ಔರಾದ್ ತಾಲೂಕಿನ ಜೋಜನಾ ಗ್ರಾಮದ ರೈತ ಹಣಮಂತ ಗಣಪತಿ ರಾಘೋಳೆ ಎಂಬುವವರಿಗೆ ಸೇರಿದ ರಾಶಿ ಮಾಡಲು ಕೂಡಿಟ್ಟ ಸೋಯಾ ಬಣವಿಗೆ ಯಾರೋ ಅಪರಿಚಿತ ದುಷ್ಕರ್ಮಿಗಳು ಗುರುವಾರ ಸಂಜೆ 8 ಗಂಟೆ ಸುಮಾರಿಗೆ
ಬಣವಿಗೆ ಬೆಂಕಿಯಿಟ್ಟಿದ್ದಾರೆ.
ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬಣವಿಮೆಗೆ ಕಿಡಿ ಇಟ್ಟ ಪರಿಣಾಮ 4 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಸುಮಾರು 30 ಕ್ವಿಂಟಲ್ಗಿಂತಲೂ ಹೆಚ್ಚಿನ ಫಸಲು ಬರುವ ಅಂದಾಜು ₹1.50 ಲಕ್ಷ ಮೌಲ್ಯದ ಬೆಳೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ರೈತ ಹನುಮಂತ್ ರಾಗೋಳೆ ಅವರು ಜೋಜನಾ ಗ್ರಾಮದ ನಿವಾಸಿಯಾಗಿದ್ದು, ಗ್ರಾಮ ಪಕ್ಕದ ಲಿಂಗದಳ್ಳಿ (ಕೆ) ಗ್ರಾಮದ
ಸರ್ವೇ ನಂ-19 ರಲ್ಲಿ ಬೆಳೆದಿದ್ದ ಸೋಯಾಅವರೆ ಕಟಾವಿ ಮಾಡಿ ಸಂಗ್ರಹಿಸಿ ಬಣವಿಗೆ ಬೆಂಕಿ ಇಡಲಾಗಿದೆ.
ಇದನ್ನೂ ಓದಿ : ಬೀದರ್ | ಕಾರು ಡಿಕ್ಕಿ : ವೃದ್ಧ ಸಾವು
ಕಷ್ಟಪಟ್ಟು ದುಡಿದು ಬೆಳೆದಿದ್ದ ಸೋಯಾಅವರೆ ಬಣವಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಅಗ್ನಿಗೆ ಸುಟ್ಟು ಕರಕಲಾದ ಸೋಯಾ ಬೆಳೆಯ ಪರಿಹಾರ ನೀಡಬೇಕಾಗಿ ರೈತರು ಮನವಿ ಮಾಡಿದ್ದಾರೆ.





