ಹಾವೇರಿ | ಹಸಿರು ಕ್ರಾಂತಿಯ ಮೂಲಕ ಜನಮಾನಸದಲ್ಲಿ ಅಚ್ಚಳಿಯದೇ ಉಳಿದ ನಾಯಕ ಬಾಬೂಜೀ: ಡಿ ಎಸ್ ಮಾಳಗಿ

Date:

  • ಲಿಡ್ಕರ್ ಉಪಾಧ್ಯಕ್ಷ ಡಿ ಎಸ್ ಮಾಳಗಿ ಅವರಿಂದ ಉದ್ಘಾಟನೆ
  • ಡಾ. ಬಾಬು ಜಗಜೀವನ ರಾಮ್ 116ನೇ ಜಯಂತಿ ಆಚರಣೆ

ಹಸಿರು ಕ್ರಾಂತಿಯ ಮೂಲಕ ದೇಶದ ಜನಮಾನಸದಲ್ಲಿ ಅಚ್ಚಳಿಯದೇ ಸಾಧನೆಗೈದು ಉಳಿದ ನಾಯಕ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಅವರ ಸ್ಮರಣೆ ಅನನ್ಯವಾಗಿದೆ ಎಂದು ಲಿಡ್ಕರ್ ಉಪಾಧ್ಯಕ್ಷ ಡಿ ಎಸ್ ಮಾಳಗಿ ಹೇಳಿದರು.

ನಗರದ ಅಶೋಕ ಹೊಟೆಲ್‌ನಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ವತಿಯಿಂದ ಡಾ. ಬಾಬು ಜಗಜೀವನ ರಾಮ್ ಅವರ 116ನೇ ಜಯಂತಿ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಿ ಎಸ್‌ ಮಾಳಗಿ, “ಡಾ.ಬಾಬು ಜಗಜೀವನ ರಾಮ್ ಅವರು ದೇಶಕ್ಕಾಗಿ ಹಗಲಿರುಳು ಶ್ರಮವಹಿಸಿ ಎಲ್ಲ ಜನಾಂಗದ ಜನರ ಆಶಾಕಿರಣವಾಗಿ ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ. ಸರಳ ಸಜ್ಜನಿಕೆಗೆ ಹೆಸರುವಾಸಿಯಾಗಿ ದೇಶದ ಜನತೆಗೆ ಹಸಿರು ಕ್ರಾಂತಿ ಮಾಡುವ ಮೂಲಕ ಎಲ್ಲರ ಜನಮಾನಸದಲ್ಲಿ ಉಳಿಸಿದ್ದಾರೆ” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಮಾತನಾಡಿ, ಡಾ. ಬಾಬು ಜಗಜೀವನ ರಾಮ್ ಅವರು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ. ನಮ್ಮ ಸಮಾಜ ಹಾಗೂ ಎಲ್ಲ ಸಮಾಜದವರ ಶ್ರಯೋಭಿವೃದ್ಧಿಗಾಗಿ ನಿರಂತರ ಸೇವೆ ಮಾಡಿದ್ದು, ಅವರ ಜೀವನ ಆದರ್ಶ ಪಾಲನೆ ಮಾಡೋಣ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? : ಮಂಡ್ಯ | ರೌಡಿಶೀಟರ್ ಅಶೋಕ್ ಪೈ ಗಡಿಪಾರು; ಆದೇಶಕ್ಕೆ ಹೈಕೋರ್ಟ್ ತಡೆ

“ತಮ್ಮ ಅನುಭವದಿಂದ ದೇಶದ ಮಹೋನ್ನತ ಗೌರವ ಸ್ಥಾನಮಾನ ಪಡೆದಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ. ಅವರ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಣೆಗೆ ಆಗಮಿಸಿದ ಎಲ್ಲರಿಗೂ ಧನ್ಯವಾದಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಅಧ್ಯಕ್ಷ ಪರಮೇಶಪ್ಪ ಮೇಗಳಮನಿ, ಅಲೆಮಾರಿ ಜನಾಂಗದ ಅಧ್ಯಕ್ಷ ಶೆಟ್ಟಿ ವಿಭೂತಿ ಮುಖಂಡ ಮಂಜಪ್ಪ ಮರೊಳ, ಮಾರುತಿ ಸೊಟ್ಟಪ್ಪ, ಮಹಾದೇವಪ್ಪ ವಡ್ಡರ, ಚಂದ್ರಪ್ಪ ಹರಿಜನ, ಶ್ರೀಕಾಂತ ಗಡ್ಡಿ, ವಕೀಲ ಹನಮಂತಪ್ಪ ಸೊಟ್ಟಪ್ಪ, ಮಲ್ಲೇಶ ಕಡಕೊಳ, ಶಿವರಾಜ ಹರಿಜನ, ಗುಡ್ಡಪ್ಪ ಬಣಕಾರ, ಸಚಿನ ಮರಿಯಣ್ಣ, ಮಂಜು ಶಿರಗುಪ್ಪಿ, ಮಾಲತೇಶ ಬಣಕಾರ, ಮೈಲಪ್ಪ ಗೊರಕ್ಕ, ಸುರೇಶ ಹಳ್ಳಳ್ಳಿ, ದ್ಯಾಮಣ್ಣ ಶಿಡ್ಲಣ್ಣ ಸೇರಿದಂತೆ ಹಲವರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...