ಬೀದರ್‌ | ಔರಾದ, ಕಮಲನಗರ ತಾಲೂಕು ಬರಪೀಡಿತ ಘೋಷಣೆಗೆ ಶಾಸಕ ಚವ್ಹಾಣ ಆಗ್ರಹ

Date:

  • ಶಾಸಕ ಪ್ರಭು ಚವ್ಹಾಣರಿಂದ ಮನೆಹಾನಿ ಸಂತ್ರಸ್ಥರಿಗೆ ತಿಳುವಳಿಕೆ ಪತ್ರ ವಿತರಣೆ
  • ಔರಾದ ಹಾಗೂ ಕಮಲನಗರ ತಾಲೂಕುಗಳು ಬರಪೀಡಿತ ಪ್ರದೇಶವೆಂದು ಘೋಷಣೆಗೆ ಆಗ್ರಹ

ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿರುವುದರಿಂದ ಸಾಕಷ್ಟು ಬೆಳೆನಷ್ಟವಾಗಿದೆ. ರೈತರು ಆತಂಕದಲ್ಲಿದ್ದು, ಸರ್ಕಾರ ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ. ಚವ್ಹಾಣ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿರುವ ಶಾಸಕರು, “ಔರಾದ(ಬಿ) ಕ್ಷೇತ್ರದಲ್ಲಿ ಮುಂಗಾರು ಹಂಗಾಮಿನ ಆರಂಭದಲ್ಲಿ ಒಂದು ತಿಂಗಳು ಮಳೆಯಾಗದಿರುವುದರಿಂದ ಬಿತ್ತನೆಯೂ ವಿಳಂಬವಾಗಿತ್ತು. ನಂತರ ತೀವ್ರ ಮಳೆಯಾಗಿದೆ. ಕಳೆದೊಂದು ತಿಂಗಳಿನಿಂದ ಮಳೆಯಾಗದಿರುವುದರಿಂದ ಸದ್ಯ ಬಿತ್ತನೆಯಾದ ಬೆಳೆಗಳೆಲ್ಲ ಸೊರಗಿ ನಿಂತಿವೆ. ಮಳೆಯ ಸಮಸ್ಯೆಯಿಂದಾಗಿ ಎರಡ್ಮೂರು ಬಾರಿ ಬಿತ್ತನೆ ಮಾಡಿ ನಷ್ಟ ಅನುಭವಿಸಿರುವ ಕ್ಷೇತ್ರದ ರೈತರು ಇದೀಗ ಮಳೆಯ ಆಭಾವದಿಂದ ಚಿಂತಿತರಾಗಿದ್ದಾರೆ” ಎಂದು ಹೇಳಿದರು.

“ಔರಾದ್‌ನಲ್ಲಿ ಬಹುತೇಕ ರೈತರು ಮಳೆಯನ್ನು ಆಶ್ರಯಿಸಿರುವುದರಿಂದ ಸಮರ್ಪಕ ಮಳೆಯಾದರೆ ಮಾತ್ರ ಫಸಲು ಸಿಗಬಹುದು. ಈ ಬಾರಿಯಾದರೂ ಉತ್ತಮ ಬಳೆ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಕ್ಷೇತ್ರದ ರೈತರು ತೀವ್ರ ನಿರಾಶರಾಗಿದ್ದಾರೆ. ತೀವ್ರ ಬಿಸಿಲಿನ ತಾಪಕ್ಕೆ ಹೊಲಗಳಲ್ಲಿನ ಬೆಳೆಗಳೆಲ್ಲವೂ ಸುಟ್ಟು ಹೋಗುತ್ತಿರುವುದರಿಂದ ಅನ್ನದಾತರು ದಿಕ್ಕು ತೋಚದೆ ಪರಿತಪಿಸುತ್ತಿದ್ದಾರೆ. ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಬೇಕು. ತೀವ್ರ ಬೆಳೆನಷ್ಟ ಹೊಂದಿದ ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ಅವಶ್ಯಕ ಬೆಳೆನಷ್ಟ ಪರಿಹಾರ ಬಿಡುಗಡೆ ಮಾಡಬೇಕೆಂದು” ಶಾಸಕರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೆಹಾನಿ ಸಂತ್ರಸ್ಥರಿಗೆ ತಿಳುವಳಿಕೆ ಪತ್ರ ವಿತರಣೆ

