ಚಿತ್ರದುರ್ಗ | ಸಂಚಾರ ನಿಯಮಗಳ ಕುರಿತು ಪೊಲೀಸರಿಂದ ಅರಿವು ಕಾರ್ಯಕ್ರಮ

Date:

ಸಂಚಾರ ನಿಯಮಗಳ ಪಾಲನೆ ಎಲ್ಲರ ಕರ್ತವ್ಯ, ವಾಹನ ಮಾಲೀಕರು, ಚಾಲಕರು, ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು. ರಸ್ತೆಯಲ್ಲಿ ಸುರಕ್ಷತಾ ನಿಯಮಗಳನ್ನು ಅನುಸರಿಸಬೇಕು. ಆಗ ಮಾತ್ರ ಎಲ್ಲರ ಸುರಕ್ಷತೆ ಸಾಧ್ಯ ಎಂದು ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಪೊಲೀಸ್ ಠಾಣೆಯ ಉಪನಿರೀಕ್ಷಕಿ ದೀಪು ಎಂ ಟಿ ಹೇಳಿದ್ದಾರೆ.

ಚಿಕ್ಕಜಾಜೂರಿನಲ್ಲಿ ನಡೆದ ಸಂಚಾರ ನಿಯಮಗಳ ಕುರಿತು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಸಾರ್ವಜನಿಕರು ಎಲ್ಲೆಂದರಲ್ಲಿ ವಾಹನ ನಿಲ್ಲಿಸುವುದು, ರಸ್ತೆ ನಿಯಮಗಳ ಪಾಲನೆ ಮಾಡದಿರುವುದು ವಾಹನದಟ್ಟಣೆ ಮತ್ತು ಅಪಘಾತ ಇನ್ನಿತರ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದನ್ನು ಅರಿತು ವಾಹನ ಮಾಲೀಕರು, ಚಾಲಕರು ನಿಗದಿತ ಸ್ಥಳಗಳಲ್ಲಿ ವಾಹನವನ್ನು ನಿಲುಗಡೆ ಮಾಡಬೇಕು” ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಇದೇ ಸಮಯದಲ್ಲಿ ವ್ಯಾಪಾರಿ ಮಳಿಗೆ ಮಾಲೀಕರು, ಆಟೋ ನಿಲ್ದಾಣ ಮತ್ತು ಬಸ್ ನಿಲುಗಡೆ ಕೆಲವು ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರ ಸೂಚಿಸಿದರು. ಚಿಕ್ಕಜಾಜೂರು ಠಾಣಾ ವ್ಯಾಪ್ತಿಯಲ್ಲಿ ನೊಂದಣಿಯಾದ ಆಟೋಗಳಿಗೆ ರಿಜಿಸ್ಟರ್ ನಂಬರ್‌ನ ಫಲಕಗಳನ್ನು ವಿತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಉಪನಿರೀಕ್ಷಕರಾದ ಸಚಿನ್ ಪಟೇಲ್, ಠಾಣೆಯ ಪೊಲೀಸ್ ಸಿಬ್ಬಂದಿ ಮಲ್ಲೇಶ್, ರುದ್ರೇಶ್, ಗಿರೀಶ್ ಸೇರಿದಂತೆ ಆಟೋ ಚಾಲಕರಾದ ವಿಜಯ್ ಅಪ್ಪಿ, ಉಮೇಶ್ ಹಾಗೂ ಸ್ಥಳೀಯ ನಿವಾಸಿ ಸೋಮು ಬಾಬು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...