ಚಿಕ್ಕಬಳ್ಳಾಪುರ | ಬಿ – ಖಾತೆ ಅಭಿಯಾನಕ್ಕೆ ಶಾಸಕ ಪ್ರದೀಪ್‌ ಈಶ್ವರ್‌ ಚಾಲನೆ; ಮೊದಲ ದಿನ 716 ಅರ್ಜಿಗಳು ಸ್ವೀಕಾರ

Date:

ಬಹುವರ್ಷಗಳ ಬೇಡಿಕೆಯಾಗಿದ್ದ ಅನಧಿಕೃತ ಆಸ್ತಿಗಳಿಗೆ ಖಾತೆ ನೀಡುವ ಕಾನೂನಾತ್ಮಕ ಬಿ-ಖಾತೆ ಅಭಿಯಾನಕ್ಕೆ ಚಿಕ್ಕಬಳ್ಳಾಪುರ ನಗರ ಶಾಸಕ ಪ್ರದೀಪ್‌ ಈಶ್ವರ್‌ ನಗರದ 7ನೇ ವಾರ್ಡಿನಲ್ಲಿ ಗುರುವಾರ ಸಾರ್ವಜನಿಕರ ಅರ್ಜಿ ಸ್ವೀಕರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಅರ್ಜಿ ಸ್ವೀಕರಿಸಿ ಬಳಿಕ ಮಾತನಾಡಿದ ಶಾಸಕರು, ಭ್ರಷ್ಟಾಚಾರ ಮತ್ತು ದಲ್ಲಾಳಿಗಳ ಹಾವಳಿಯನ್ನು ತಪ್ಪಿಸಬೇಕೆಂಬ ಸದುದ್ದೇಶದಿಂದ ನಗರದ ಪ್ರತಿ ವಾರ್ಡ್‌ಗಳಲ್ಲೂ ಕೌಂಟರ್ ತೆರೆಯಲಾಗಿದೆ. ನಾಗರಿಕರು ಯಾರಿಗೂ ಹಣ ನೀಡುವ ಅಗತ್ಯವಿಲ್ಲ. ನಾಗರಿಕರು ತಮ್ಮ ಬಳಿಯಿರುವ ಸ್ವತ್ತಿನ ದಾಖಲೆಗಳನ್ನು ಒದಗಿಸಿ ಕಾನೂನಾತ್ಮಕವಾದ ಬಿ-ಖಾತೆ ದಾಖಲೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

ನಗರ ನಿವಾಸಿಗಳ ಹತ್ತಾರು ವರ್ಷಗಳ ಬೇಡಿಕೆಯಾಗಿದ್ದ ಖಾತೆ ಕನಸಿಗೆ ರಾಜ್ಯ ಸರಕಾರ ಹಸಿರು ನಿಶಾನೆ ತೋರಿದ್ದು, ಸಾರ್ವಜನಿಕರು ಅಭಿಯಾನವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾರಾದರೂ ಬಡವರು ಕಂದಾಯ ಕಟ್ಟಲು ಸಾಧ್ಯವಾಗದಿದ್ದಲ್ಲಿ ಅಂತವರಿಗೆ ಆಯಾ ವಾರ್ಡಿನ ಸದಸ್ಯರೇ ಕಂದಾಯ ಕಟ್ಟುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಖಾತೆ ಅಭಿಯಾನಕ್ಕೆ ಮೂರು ಪಕ್ಷದವರು ಸಹಕರಿಸಿದ್ದು, ಎಲ್ಲರಿಗೂ ಅಭಿನಂದನೆಗಳು. ಅಭಿಯಾನ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ. ದಲ್ಲಾಳಿಗಳಿಗೆ ಬ್ರೇಕ್ ಹಾಕೋಣ ಎಂದರು.

ಡಿವೈನ್‌ ಸಿಟಿ ಬಡಾವಣೆ ಮುಖಂಡರ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ಮಾಡಿ ಅಲ್ಲಿನ ಅಧಿಕೃತ ಆಸ್ತಿಗಳಿಗೆ ಖಾತೆ ಮಾಡಿಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮೊದಲ ದಿನ 716 ಅರ್ಜಿಗಳು ಸ್ವೀಕಾರ :
ಬಿ-ಖಾತೆ ಅಭಿಯಾನದ ಮೊದಲ ದಿನವಾದ ಇಂದು ನಗರದ 31 ವಾರ್ಡ್‌ಗಳ ಪೈಕಿ ಒಟ್ಟು 716 ಅರ್ಜಿಗಳು ಸ್ವೀಕಾರವಾಗಿದ್ದು, ಫೆ.22ರವರೆಗೆ ಅಭಿಯಾನ ನಡೆಯಲಿದೆ. ಅವಶ್ಯಕತೆಗೆ ಅನುಗುಣವಾಗಿ ಅಭಿಯಾನವನ್ನು ಮುಂದುವರಿಸಲಾಗುವುದು ಎಂದು ನಗರಸಭೆ ಆಯುಕ್ತ ಮನ್ಸೂರ್‌ ಅಲಿ ಹೇಳಿದ್ದಾರೆ.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ರೈಲಿನಲ್ಲಿ ಗಾಂಜಾ ತಂದಿದ್ದ ಕುಟುಂಬ ಬಂಧನ; 17.5ಲಕ್ಷ ಮೌಲ್ಯದ ಗಾಂಜಾ ವಶ

ಈ ವೇಳೆ ನಗರಸಭೆ ಆಯುಕ್ತ ಮನ್ಸೂರ್‌ ಅಲಿ ಹಾಗೂ ಇತರೆ ಕಾಂಗ್ರೆಸ್‌ ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...