ಕನಕಪುರ | ಸರಕಾರಿ ಶಾಲೆ ಮುಚ್ಚಲು ಅಧಿಕಾರಿಗಳಿಂದಲೇ ಹುನ್ನಾರ: ಪೋಷಕರಿಂದ ಬಿಇಓ ಕಚೇರಿಗೆ ಮುತ್ತಿಗೆ

Date:

ಸರಕಾರಿ ಶಾಲೆ ಮುಚ್ಚಲು ಅಧಿಕಾರಿಗಳಿಂದಲೇ ಹನ್ನಾರ ನಡೆಯುತ್ತಿದೆ. ಕನಕಪುರ ತಾಲೂಕಿನ ಟಿ.ಬೇಕುಪ್ಪೆ ಗ್ರಾಮದ ಕಿರಿಯ ಸರಕಾರಿ ಶಾಲೆಯನ್ನು ಉದ್ದೇಶಪೂರ್ವಕವಾಗಿ ಅಧಿಕಾರಿಗಳು ಮುಚ್ಚುವ ಮೂಲಕ ಮಕ್ಕಳ ಭವಿಷ್ಯದ ಬಗ್ಗೆ ಆಟವಾಡುತ್ತಿದ್ದಾರೆ ಎಂದು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದರು.

IMG 20241231 WA0008 1

ಕನಕಪುರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಟಿ.ಬೇಕುಪ್ಪೆ ಗ್ರಾಮಸ್ಥರೊಡನೆ ಕಚೇರಿಗೆ ಮುತ್ತಿಗೆ ಹಾಕಿದ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಟಿ.ಬೇಕುಪ್ಪೆ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೆ ತರಗತಿಯಲ್ಲಿ ಪುಣ್ಯಶ್ರೀ, ಎರಡನೆ ತರಗತಿಯಲ್ಲಿ ಸೌಮ್ಯ, ಒಂದನೇ ತರಗತಿ ಯಲ್ಲಿ ಪ್ರಶಾಂತ್ ಎಂಬ ವಿದ್ಯಾರ್ಥಿ ಓದುತ್ತಿದ್ದಾರೆ, ಆದರೆ ಕ್ಲಸ್ಟರ್‌ನ ಸಂಪನ್ಮೂಲ ಅಧಿಕಾರಿ ಶ್ರೀನಿವಾಸ್ ಪಟ್ಟಭದ್ರ ಹಿತಾಸಕ್ತಿಗಳೊಡನೆ ಶಾಮೀಲಾಗಿ ಶಾಲೆ ಮುಚ್ಚುವ ದುರುದ್ದೇಶದಿಂದ ಶೂನ್ಯ ದಾಖಲಾತಿ ಹೊಂದಿದ ಕಾರಣ ಶಾಲೆಯನ್ನು ಮುಚ್ಚಬೇಕೆಂದು ಇಲಾಖೆಗೆ ವರದಿ ನೀಡಿದ್ದು, ಇತರ ಶಾಲೆಗಳು ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದರೆ, ಇಲ್ಲಿನ ಶಿಕ್ಷಕಿ ನಿರ್ಮಲಾ, ಪರೀಕ್ಷಾ ಕಾಲದಲ್ಲಿ ಡಿಸೆಂಬರ್ 6 ರಿಂದ ಶಾಲೆ ಮುಚ್ಚಿ ಪೋಷಕರಿಗೆ ಬಲವಂತವಾಗಿ ವರ್ಗಾವಣೆ ಪ್ರಮಾಣಪತ್ರ ಪಡೆಯಲು ಒತ್ತಡ ಹೇರುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದ ಶಾಲೆಗಳ ಮುಚ್ಚುವ ದುರುದ್ದೇಶದಿಂದ ಇಲಾಖೆ ಕಾರ್ಯ ನಿರ್ವಹಿಸುತ್ತಿದೆ. ಸಮುದಾಯ ಶಾಲೆ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ. ಶಾಲೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ, ಶಿಕ್ಷಣದ ಗುಣಮಟ್ಟ ಹೆಚ್ಚಿಸಿ, ಹೆಚ್ಚುವರಿ ಶಿಕ್ಷಕರನ್ನು ನೇಮಕಾತಿ ಮಾಡುವ ಯಾವುದೇ ಕಾರ್ಯ ಯೋಜನೆಗಳು ನಡೆಯುತ್ತಿಲ್ಲ. ಸರ್ಕಾರಿ ಶಾಲೆಗೆ ದಾಖಲಾತಿ ಹೆಚ್ಚಿಸುವ ಅಭಿಯಾನಗಳನ್ನು ಇಲಾಖೆ ಮಾಡುವ ಮೂಲಕ ಶಾಲಾ ದಾಖಲಾತಿ ಗಳನ್ನು ಹೆಚ್ಚಿಸುವ ಯಾವ ಇಚ್ಚಾಶಕ್ತಿಯು ಇಲಾಖೆಯಲ್ಲಿ ಕಾಣುತ್ತಿಲ್ಲ. ಮಾನ್ಯ ಉಪ ಮುಖ್ಯಮಂತ್ರಿಗಳ ತವರಲ್ಲೇ ಈ ರೀತಿಯ ಘಟನೆ ಅಕ್ಷಮ್ಯ ಎಂದರು.

