ಕಳೆದ ನಾಲ್ಕು ದಿನದಿಂದ ಸುರಿದ ಸತತ ಮಳೆಗೆ ಜಿಲ್ಲೆಯಾದ್ಯಂತ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಶನಿವಾರ ಬೆಳಿಗ್ಗೆಯಿಂದ ಪ್ರಾರಂಭವಾದ ಮಳೆಯು ರಾತ್ರಿವರೆಗೆ ಬಿಡುವಿಲ್ಲದೇ ಸುರಿಯಿತು. ಕೆಲಕಾಲ ಬಿಡುವು ನೀಡಿ, ಬಳಿಕ ಮತ್ತೆ ಧಾರಾಕಾರವಾಗಿ ಸುರಿಯಲು ಪ್ರಾರಂಭಿಸಿತು. ಇಡೀ ದಿನ ಸುರಿದ ಮಳೆಯಿಂದ ಜಿಲ್ಲೆಯ ಕೆಲವೆಡೆ ಮನೆಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿವೆ. ಮಳೆಯಿಂದ ಹೊಲ ಗದ್ದೆಗಳಲ್ಲಿ ಕೃಷಿ ಚಟುವಟಿಕೆ ಸ್ಥಬ್ತಗೊಂಡಿದ್ದವು. ವಿದ್ಯುತ್ ಪೂರೈಕೆಯಲ್ಲೂ ವ್ಯತಯವಾಗಿದ್ದು, ಜನರು ತೊಂದರೆ ಅನುಭವಿಸಿದರು.
ಔರಾದ್ ತಾಲೂಕಿನ ಸುಂದಾಳ ಗ್ರಾಮದ ನಿವಾಸಿ ವಿಜಯಬಾಯಿ ಹರಿದಾಸ ಎಂಬುವವರ ಮನೆಯ ಛಾವಣಿ ಕುಸಿದು ಬಿದ್ದಿದೆ. ತಾಲ್ಲೂಕಿನಲ್ಲಿ ಮಳೆಯಿಂದ ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ತಹಸೀಲ್ದಾರ್ ಮಹೇಶ ಪಾಟೀಲ್ ʼಈದಿನʼಕ್ಕೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಬೀದರ್ | ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ : ಎಸ್ಪಿ ಪ್ರದೀಪ ಗುಂಟಿ
ಧೂಪತಮಹಾಗಾಂವ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಬಳಿ ಗ್ರಾಮದಲ್ಲಿ ಶ್ರೀದೇವಿ ಪ್ರಲಾದ ಬಿರಾದರ ಎಂಬುವವರ ಮನೆಯ ಗೋಡೆ ನಿರಂತರ ಮಳೆಯಿಂದಾಗಿ ಕುಸಿದು ಬಿದ್ದಿರುವ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.





