ಶಿವಮೊಗ್ಗ | ಯಡಿಯೂರಪ್ಪನವರ ಕಣ್ಣೀರಧಾರೆಗೆ ಮಕ್ಕಳೇ ಕಾರಣ : ಆಯನೂರ್  ಮಂಜುನಾಥ್

Date:

ಶಿವಮೊಗ್ಗ ಜಿಲ್ಲೆಯ ಸಂಸದ  ಬಿ.ವೈ ರಾಘವೇಂದ್ರ ರಾಜಕೀಯ ಪ್ರವರ್ಧಮಾನಕ್ಕೆ ಬಂದ ಮೇಲೆ ಲಯೇ ಬಿಜೆಪಿ ಭ್ರಷ್ಟಾಚಾರ ಜನತಾ ಪಾರ್ಟಿಯಾಗಿದೆ. ಎರಡು ಬಾರಿ ಮುಖ್ಯಮಂತಿಯಾದ ಯಡಿಯೂರಪ್ಪ ಭ್ರಷ್ಟಾಚಾರಗಳ ಕಾರಣದಿಂದಲೇ ಐದು ವರ್ಷಗಳ ಅವಧಿ ಪೂರೈಸದೆ ರಾಜೀನಾಮೆ ನೀಡಬೇಕಾಯಿತು. ಅವರು ಕಣ್ಣೀರಧಾರೆಗೆ ಅವರ ಮಕ್ಕಳೇ ಕಾರಣ ಎಂದು ಕೆಪಿಸಿಸಿ ವಕ್ತಾರ, ಮಾಜಿ ಸಂಸದ ಆಯನೂರು ಮಂಜುನಾಥ್  ಹೇಳಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿನ ಭ್ರಷ್ಟಾಚಾರ ತಾಂಡವವಾಡುತ್ತಿರುವುದು ಯಾರಿಂದ ಎನ್ನುವ ಬಗ್ಗೆ ಬಹಿರಂಗ ಚರ್ಚೆ ಬನ್ನಿ ಎಂದು ಪಂಥಾಹ್ವಾನ ನೀಡಿದರಲ್ಲದೆ, ಬಿಜೆಪಿ ರಾಘವೇಂದ್ರ, ವಿಜಯೇಂದ್ರ ಬಂದ ನಂತರ ಭ್ರಷ್ಟಾಚಾರ ಜನತ ಪಕ್ಷವಾಗಿದೆ ಎಂದು ದೂರಿದರು.

