ರಾಮನಗರ | ಅಕ್ರಮ ಮದ್ಯ ಮಾರಾಟದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

Date:

“ಹೊಸದುರ್ಗವು ಪುರಾತನ ಹಿನ್ನೆಲೆಯನ್ನು ಹೊಂದಿದ್ದು, ಈ ಪಾವಿತ್ರ್ಯತೆಗೆ ಅಕ್ರಮ ಮದ್ಯ ಮಾರಾಟವು ಕಪ್ಪು ಚುಕ್ಕೆಯಾಗಿದೆ. ಅದನ್ನು ತೊಡೆದು ಹಾಕುವ ದೃಷ್ಟಿಯಿಂದ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ” ಎಂದು ಜೀವನ ಟ್ರಸ್ಟ್‌ನ ಅಧ್ಯಕ್ಷ ಪ್ರಶಾಂತ್ ಹೊಸದುರ್ಗ ತಿಳಿಸಿದರು.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹೊಸದುರ್ಗ ಗ್ರಾಮದಲ್ಲಿ ಜೀವನ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ) ವತಿಯಿಂದ 8ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀರಾಮಚಂದ್ರ ಗುಡಿಯ ಆವರಣದಲ್ಲಿ “ಅಕ್ರಮ ಮದ್ಯ ಮಾರಾಟದಿಂದ ಗ್ರಾಮೀಣ ಪ್ರದೇಶದ ಜನರ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮತ್ತು ಜಾಗೃತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಧಮ್ಮ ದೀವಿಗೆ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿ, “ಐದು ಸಾವಿರ ವರ್ಷಗಳ ಹಿಂದೆಯೇ ಭಗವಾನ್ ಬುದ್ದರು ಮದ್ಯ ಮಾದಕಗಳ ಸೇವನೆಯನ್ನು ಮಾಡದ ಶುದ್ಧ ಜೀವನ ನಡೆಸುವ ಶಪಥವನ್ನು ನನಗೆ ನಾನೇ ಹಾಕಿಕೊಳ್ಳುತ್ತೇನೆ ಎಂಬ ತತ್ವವನ್ನು ಸಾರಿ ಜೀವನದ ಮೌಲ್ಯವನ್ನು ಸಾರಿದ್ದರು. ಇಂದು ಅದನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
photo 6167830267398570701 y

ಅಧ್ಯಕ್ಷ್ಯತೆ ವಹಿಸಿ ಮಾತನಾಡಿದ ಪಂಚಾಯತಿ ಅಧ್ಯಕ್ಷರಾದ ರಮೇಶ್, “ಗ್ರಾಮೀಣ ಜನರ ಆರೋಗ್ಯ ನೈರ್ಮಲ್ಯದ ಜೊತೆಗೆ ಜನ ಬದುಕಿಗೆ ಉತ್ತಮ ವಾತಾವರಣ ಕಲ್ಪಿಸುವುದು ಗ್ರಾಮ ಪಂಚಾಯತಿಯ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಹೊಸದುರ್ಗ ಗ್ರಾಮ ಪಂಚಾಯತಿಯ ಸರ್ವ ಸದಸ್ಯರ ನಿರ್ಣಯ ಕೈಗೊಂಡಿದ್ದು, ಮುಂದೆ ಯಾರಾದರೂ ಅಕ್ರಮ ಮದ್ಯ ಮಾರಾಟ ಕಂಡುಬಂದರೆ ಮಾರಾಟಗಾರರು, ಹಾಗೂ ಪೂರೈಕೆದಾರರ ಎದುರು ದಂಡ ಇಲ್ಲವೇ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ. ಇಡೀ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಇನ್ನು ಮುಂದೆ ಅಕ್ರಮ ಮದ್ಯ ಮಾರಾಟ ನಿಷೇಧಿಸಿದ್ದೇವೆ. ಈ ನಿರ್ಣಯ ಕೈಗೊಂಡ ತಾಲೂಕಿನ ಮೊದಲ ಪಂಚಾಯತಿ ನಮ್ಮದಾಗಿದೆ” ಎಂದರು.

ಅಬಕಾರಿ ಅಧೀಕ್ಷಕರಾದ ಪ್ರದೀಪ್ ಮಾತನಾಡಿ, “ಅಕ್ರಮ ಮದ್ಯ ಮಾರಾಟದ ಮಾಹಿತಿ ನೀಡಿದರೆ ನಾವು ಕ್ರಮ ಕೈಗೊಳ್ಳಲು ಸಿದ್ದ” ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕವಿಯತ್ರಿ , ಲೇಖಕಿ ರೂಪ ಹೊಸದುರ್ಗ ರವರಿಗೆ “ಜೀವನ ಸಾಹಿತ್ಯ ರತ್ನ ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ರಘು, ನಾರಾಯಣ, ಗ್ರಾಮ ಪಂಚಾಯತಿ ಸದಸ್ಯರಾದ ರಾಮಚಂದ್ರ, ನಾಗರಾಜ್ , ಗ್ರಾಮದ ಮುಖಂಡರಾದ ಮಲ್ಲೇಶ್, ಪುಟ್ಟೇಗೌಡ, ಗೋವಿಂದಯ್ಯ, ರವಿಕುಮಾರ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

photo 6167830267398570704 y
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...