಸ್‌ ಆಸ್ಪತ್ರೆಯ ವಿರುದ್ಧ ಕೋರಮಂಗಲ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸೇಂಟ್‌ ಜಾನ್ಸ್‌ ಆಸ್ಪತ್ರೆಯ ವಿರುದ್ಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಎ.ದಯಾನಂದ್ ಅವರು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಅತ್ತಿಬೆಲೆಯ ಅಗ್ನಿ ಅವಘಡದಲ್ಲಿ ಗಾಯಗೊಂಡಿರುವ ಎಲ್ಲರ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೂ ಮೃತನ ಕುಟುಂಬಸ್ಥರಿಂದ ಆಸ್ಪತ್ರೆಯ ಸಿಬ್ಬಂದಿ ಹಣ ಕಟ್ಟಿಸಿಕೊಂಡಿದ್ದಾರೆ. ಹಣ ಕಟ್ಟಿಸಿಕೊಂಡಿದ್ದಕ್ಕೆ ಸಾಕ್ಷಿಯಾಗಿ ಆಸ್ಪತ್ರೆಯ ರಶೀದಿಗಳಿವೆ.

ಶನಿವಾರ ಸಂಜೆ ಸೇಂಟ್ ಜಾನ್ಸ್ ಆಸ್ಪತ್ರೆಗೆ ಗಾಯಾಳು ವೆಂಕಟೇಶ್​ ದಾಖಲಾಗಿದ್ದರು. ಈ ವೇಳೆ, ಗಾಯಾಳು ಕುಟುಂಬಸ್ಥರು ಎಟಿಎಂ ಕಾರ್ಡ್ ಬಳಸಿ ₹40 ಸಾವಿರ ಪಾವತಿಸಿದ್ದಾರೆ. ಅದೇ ದಿನ ಸಂಜೆ ₹500 ಕಟ್ಟಿದ್ದಾರೆ. ನಂತರ ಶನಿವಾರ ರಾತ್ರಿ ₹4000, ಭಾನುವಾರದಂದು ಮತ್ತೆ ಫೋನ್ ಪೇ ಮೂಲಕ ₹15 ಸಾವಿರ ಕಟ್ಟಿದ್ದಾರೆ. ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ಹಣ ಪಾವತಿ ಮಾಡಿದ ಎಲ್ಲ ರಶೀದಿಗಳು ಕುಟುಂಬಸ್ಥರ ಬಳಿ ಇವೆ.

“ಆಸ್ಪತ್ರೆಗೆ ಮಗನನ್ನು ದಾಖಲು ಮಾಡಿದ ಮೊದಲ ದಿನ ₹40 ಸಾವಿರ ಹಣ ಪಾವತಿ ಮಾಡಿದ್ದೇನೆ. ಎರಡನೇ ದಿನ ₹30 ಸಾವಿರ, ಭಾನುವಾರದ ನಂತರ ₹40 ಸಾವಿರ ಕೇಳಿದ್ದಾರೆ. ನಾನು ಬಡವನಾಗಿದ್ದರೂ, ಇರುವ ಒಬ್ಬನೇ ಮಗನನ್ನು ಉಳಿಸಿಕ್ಕೊಳ್ಳಲು ಸಾಲ-ಸೋಲ ಮಾಡಿ ಹಣ ಹೊಂದಿಸಿ ಆಸ್ಪತ್ರೆಗೆ ಕಟ್ಟಿದ್ದೇನೆ” ಎಂದು ಮೃತ ವೆಂಕಟೇಶ್ ತಂದೆ ರಮಣಪ್ಪ ಹೇಳಿದರು.

“ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರು ಉಚಿತವಾಗಿ ಚಿಕಿತ್ಸೆ ನೀಡಿ ಎಂದು ಹೇಳಿದ್ದಾರೆ ಎಂದು ಆಸ್ಪತ್ರೆಯವರಿಗೆ ತಿಳಿಸಿದರೆ, ಆ ಬಗ್ಗೆ ನಮಗೆ ಮಾಹಿತಿ ಇಲ್ಲ ಎನ್ನುತ್ತಿದ್ದಾರೆ. ಆಟೋ ಓಡಿಸಿ ನನ್ನ ಮಗನನ್ನು ಸಾಕಿದ್ದೀನಿ, ಬಾಡಿ ಬಿಲ್ಡರ್ ಮಾಡಿಸಿದ್ದೆ. ನನ್ನ ಮಗ ಗಟ್ಟಿಮುಟ್ಟಾಗಿದ್ದ. ದುರಂತದಲ್ಲಿ ನನ್ನ ಮಗನ ದೇಹ 20% ಸುಟ್ಟಿದೆ ಎಂದು ಹೇಳಿದ್ದರು. ಆದರೆ, ಅಷ್ಟು ಸಹ ಸುಟ್ಟಿರಲಿಲ್ಲ. ಕೇವಲ ಹಿಂದಿನ ಭಾಗ ಮಾತ್ರ ಸುಟ್ಟಿತ್ತು. ದೇಹದ ಮುಂದಿನ ಭಾಗ ಏನು ಆಗಿರಲಿಲ್ಲ. ನನ್ನ ಮಗ ಸಾಯುವ ವ್ಯಕ್ತಿ ಅಲ್ಲ. ಆಸ್ಪತ್ರೆಯವರು ನಮ್ಮಿಂದ ಇಲ್ಲಿಯವರೆಗೂ ₹70 ಸಾವಿರ ಹಣ ಕಟ್ಟಿಸಿಕೊಂಡಿದ್ದಾರೆ. ಹಣ ನೀಡಿಲ್ಲ ಅಂತ ಸರಿಯಾಗಿ ಚಿಕಿತ್ಸೆ ನೀಡಿಲ್ಲ” ಎಂದು ಡಾ.‌ಸಾಗರ್ ವಿರುದ್ಧ ಮೃತ ವೆಂಕಟೇಶ್ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಟೊಮೆಟೊ ಬಳಿಕ ಈರುಳ್ಳಿ ಬೆಲೆ ಹೆಚ್ಚಳ ಆತಂಕ

ಮೃತ ವೆಂಕಟೇಶ್ ಸಾವಿಗೆ ಸೇಂಟ್ ಜಾನ್ಸ್ ಆಸ್ಪತ್ರೆಯೇ ಕಾರಣ ಎಂದು ಆಸ್ಪತ್ರೆ ಆವರಣದಲ್ಲಿ ಮೃತ ವೆಂಕಟೇಶ್ ಕುಟುಂಬಸ್ಥರು ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್ ಭೇಟಿ ನೀಡಿ ಮಾತನಾಡಿದ್ದರು.

ಈ ವೇಳೆ, ಚಿಕಿತ್ಸೆ ವೆಚ್ಚ ಪಾವತಿಸಿರುವ ಬಗ್ಗೆ ಪೋಷಕರು ದಾಖಲೆಗಳನ್ನು ನೀಡಿದ್ದರು. ಆಸ್ಪತ್ರೆಯವರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ, ಠಾಣೆಗೆ ದೂರು ನೀಡಿದ್ದಾರೆ. ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಬೇಕಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...