ಹೂವಿನ ಹಡಗಲಿ | ದಲ್ಲಾಳಿಗಳ ಹಾವಳಿ ತಪ್ಪಿಸಿ, ಬೆಳೆಗಳನ್ನು ಎಪಿಎಂಸಿ ಮೂಲಕ ಖರೀದಿಸಲು ವ್ಯವಸ್ಥೆ ಮಾಡಿ: ರೈತರ ಪಟ್ಟು

Date:

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಎಲ್ಲ ರೈತರ ಫಸಲು ಬೆಳೆಗಳನ್ನು ಎಪಿಎಂಸಿ ಮೂಲಕವೇ ಖರೀದಿಸಲು ವ್ಯವಸ್ಥೆ ಮಾಡಬೇಕು. ಆ ಮೂಲಕ ದಲ್ಲಾಳಿಗಳ ಹಾವಳಿ ತಪ್ಪಿಸಬೇಕು ಎಂದು ಎಪಿಎಂಸಿ ಮಾರುಕಟ್ಟೆ ಮುಖ್ಯಾಧಿಕಾರಿ ತಿಮ್ಮಪ್ಪ ನಾಯಕ ಅವರಿಗೆ ರೈತರು ಮನವಿ ಸಲ್ಲಿಸಿದರು.

ರೈತರ ಫಸಲನ್ನು ವ್ಯಾಪಾರಸ್ಥರು ದಲ್ಲಾಳಿಗಳ ಬಳಿ ಹೋಗಿ ವ್ಯಾಪಾರ ಮಾಡುತ್ತಿದ್ದು, ಇದರಲ್ಲಿ ತುಂಬಾ ಮೋಸ ಮತ್ತು ಅನ್ಯಾಯ ಆಗುತ್ತಿದೆ. ದಲ್ಲಾಳಿಗಳ ಹಾವಳಿಯನ್ನು ತಡೆಯಲು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿ ಕ್ವಿಂಟಾಲ್‌ಗೆ 5 ಕೆ.ಜಿ ಫಸಲು ಕಟ್ ಮಾಡುತ್ತಿದ್ದು, ದಲ್ಲಾಳಿ ಶೇ.2ನ್ನು ಪಡೆಯುತ್ತಿದ್ದಾರೆ. ಇದರಿಂದ ರೈತರಿಗೆ ತುಂಬಾ ನಷ್ಟವಾಗುತ್ತದೆ. ಕೃಷಿ ಉತ್ಪನ್ನ ಮಾರುಕಟ್ಟೆಯ ಅಧ್ಯಕ್ಷರು ಸದಸ್ಯರು ಮತ್ತು ಕಾರ್ಯದರ್ಶಿಗಳ ಸಭೆ ಕರೆದು ರೈತರ ಮತ್ತು ವ್ಯಾಪಾರಸ್ಥರ ನಡುವೆ ದಲ್ಲಾಳಿಗಳ ಹಾವಳಿಯನ್ನು ತಪ್ಪಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರು ಬೆಳೆದ ಪಸಲನ್ನು ಎಪಿಎಂಸಿಗೆ ತಂದು ಯಾವುದೇ ಕಟಾವು ಮತ್ತು ಕಮಿಷನ್ ಇಲ್ಲದೆ ಮಾರಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು. ವ್ಯಾಪಾರಸ್ಥರು ಹಳ್ಳಿಯಲ್ಲಿ ವ್ಯವಹಾರ ಮಾಡಿದರೆ ಯಾವುದೇ ಕಟಾವು ಕಮಿಷನ್ ಇಲ್ಲದೆ ವ್ಯವಹಾರಕ್ಕೆ ಮುಂದಾಗಬೇಕು. ತೂಕದಲ್ಲಿ ವ್ಯಾಪಾರಸ್ಥರಿಂದ ವ್ಯತ್ಯಾಸ ಕಂಡು ಬಂದರೆ ಅಂಥವರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು ಹಾಗೂ ಲೆಸೆನ್ಸ್ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಬೇರೆ ಬೇರೆ ತಾಲೂಕು ಮತ್ತು ಜಿಲ್ಲೆಗಳಿಂದ ವ್ಯಾಪಾರಸ್ಥರು ಹೂವಿನ ಹಡಗಲಿ ಎಪಿಎಂಸಿಗೆ ಬಂದು ವ್ಯಾಪಾರ ಮಾಡಲು ಅನುಕೂಲವಾಗುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದರು.

ಇದನ್ನು ಓದಿದ್ದೀರಾ? ಬಾಗಲಕೋಟೆ | ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ: ಮೂವರು ಬಲಿ

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ಸಿದ್ದಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಶಿವರಾಜ್ ಹೊಳಗುಂದಿ, ಜಿಲ್ಲಾಧ್ಯಕ್ಷರಾದ ಸೋಮಶೇಖರಪ್ಪ ನಂದಿಹಳ್ಳಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಚನ್ನವೀರಮ್ಮ, ತಾಲೂಕು ಉಪಾಧ್ಯಕ್ಷರಾದ ಶಂಕರ್ ಗೌಡ್ರು, ಮೈಲಾರ ತಾಲೂಕು ಸಂಚಾಲಕ ದುರ್ಗಪ್ಪ, ರೈತ ಮುಖಂಡರಾದ ಶಿವ ನಾಗಪ್ಪ, ಗಿರೀಶ್ ಕೆಕೆ, ತಾಂಡ ಮಂಜು ನಾಯಕ್ ದಾಸರಳ್ಳಿ, ತಾಂಡ ಶರಣಪ್ಪ ಅಲ್ಲಿಪುರ ಇನ್ನೂ ಹಲವರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...