ʼಜನ ಸ್ನೇಹಿ ಆಡಳಿತ’ ಜಾರಿಗೆ ರಾಜ್ಯ ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಎಂಬ ವಿನೂತನ ಕಾರ್ಯಕ್ರಮಕ್ಕೆ ಸಂತಪೂರ ಪೊಲೀಸ್ ಠಾಣೆಯ ಪಿಎಸ್ಐ ನಂದುಕುಮಾರ್ ಮೂಳೆ ಅವರು ಚಾಲನೆ ನೀಡಿದರು.
ಜನ ಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್ ಸಿಬ್ಬಂದಿಯೇ ಮನೆ ಬಾಗಿಲಿಗೆ ಬರುವ ವಿನೂತನ ಪರಿಕಲ್ಪನೆ ಮನೆ-ಮನೆಗೆ ಪೊಲೀಸ್ ಅಭಿಯಾನಕ್ಕೆ ಜಮಗಿ, ಚಟ್ನಾಳ ಸೇರಿದಂತೆ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.
ಸಂತಪುರ ಪೊಲೀಸ್ ಠಾಣೆಯ ಸಿಬ್ಬಂದಿ ಠಾಣಾ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸಿದರು. ನಂತರ ಸೈಬರ್ ಅಪರಾಧ, ಮಾದಕ ವಸ್ತು, ಪೋಕ್ಸೊ ಕಾಯ್ದೆ, ಮನೆಗಳ್ಳತನ, ಸರಗಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.





