ಹಾವೇರಿ | ಪ್ರಾಣಿ-ಪಕ್ಷಿಗಳಿಂದ ಬೆಳೆ ರಕ್ಷಿಸಲು ಮೈಕ್‌ ಮೊರೆಹೋದ ರೈತರು

Date:

  • ಮೈಕ್‌‌ನಲ್ಲಿ ತಮ್ಮ ಧ್ವನಿ ರೆಕಾರ್ಡ್‌ ಮಾಡಿ ಹೊಲದ ಸುತ್ತಲೂ ಅಳವಡಿಸಿದ್ದಾರೆ
  • ʼಕೂಗುವ ಶಬ್ದ ಹೊರ ಬರುವುದರಿದ ಪ್ರಾಣಿ-ಪಕ್ಷಿಗಳು ಹೊಲದ ಕಡೆ ಸುಳಿಯುತ್ತಿಲ್ಲʼ

ರೈತರು ತಾವು ಬೆಳೆದ ಬೆಳೆಗಳನ್ನು ಪ್ರಾಣಿ–ಪಕ್ಷಿಗಳಿಂದ ರಕ್ಷಿಸಿ ಕೊಳ್ಳಲು ಹೊಲದ ಸುತ್ತಲೂ ಹಾಕಲಾಗುತ್ತಿದ್ದ ಮುಳ್ಳಿನ ಬೇಲಿ, ಸೀರೆಯ ಬೇಲಿ ಕಟ್ಟುವುದು, ಬೆದರು ಗೊಂಬೆ ನಿಲ್ಲಿಸುವುದು, ಗಂಟೆಗಳಿಗೆ ಪ್ರಾಣಿ-ಪಕ್ಷಗಳು ‘ಡೋಂಟ್‌ ಕೇರ್’ ಎನ್ನುತ್ತಿವೆ. ಹೀಗಾಗಿ, ಅವುಗಳನ್ನು ನಿಯಂತ್ರಿಸಲು ರೈತರು ತಂತ್ರಜ್ಞಾನದ ಮೊರೆ ಹೋಗಿದ್ದಾರೆ.

ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹಳೇ ವೀರಾಪುರ ಗ್ರಾಮದ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ರಕ್ಷಣೆಗಾಗಿ ಮಿನಿ ರೆಕಾರ್ಡೆ‌ಬಲ್ ಮೈಕ್‌(ಧ್ವನಿ ದಾಖಲಿಸಬಹುದಾದ ಧ್ವನಿವರ್ಧಕ) ಬಳಸಲಾರಂಭಿಸಿದ್ದಾರೆ. ಗ್ರಾಮದ ರೈತ ಸಿದ್ದನಗೌಡ ಹೊಸಗೌಡ, ತಮ್ಮ ನಾಲ್ಕು ಎಕರೆ ಜಮೀನಿನಲ್ಲಿರುವ ಸೂರ್ಯಕಾಂತಿ ಬೆಳೆ ರಕ್ಷಣೆಗಾಗಿ ಈ ಮೈಕ್‌ಅನ್ನು ಅಳವಿಡಿಸಿದ್ದಾರೆ.