ಇದನ್ನು ನೋಡಿದ್ದೀರಾ? ಗದಗ | ಮನೆ ಹಂಚಿಕೆಯಲ್ಲಿ ತಾರತಮ್ಯ ಆರೋಪ

ರಾಜ್ಯ ರೈತ ಸಂಘದ ಸಂಚಾಲಕ ಚೀಲೂರು ಮುನಿರಾಜು ಮಾತನಾಡಿ, ವಿಧ್ಯಾರ್ಥಿಗಳ ಭವಿಷ್ಯದ ಜೊತೆ ಇಲಾಖೆ ಆಟವಾಡುತ್ತಾ ಮಕ್ಕಳ ಶಿಕ್ಷಣದ ಹಕ್ಕಿನ ಧಮನ ಮಾಡುತ್ತಿದೆ. ಬಡವರು, ರೈತರು ಮಕ್ಕಳು ಮಾತ್ರ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುವ ಶಿಕ್ಷಕರು ತಮ್ಮ ಮಕ್ಕಳನ್ನು ಖಾಸಾಗಿ ಶಾಲೆಯಲ್ಲಿ ಕಲಿಸುತ್ತಾ ಇಲಾಖೆಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ಕಿಡಿಕಾರಿದರು.

ಕೆಆರ್‌ಎಸ್ ಪಕ್ಷದ ಮುಖಂಡ ಪ್ರಶಾಂತ್ ಹೊಸದುರ್ಗ ಮಾತನಾಡಿ, ಸರ್ಕಾರಿ ಶಾಲೆಗಳು ಗ್ರಾಮೀಣ ಜನರ ಜೀವಾಳ, ಅಸ್ತಿತ್ವವಾಗಿವೆ. ತಮ್ಮ ಊರಿಗೆ ಶಾಲೆಯ ಕನಸನ್ನು ನನಸಾಗಿಸಲು ಅದೆಷ್ಟೋ ಜೀವಗಳು ಶ್ರಮಿಸಿವೆ. ಏಕಾಏಕಿ ಮಕ್ಕಳ ಸಂಖ್ಯೆ, ಶಾಲೆ ವೀಲಿನದ ಹೆಸರಲ್ಲಿ ಶಾಲೆ ಮುಚ್ಚಿದರೆ ಅವರ ಹೋರಾಟಕ್ಕೆ ಮಸಿ ಬಳಿದಂತೆ. ಪ್ರತಿ ಸರ್ಕಾರಿ ಶಾಲೆಯ ಅಭಿವೃದ್ಧಿಗಾಗಿ ಗ್ರಾಮಸ್ಥರು ಕೈಜೋಡಿಸಿ ಸರ್ಕಾರಿ ಶಾಲೆ ಉಳಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಇದನ್ನು ಓದಿದ್ದೀರಾ? ಕನಕಪುರ | ಜಗದ ಅಂತ್ಯದವರೆಗೂ ಕುವೆಂಪು ಚಿರಸ್ಥಾಯಿಯಾಗಿ ಇರುತ್ತಾರೆ : ಚಿಕ್ಕಮರೀಗೌಡ

ದೂರು ಸ್ವೀಕರಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾತನಾಡಿ ನಾಳೆಯಿಂದಲೇ ಶಿಕ್ಷಕರನ್ನು ನಿಯೋಜಿಸಿ ಶಾಲೆ ತೆರೆದು, ಸುಳ್ಳು ಮಾಹಿತಿ ನೀಡಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ವರದಿ ನೀಡುತ್ತೇನೆ ಎಂದರು.

ಟಿ. ಬೇಕುಪ್ಪೆ ಗ್ರಾಮದ ದಿವ್ಯ, ಸುಮಿತ್ರ, ಲಕ್ಷ್ಮೀ, ಮರಿದೇವರು, ರತ್ನಮ್ಮ, ರಾಜಣ್ಣ, ಉಮೇಶ,ರೈತ ಸಂಘದ ಪುಟ್ಟಮಾದೇಗೌಡ, ವೆಂಕಟೇಶ್, ರವಿ, ಮುಂತಾದವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...