2023-24ನೇ ಸಾಲಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಮನೆಹಾನಿಯಾದ ಸಂತ್ರಸ್ಥರಿಗೆ ಸರ್ಕಾರದಿಂದ ಪರಿಹಾರ ಬಿಡುಗಡೆಯಾಗಿದ್ದು, ಮಾಜಿ ಸಚಿವ ಹಾಗೂ ಶಾಸಕ ಪ್ರಭು.ಬಿ ಚವ್ಹಾಣ ಅವರು ಆಗಸ್ಟ್ 28ರಂದು ಔರಾದ(ಬಿ) ತಾಲ್ಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಔರಾದ(ಬಿ) ಕ್ಷೇತ್ರದ ಫಲಾನುಭವಿಗಳಿಗೆ ತಿಳುವಳಿಕೆ ಪತ್ರಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಮಳೆಗಾಲದ ಆರಂಭದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕ್ಷೇತ್ರದಲ್ಲಿ ಸಾಕಷ್ಟು ಮನೆಗಳು ಹಾನಿಗೊಂಡಿವೆ. ಸರ್ಕಾರದ ಮೇಲೆ ಒತ್ತಡ ತಂದು ಸಂತ್ರಸ್ಥರಿಗೆ ಪರಿಹಾರಧನ ಬಿಡುಗಡೆ ಮಾಡಲಾಗಿದೆ. ಔರಾದ(ಬಿ) ತಾಲ್ಲೂಕಿನ 104 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆಯಾಗಿದ್ದು, ಕಮಲನಗರ ಹಾಗೂ ಉಳಿದ ಫಲಾನುಭವಿಗಳಿಗೆ ಶೀಘ್ರದಲ್ಲೇ ಪರಿಹಾರಧನ ಬಿಡುಗಡೆಯಾಗಲಿದೆ” ಎಂದರು.

“ತೀವ್ರ ಮಳೆಯಾದ ಸಂದರ್ಭದಲ್ಲಿ ನಾನು ಕ್ಷೇತ್ರದೆಲ್ಲೆಡೆ ಸುತ್ತಾಡಿ ವಾಸ್ತವವನ್ನು ಕಣ್ಣಾರೆ ವೀಕ್ಷಿಸಿ, ಮನೆ ಹಾನಿಯ ನಿಖರ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೆ. ತಹಸೀಲ್ದಾರರು ಸೇರಿದಂತೆ ಎಲ್ಲ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದ್ದಾರೆ. ಹಾಗಾಗಿ ಶೀಘ್ರ ಪರಿಹಾರ ಬಿಡುಗಡೆಯಾಗಿದೆ. ಪ್ರತಿ ಫಲಾನುಭವಿಗಳ ಖಾತೆಗೆ 50 ಸಾವಿರ ಮಂಜೂರಾಗಿದ್ದು, ಇದನ್ನು ದುರುಪಯೋಗ ಮಾಡದೇ ಹಾನಿಯಾದ ಮನೆಯ ದುರಸ್ತಿಗೆ ಬಳಸಿಕೊಳ್ಳಬೇಕೆಂದು ತಿಳಿಸಿದ್ದಾರೆ. ಹಾಗೆಯೇ ದುರಸ್ತಿ ಮಾಡಿದ ಮನೆಗಳ ಖಚಿತತೆಯ ಬಗ್ಗೆ ಭಾವಚಿತ್ರಗಳನ್ನು ಸಲ್ಲಿಸುವಂತೆ” ಹೇಳಿದ್ದಾರೆ.

“ಸಮರ್ಪಕ ಮಳೆಯಾಗದ ಕಾರಣ ಔರಾದ(ಬಿ) ಕ್ಷೇತ್ರದಲ್ಲಿ ಸಾಕಷ್ಟು ಬೆಳೆನಷ್ಟವಾಗಿದೆ. ಕಂದಾಯ ಇಲಾಖೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ನೊಂದ ರೈತರಿಗೆ ಸರ್ಕಾರದ ಪರಿಹಾರಧನ ಸಿಗುವ ನಿಟ್ಟಿನಲ್ಲಿ ಪ್ರಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಇದೇ ವೇಳೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ” ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಪಘಾತ ತಗ್ಗಿಸಲು ʼರಸ್ತೆ ಸುರಕ್ಷತಾ ಓಟʼ: ಎಸ್‌ಪಿ ಚನ್ನಬಸವಣ್ಣ

ಈ ಸಂದರ್ಭದಲ್ಲಿ ಔರಾದ(ಬಿ) ಎಪಿಎಂಸಿ ಅಧ್ಯಕ್ಷರ ದೊಂಡಿಬಾ ನರೋಟೆ, ಔರಾದ(ಬಿ) ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ, ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಸುರೇಶ ಕೋಟೆ, ಗ್ರೇಡ್-2 ತಹಸೀಲ್ದಾರ ನರಸಪ್ಪ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...