ಔರಾದ್‌ | ಕುಡಿಯುವ ನೀರಿಗಾಗಿ ಗ್ರಾ.ಪಂ. ಕಚೇರಿ ಎದುರು ವಿದ್ಯಾರ್ಥಿಗಳಿಂದ ಪ್ರತಿಭಟನೆ

Date:

ಶಾಲೆಗೆ ಶುದ್ಧ ಕುಡಿಯುವ ನೀರಿಗೆ ಶಾಶ್ವತ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಔರಾದ್‌ ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಗ್ರಾಮ ಪಂಚಾಯತ್‌ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ನಾಗಮಾರಪಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದ್ದು, 1ರಿಂದ 7ನೇ ತರಗತಿವರೆಗೆ ಒಟ್ಟು 127 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಶಾಲಾ ಮಕ್ಕಳಿಗೆ ಕುಡಿಯಲು ಹಾಗೂ ಬಿಸಿಯೂಟ ಸಿದ್ಧಪಡಿಸಲು ನೀರಿನ ವ್ಯವಸ್ಥೆ ಇಲ್ಲ. ಶೌಚಾಲಯ ವ್ಯವಸ್ಥೆ, ಕಾಂಪೌಂಡ್‌ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದರು.

WhatsApp Image 2025 11 06 at 7.04.12 AM
ಪ್ರತಿಭಟನಾ ನಿರತ ವಿದ್ಯಾರ್ಥಿಗಳು,ಗ್ರಾಮಸ್ಥರಿಗೆ ಪಿಡಿಒ ಶರಣಪ್ಪ ಅವರು ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ʼಸರ್ಕಾರಿ ಶಾಲೆಯ ಮಕ್ಕಳಿಗೆ ಕನಿಷ್ಠ ನೀರಿನ ಸೌಕರ್ಯ ಇಲ್ಲದಕ್ಕೆ ನೀರು ಕುಡಿಯಲು ಮನೆಗೆ ಬರಬೇಕಾದ ಪರಿಸ್ಥಿತಿ ಇದೆ. ಇನ್ನು ಸುತ್ತಲಿನ ಬೇರೆ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳು ಹೇಗೆ ಮಾಡಬೇಕು. ಇದರಿಂದ ಮಕ್ಕಳ ಶೈಕ್ಷಣಿಕ ಕಲಿಕೆಗೆ ಅಡ್ಡಿಯಾಗುತ್ತಿದೆ. ಗ್ರಾಮ ಪಂಚಾಯತಿ ಪಿಡಿಒ, ಅಧ್ಯಕ್ಷರು ಸಮಸ್ಯೆಗೆ ಸ್ಪಂದಿಸುತ್ತಿಲ್ಲವೆಂದು ಗ್ರಾಮಸ್ಥರು ವಿದ್ಯಾರ್ಥಿಗಳನ್ನು ಕಚೇರಿ ಮುಂದೆ ಕೂರಿಸಿ ಪ್ರತಿಭಟನೆ ಮಾಡಬೇಕಾದ ಅನಿವಾರ್ಯತೆ ಬಂದಿದೆʼ ಎಂದು ಪೋಷಕರು ಆಕ್ರೋಶ ಹೊರ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್ | ₹12 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಈ ಬಗ್ಗೆ ಶಾಲೆಯ ಮುಖ್ಯಗುರು ಸತೀಷ ಅವರನ್ನು ಈದಿನ.ಕಾಮ್‌ ಸಂಪರ್ಕಿಸಿದಾಗ, ʼಕೆಲ ವರ್ಷಗಳಿಂದ ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಈ ಬಗ್ಗೆ ಗ್ರಾಮ ಪಂಚಾಯತಿಗೆ ಎರಡು ಸಲ ಮನವಿ ಕೂಡ ಸಲ್ಲಿಸಿದ್ದೇನೆ. ಈ ಹಿಂದೆ ಕೊರೆಸಿದ ಕೊಳವೆ ಬಾವಿ ಕೆಟ್ಟು ನಿಂತಿದೆ. ಹೀಗಾಗಿ ನೀರಿನ ಸಮಸ್ಯೆ ಉದ್ಭವಿಸಿದೆ. ಹೀಗಾಗಿ ನಾವೇ ಹಣ ಕೊಟ್ಟು ನೀರು ಖರೀದಿಸುತ್ತಿದ್ದೇವೆ. ಬುಧವಾರ ಗ್ರಾಮಸ್ಥರೇ ವಿದ್ಯಾರ್ಥಿಗಳನ್ನು ಕರೆದೊಯ್ದು ಪ್ರತಿಭಟನೆ ನಡೆಸಿದರು. ತದನಂತರ ಪಿಡಿಒ ಅವರು ಶಾಲೆಗೆ 10 ಕ್ಯಾನ್‌ ನೀರು ಕಳಿಸಿದ್ದಾರೆʼ ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...