ಬಿ.ವೈ. ರಾಘವೇಂದ್ರ ಅವರೇ ನೀವು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾವಿರಾರು ಕೋಟಿ ರೂ.ಗಳ ಬೇನಾಮಿ ಆಸ್ತಿಗಳನ್ನು ಟ್ರಸ್ಟ್‌ಗಳ ಹೆಸರಿನಲ್ಲಿ ರಿಜಿಸ್ಟ್ರಾರ್ ಮಾಡಿಕೊಂಡಿದ್ದೀರಾ. ಹಣದ ಮೂಲವನ್ನು ತಾವು ಪ್ರಕಟ ಮಾಡಬಹುದಾ? ಭ್ರಷ್ಟಾಚಾರದ ಆರೋಪದ ಮೇಲೆ ಒಬ್ಬ ಹೋರಾಟಗಾರನ ಅಂತ್ಯ ಆಗಿದೆ. ನಮ್ಮ ಜಿಲ್ಲೆಯ ರಾಜಕಾರಣಕ್ಕೆ ಕಪ್ಪುಚುಕ್ಕೆ ತರುವಂತೆ ಯಡಿಯೂರಪ್ಪ ಅವರನ್ನು ಬಲಿತೆಗೆದುಕೊಂಡಿದ್ದು ಬಿಜೆಪಿಯ ಭ್ರಷ್ಟಾಚಾರವೇ ಹೊರತು, ಬೇರಾವ ಜನಾಂದೋಲನಗಳಲ್ಲ. ತಮ್ಮ ಮತ್ತು ಕುಟುಂಬದ ಭ್ರ್ರಷ್ಟಾಚಾರದ ಕಾರಣದಿಂದ ಹೈಕಮಾಂಡ್ ಅನಿವಾರ್ಯವಾಗಿ ಅಧಿಕಾರದಿಂದ ಕೆಳಗಿಳಿಸಬೇಕಾದ ಪರಿಸ್ಥಿತಿ ನಿರ್ಮಾಣ ಮಾಡಿದವರ ಬಾಯಲ್ಲಿ ಭ್ರಷ್ಟಾಚಾರದ ವಿರುದ್ದ ಮಾತು ಬಂದಿರುವುದನ್ನು ಸ್ವಾಗತಿಸುತ್ತೇನೆ ಎಂದು ಲೇವಡಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾಸಭಾ ಸಭೆ ಗೊಂದಲ:
ಜಾತಿಗಣತಿ ಕುರಿತಂತೆ ಆಖಿಲ ಭಾರತ ವೀರಶೈವ -ಲಿಂಗಾಯಿತ ಮಹಾಸಭಾ ಕರೆದಿರುವ ಸಭೆ ಗೊಂದಲದಿಂದ ಕೂಡಿದೆ ಎಂದು ಆಯನೂರು ಮಂಜು ನಾಥ್ ಪ್ರತಿಕ್ರಿಯಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರು ಮಹಾಸಭಾದ ಅಧ್ಯಕ್ಷರಾಗಿ ಮತ್ತು ಕಾಂಗ್ರೆಸ್ ನ ಮುಖಂಡರಾಗಿಯೂ ಇದ್ದಾರೆ. ಅವರು ಒಂದು ಸ್ಪಷ್ಟ ನಿಲುವು ಹೊಂದಬೇಕು. ಜಾತಿಗಣತಿ ಆಗ ಬೇಕೆಂಬುದು ಕಾಂಗ್ರೆಸ್ ಪಕ್ಷದ ನಿಲುವಾಗಿದೆ. ಇದಕ್ಕೆ ಎಲ್ಲರೂ ಬದ್ದರಾಗಿರಬೇಕು. ಜಾತಿಗಣತಿ ಬಗ್ಗೆ ವೀರಶೈವ- ಲಿಂಗಾಯತ ಮಹಾಸಭೆ ಕರೆದಿರುವ ಸಭೆಯ ಹಿಂದೆ ಬಿಜೆಪಿಯ ಕೈವಾಡವಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಗೊಂದಲ ಸೃಷ್ಟಿ ಮಾಡುವ ಪ್ರಯತ್ನ ಇದಾಗಿದೆ ಎಂದರು.

ವೀರಶೈವ-ಲಿಂಗಾಯಿತ ಮಹಾಸಭಾ ನಾವು ಹಿಂದೂಗಳಲ್ಲ. ನಮ್ಮದು ಲಿಂಗಾಯಿತ ಧರ್ಮ ಎಂದು ಈಗಾಗಲೆ ನಿರ್ಧಾರ ತೆಗೆದುಕೊಂಡಿದೆ. ನಾಳೆ ನಡೆಯಲಿರುವ ವೀರಶೈವ-ಲಿಂಗಾಯಿತ ಮಹಾಸಭಾದ ಸಭೆಗೆ ಹೋಗುವ ಮುನ್ನ ಯಡಿಯೂರಪ್ಪ ಮತ್ತವರ ಮಕ್ಕಳು ಜಾತಿ ಗಣತಿ ಸಂದರ್ಭದಲ್ಲಿ ಧರ್ಮದ ಕಾಲಂ ನಲ್ಲಿ ವೀರಶೈವ ಲಿಂಗಾಯಿತ ಅಂತರೆ ಬರೆಸುತ್ತೀರೋ? ಅಥವಾ ಬಿಜೆಪಿಯ ಹಿಂದೂ ಎಂದು ಬರೆಸುತ್ತೀರೋ ಎಂಬುದನ್ನು ಸ್ಪಷ್ಟಪಡಿಸಬೇಕು. ಜಾತಿಯ ಹೆಸರಿನಲ್ಲಿ ರಾಜಕೀಯ ಲಾಭ ಪಡೆದುಕೊಳ್ಳುತ್ತಾ ಬಂದಿರುವ ಯಡಿಯೂರಪ್ಪ ಕುಟುಂಬ ಎರಡು ದೋಣಿಯ ಮೇಲೆ ಕಾಲಿಟ್ಟು ಸಾಗುತ್ತಿದೆ. ಅವರು ಇದಕ್ಕೆ ಉತ್ತರ ಕೊಡಬೇಕು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ  ಬೇಳೂರು ಗೋಪಾಲಕೃಷ್ಣ, ಶಂಕರಘಟ್ಟ ರಮೇಶ್, ಶಿ.ಜು. ಪಾಶಾ, ಜಿ. ಪದ್ಮನಾಭ್, ಸೋಮಶೇಖರ್, ಬಾಲಾಜಿ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...