ಔರಾದ್‌ | ಕನ್ನಡ ಭಾಷೆ ಶ್ರೀಮಂತಗೊಳಿಸಿದ ಶರಣರು : ಚಂದ್ರಕಾಂತ ನಿರ್ಮಳೆ

Date:

ʼಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ್ದು 12ನೇ ಶತಮಾನದ ಬಸವಾದಿ ಶರಣರು, ಅದರಂತೆ ನಾವೆಲ್ಲರೂ ಕನ್ನಡಕ್ಕಾಗಿ ಟೊಂಕಕಟ್ಟಿ ಗಡಿಭಾಗದಲ್ಲಿ ಕನ್ನಡ ಉಳಿಸುವ ಕಾರ್ಯ ಮಾಡಬೇಕಾಗಿದೆʼ ಎಂದು ಶರಣ ಸಾಹಿತ್ಯ ಪರಿಷತ್ ತಾಲ್ಲೂಕಾಧ್ಯಕ್ಷ ಚಂದ್ರಕಾಂತ ನಿರ್ಮಳೆ ಅಭಿಪ್ರಾಯಪಟ್ಟರು.

ಔರಾದ್ ಪಟ್ಟಣದ ಬಸವ ಗುರುಕುಲ ಶಾಲೆಯಲ್ಲಿ ತಾಲ್ಲೂಕು ಕಸಾಪ ಆಯೋಜಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ʼಸಾಹಿತ್ಯ, ಕಲೆ, ಸಂಸ್ಕೃತಿ ಸಂರಕ್ಷಿಸುವ ಜೊತೆಗೆ ಕನ್ನಡ ಎಲ್ಲರ ಉಸಿರಾಗಿಸುವ ಕಾರ್ಯ ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆʼ ಎಂದರು.

ʼಕನ್ನಡ ನಾಡು, ನುಡಿ, ಸಂಸ್ಕೃತಿ ರಕ್ಷಣೆಗಾಗಿ 1915ರಲ್ಲಿ ಅಂದಿನ ಮೈಸೂರು ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಳಜಿ ವಹಿಸಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಪರಿಷತ್ ಸ್ಥಾಪನೆಗೊಳ್ಳಲು ಪ್ರಮುಖ ಕಾರಣರಾಗಿದ್ದರು. ಅಂದಿನಿಂದ ಈಗಿನವರೆಗೂ ಹಲವು ಮಹನೀಯರು ಕನ್ನಡ ಕಟ್ಟುವ ಕಾರ್ಯದಲ್ಲಿ ತೊಡಗಿ ಕನ್ನಡ ನಾಡು, ನುಡಿ ಬೆಳವಣಿಗೆಗೆ ನೆರವಾಗಿದ್ದಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಪನ್ಮೂಲ ಶಿಕ್ಷಕ ಮಾರುತಿ ಗಾದಗೆ ಮಾತನಾಡಿ, ʼಕನ್ನಡ ಸಾಹಿತ್ಯ ಪರಿಷತ್ತು ಸುದೀರ್ಘ ಇತಿಹಾಸ ಹೊಂದಿದ್ದು, ದೇಶ-ವಿದೇಶಗಳಲ್ಲಿ ಸಹ ಸದಸ್ಯರನ್ನು ಹೊಂದಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಸೇರಿದಂತೆ ಸರ್.ಎಂ.ವಿಶ್ವೇಶ್ವರಯ್ಯ ಹಾಗೂ ಮಿರ್ಜಾ ಇಸ್ಮಾಯಿಲ್ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಬೆಳವಣಿಗೆಗೆ ಶ್ರಮಿಸಿದ್ದರುʼ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯ ಡಾ. ಸುಭಾಷ ಮೀಸೆ ಅವರನ್ನು ಸನ್ಮಾನಿಸಲಾಯಿತು. ಸರ್ಕಾರಿ ಐಟಿಐ ತರಬೇತಿ ಅಧಿಕಾರಿ ಯುಸುಫ್ ಮಿಯ್ಯ, ಕಸಾಪ ಅಧ್ಯಕ್ಷ ಬಾಲಾಜಿ ಅಮರವಾಡಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? BREAKING NEWS | ಒಳಮೀಸಲಾತಿ – ಇಂದಿನಿಂದ ಮೇ 17ರವರೆಗೆ ಮನೆ ಮನೆ ಸಮೀಕ್ಷೆ: ಸಿಎಂ

ಕಾರ್ಯಕ್ರಮದಲ್ಲಿ ಬಸವ ಕೇಂದ್ರದ ತಾಲ್ಲೂಕಾಧ್ಯಕ್ಷ ಜಗನ್ನಾಥ ಮೂಲಗೆ, ಮುಖ್ಯ ಶಿಕ್ಷಕಿ ನಿರ್ಮಲಾ ಸೇರಿ, ಪ್ರಕಾಶ ಅಲ್ಮಾಜೆ, ನಾಗನಾಥ ಶಂಕು, ಸಂದೀಪ ಪಾಟೀಲ, ಅಮರಸ್ವಾಮಿ ಸ್ಥಾವರಮಠ, ಸಂಜೀವಕುಮಾರ ವಲಾಂಡೆ, ವಾಮನ ಮಾನೆ, ಸಂತೋಷ ಮಡಿವಾಳ, ಅಮರ ನಿಸ್ಪತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...