ಹೊಲದ ಸುತ್ತಲೂ ಸ್ಪೀಕರ್‌ಗಳನ್ನು ಅಳವಡಿಸಿದ್ದು, ಮೈಕ್‌‌ನಲ್ಲಿ ರೈತರು ತಮ್ಮ ಧ್ವನಿ ರೆಕಾರ್ಡ್‌ ಮಾಡಿ, ಹೊಲದಲ್ಲಿ ನಿರಂತರವಾಗಿ ಸದ್ದು ಕೇಳುವಂತೆ ಮಾಡಿದ್ದಾರೆ. ಹೀಗಾಗಿ ಪ್ರಾಣಿ–ಪಕ್ಷಿಗಳು ಹೊಲದ ಕಡೆ ಸುಳಿಯದಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಳೆ ಬೆಳೆದು ನಿಂತ ನಂತರ, ಕಟಾವು ಮಾಡೋವರೆಗೆ ತಿಂಗಳುಗಟ್ಟಲೆ ದಿನಪೂರ್ತಿ ಹೊಲದಲ್ಲಿ ಶಬ್ದ ಮಾಡುವುದು ಕಷ್ಟದ ಕೆಲಸ. ಹಾಗಾಗಿ ಹೊಲದ ಸುತ್ತಲೂ ಸೀರೆಯ ಬೇಲಿ ಕಟ್ಟುವುದು, ಗಾಳಿ ಬಿಸಿದಾಗಲೆಲ್ಲ ಶಬ್ದ ಮಾಡುವಂತೆ ಗಂಟೆ ಕಟ್ಟುವುದು ಇತ್ಯಾದಿ ಪ್ರಯತ್ನಗಳನ್ನು ರೈತರು ಮಾಡುತ್ತಾರೆ. ಆದರೆ, ಇದೀಗ ತಂತ್ರಜ್ಞಾನದಿಂದ ಬೆಳೆ ರಕ್ಷಣೆ ಮಾಡುವಂತೆ ಕ್ರಮವಹಿಸಿದ್ದೇನೆ” ಎಂದು ರೈತ ಸಿದ್ದನಗೌಡ ಹೊಸಗೌಡ್ರು ಹೇಳಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ| ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಗತ್ಯವಿದೆ:...

“ಬೇಸಾಯದಲ್ಲಿ ಉಂಟಾಗಿರುವ ನಷ್ಟಕ್ಕಿಂತ, ಕೈಗೆ ಬಂದ ಬೆಳೆ ಉಳಿಸಿಕೊಳ್ಳುವುದು ಸವಾಲಾಗಿತ್ತು. ಪ್ರತಿ ಸಲ ಬೆಳೆ ಬಂದಾಗ ಗಿಳಿಗಳು, ಗುಬ್ಬಿ–ಕಾಗೆಗಳ ಕಾಟದಿಂದ ಹೈರಾಣಾಗಿದ್ದೆವು. ಒಮ್ಮೆ ಪಕ್ಕದ ಮಾಸೂರಿನ ಸಂತೆಯಲ್ಲಿ ಮೈಕ್‌‌ಗಳನ್ನು ಮಾರಾಟ ಮಾಡುತ್ತಿದ್ದರು. ಅದನ್ನು ₹400 ಕೊಟ್ಟು ಖರೀದಿಸಿದೆ. ಕೂಗುವ ಧ್ವನಿಯನ್ನು ಮೈಕ್‌‌ನಲ್ಲಿ ರೆಕಾರ್ಡ್ ಮಾಡಿದ್ದೇವೆ. ನಮ್ಮ ಹೊಲದ ಸುತ್ತ ನಾಲ್ಕು ಮೈಕ್‌‌ಗಳನ್ನು ಗಿಡಕ್ಕೆ ಕಟ್ಟಿದ್ದೇನೆ. ಕೂಗುವ ಶಬ್ದ ಹೊರ ಬರುವುದರಿದ ಯಾವುದೇ ಪ್ರಾಣಿ ಪಕ್ಷಿಗಳು ನಮ್ಮ ಹೊಲದ ಕಡೆ ಸುಳಿಯುತ್ತಿಲ್ಲ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ರೈತರು ಬೆಳೆದಿರುವ ತೊಗರಿ, ಜೋಳ, ಮೆಕ್ಕೆಜೋಳ, ಸೂರ್ಯ ಕಾಂತಿ ಹೀಗೆ ಹಲವು ಬೆಳೆಗಳನ್ನು ಪ್ರಾಣಿ-ಪಕ್ಷಿಗಳಿಂದ ರಕ್ಷಿಸಲು ಹಳೆಯ ವೀರಾಪುರ ಗ್ರಾಮದ ರೈತರು ಹೊಲದ ಸುತ್ತಲೂ ಮೈಕ್ ಅಳವಡಿಸಿದ್ದಾರೆ ಎಂದು ಕಂಡುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...